Monday, February 16, 2026
Monday, February 16, 2026

ಗ್ರಾಪಂ ಮಟ್ಟದಲ್ಲಿ ವಿವೇಕಾನಂದ ಯುವಕ ಸಂಘ ರಚನೆ

Date:

ರಾಜ್ಯ ಸರ್ಕಾರ ಯುವ ಸಮುದಾಯಕ್ಕೆ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಲು ಮುಂದಾಗಿದೆ.

ರಾಜ್ಯದ ಪ್ರತಿ ಗ್ರಾಮಪಂಚಾಯಿತಿಗೊಂದು ಸ್ವಾಮಿ ವಿವೇಕಾನಂದ ಹೆಸರಿನ ಸಂಘಗಳನ್ನು ರೂಪಿಸಿ, ಯುವಕರ ಸ್ವಾವಲಂಬನೆ, ನಿರುದ್ಯೋಗ ನಿವಾರಣೆಗೆ ಕ್ರಮ ಕೈಗೊಳ್ಳಲು ಕ್ರೀಡಾ ಮತ್ತು ಯುವಸಬಲೀಕರಣ ಇಲಾಖೆ ಯೋಜನೆ ರೂಪಿಸಲಿದೆ ಎಂದು ತಿಳಿದುಬಂದಿದೆ.

ಈ ಕುರಿತು ಮಾಹಿತಿ ನೀಡಿರುವ ಕ್ರೀಡಾ ಸಚಿವ ನಾರಾಯಣಗೌಡ, ರಾಜ್ಯದ ಪ್ರತಿ ಗ್ರಾಮಪಂಚಾಯಿತಿಗೊಂದು ಯುವ ಸಂಘಗಳನ್ನು ಸ್ಥಾಪಿಸಿ, ಯುವಕರಿಗೆ ಅಗತ್ಯ ಸಂಪನ್ಮೂಲಗಳನ್ನು ಒದಗಿಸಿ, ಯುವಸಮುದಾಯಕ್ಕೆ ನಾಯಕತ್ವದ ಗುಣ, ನಿರುದ್ಯೋಗ ನಿವಾರಣೆಗೆ ಯೋಜನೆ ರೂಪಿಸಲು ಸಹಕಾರಿಯಾಗಲಿದೆ ಎಂದು ತಿಳಿಸಿದ್ದಾರೆ.

ಅಗತ್ಯ ಸಂಪನ್ಮೂಲ ಕ್ರೋಢೀಕರಣ ಮಾಡಿಕೊಡುವಂತೆ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಹಾಗೂ ಸಹಾಯಕ ನಿರ್ದೇಶಕರಿಗೆ ರಾಜ್ಯ ಸರ್ಕಾರ ಸೂಚನೆ ನೀಡಿದೆ.

ರಾಜ್ಯಾದ್ಯಂತ ಈಗಾಗಲೇ ಜಾರಿಯಲ್ಲಿರುವ ಯುವಸ್ಪಂದನಾ ಯೋಜನೆಯಡಿ ಈ ಸಂಘಗಳನ್ನು ರಚಿಸಿ, ಯುವಕರಿಗೆ ಅಗತ್ಯ ತರಬೇತಿ, ಆರ್ಥಿಕ ಚಟುವಟಿಕೆಗಳನ್ನು ಒದಗಿಸುವ ಹೊಣೆಗಾರಿಕೆಯನ್ನು ಸ್ಥಳೀಯ ಗ್ರಾಮ ಪಂಚಾಯಿತಿಗೆ ವಹಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಫೆಬ್ರವರಿ 18. ಶಿವಮೊಗ್ಗದ ಬೊಮ್ಮನಕಟ್ಟೆ ಎ& ಬಿ ಬ್ಲಾಕ್ ಸುತ್ತಮುತ್ತ ವಿದ್ಯುತ್ ವ್ಯತ್ಯಯ

MESCOM 11 ಕೆವಿ ಮಾರ್ಗದ ನಿರ್ವಹಣಾ ಕೆಲಸವಿರುವುದರಿಂದ ಬೊಮ್ಮನಕಟ್ಟೆ ಎ ಮತ್ತು...

S.N. Channabasappa ಬ್ರಹ್ಮಕುಮಾರಿ ಈಶ್ವರೀಯ ವಿವಿ ಮೌಲ್ಯಾಧಾರಿತ ಜೀವನವನ್ನು ಉತ್ತೇಜಿಸುತ್ತಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಸಂಸ್ಥೆಯು ವಿಶ್ವಾದ್ಯಂತ ಆಧ್ಯಾತ್ಮಿಕ ಜಾಗೃತಿ,...

ದೌರ್ಜನ್ಯ ಪ್ರತಿಬಂಧಕ ಕಾಯ್ದೆ ಬಗ್ಗೆ ವಿಚಾರಗೋಷ್ಠಿ ನಡೆಸಲು ಸಂಘಸಂಸ್ಥೆಗಳಿಂದ ಅರ್ಜಿ ಆಹ್ವಾನ

2025-26 ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ...