Friday, May 22, 2026
Friday, May 22, 2026

ರಾಜ್ಯದಲ್ಲಿ ವಿದ್ಯುನ್ಮಾನ ವಲಯಕ್ಕೆ ಹೆಚ್ಚಿನ ಉತ್ತೇಜನ

Date:

ರಾಜ್ಯವು ಸಮರ್ಥವಾದ ಇ.ಎಸ್‌.ಡಿ.ಎಂ. ನೀತಿಯನ್ನು ಈಗಾಗಲೇ ಜಾರಿಗೆ ತಂದಿದೆ. ಸೆಮಿಕಂಡಕ್ಟರ್‌ ಉದ್ದಿಮೆಗಳಿಗೆ ಅಗತ್ಯ ಬಿದ್ದರೆ ಹೆಚ್ಚಿನ ಭೂಮಿಯನ್ನು ಒದಗಿಸಲು ಸಿದ್ಧ ಎಂದು ಐಟಿ ಮತ್ತು ಬಿಟಿ ಸಚಿವ ಡಾ| ಸಿ. ಎನ್‌. ಅಶ್ವತ್ಥ ನಾರಾಯಣ ಹೇಳಿದ್ದಾರೆ.

ಬೆಂಗಳೂರು ಖಾಸಗಿ ಹೊಟೇಲಿನಲ್ಲಿ ಆರಂಭವಾದ ಮೂರು ದಿನಗಳ ಪ್ರಪ್ರಥಮ “ಸೆಮಿಕಾನ್‌ ಇಂಡಿಯಾ’ ಸಮಾವೇಶದಲ್ಲಿ ಅವರು ಮಾತನಾಡಿದರು.

ಕೇಂದ್ರ ಸರಕಾರವು ಈ ಸಮಾವೇಶವನ್ನು ಬೆಂಗಳೂರಿನಲ್ಲಿ ಏರ್ಪಡಿಸುವ ಮೂಲಕ ಸಕಾರಾತ್ಮಕ ಸಂದೇಶವನ್ನು ರವಾನಿಸಿದೆ. ಸರಕಾರವು ಸ್ಥಾಪಿಸಿರುವ ಕರ್ನಾಟಕ ಡಿಜಿಟಲ್‌ ಎಕಾನಮಿ ಮಿಷನ್‌ ಉದ್ದಿಮೆಗಳಿಗೆ ನೀಡುತ್ತಿರುವ ನೆರವಿನ ವ್ಯವಸ್ಥೆ ಬೇರೆಲ್ಲೂ ಇಲ್ಲ ಎಂದರು.

ಕೇಂದ್ರ ಸರಕಾರವು ಸೆಮಿಕಂಡಕ್ಟರ್‌ ಕ್ಷೇತ್ರಕ್ಕೆ ಭಾರೀ ಉತ್ತೇಜನ ನೀಡುತ್ತಿದೆ. ರಾಜ್ಯವು ಕೂಡ ಇದೇ ಮಾದರಿಯನ್ನು ಅನುಸರಿಸುತ್ತಿದ್ದು, ವಿದ್ಯುನ್ಮಾನ ವಲಯಕ್ಕೆ ಪ್ರೋತ್ಸಾಹ ನೀಡುತ್ತಿದೆ. ದೇಶದಲ್ಲಿ ಎಲೆಕ್ಟ್ರಾನಿಕ್‌ ಡಿಸೈನ್‌ ವಲಯದಲ್ಲಿ ಶೇ.40ರಷ್ಟು ಕಂಪೆನಿಗಳು ಬೆಂಗಳೂರು ನಗರದಲ್ಲಿ ನೆಲೆಗೊಂಡಿವೆ ಎಂದು ಅವರು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Adichunchanagiri Education Trust ವೃತ್ತಿಗೆ ಗೌರವಕೊಡಿ, ಅದರಿಂದ ವ್ಯಕ್ತಿಯ ಬದುಕು ಹಸನಾಗುತ್ತದೆ : ಶ್ರೀಪ್ರಸನ್ನನಾಥಶ್ರೀ

Adichunchanagiri Education Trust ವೃತ್ತಿಗೆ ಗೌರವ ಕೊಡಿ, ಯಾವ ವ್ಯಕ್ತಿ ವೃತ್ತಿಗೆ...

B.Y. Raghavendra ಬೇಸೂರು ಅಣುಸ್ಥಾವರದ ಬಗ್ಗೆ ರಾಜ್ಯ ಸರ್ಕಾರಕ್ಕೆ ಯಾವುದೇ ಪ್ರಸ್ತಾಪ ಸಲ್ಲಿಸಿಲ್ಲ- ಬಿ.ವೈ.ರಾಘವೇಂದ್ರ

B.Y. Raghavendra ಸಾಗರ ತಾಲ್ಲೂಕಿನ ಬೇಸೂರು ಗ್ರಾಮದಲ್ಲಿ ಅಣು ವಿದ್ಯುತ್ ಸ್ಥಾವರ...

Madhu Bangarappa ಸಚಿವ ಮಧು ಬಂಗಾರಪ್ಪ ಪತ್ರಿಕಾ ಗೋಷ್ಠಿ: ನೀಟ್ ಪರೀಕ್ಷೆ ಪ್ರಸ್ತಾಪ. ಬಿಜೆಪಿ ಯವರ ವಿರುದ್ಧ ಕೆಂಡ

ಶಿವಮೊಗ್ಗದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಹತ್ವದ ಹೇಳಿಕೆ ನೀಡಿದ್ದಾರೆ.ಶಿವಮೊಗ್ಗ ಜಿಲ್ಲೆಯಲ್ಲಿ...

Madhu Bangarappa ಜೂನ್ 1. ಶಿವಮೊಗ್ಗದಲ್ಲಿ ಸಾವಿರ ಕೆಪಿಎಸ್ ಶಾಲೆಗಳಿಗೆ ಮುಖ್ಯಮಂತ್ರಿಗಳಿಂದ ಶಂಕುಸ್ಥಾಪನೆ – ಮಧು ಬಂಗಾರಪ್ಪ

Madhu Bangarappa ಬೆಲೆ ಕಟ್ಟಲಾಗದ ಗ್ಯಾರಂಟಿಯಾದ ಶಿಕ್ಷಣವನ್ನು ಇಡೀ ದೇಶಕ್ಕೇ ಮಾದರಿಯಾಗಿ...