Sunday, September 20, 2026
Sunday, September 20, 2026

ಪ್ರೊ.ಬಿ.ತಿಪ್ಪೆಸ್ವಾಮಿ ಅವರಿಗೆ ವಿಜಿಎಸ್ ಟಿ ಶ್ರೇಷ್ಠ ಸಂಶೋಧನಾ ಪ್ರಶಸ್ತಿ

Date:

ಕುವೆಂಪು ವಿಶ್ವವಿದ್ಯಾಲಯದ ಸೂಕ್ಷ್ಮ ಜೀವಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪ್ರೊ. ಬಿ. ತಿಪ್ಪೇಸ್ವಾಮಿ ಅವರು ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ದಾರ್ಶನಿಕ ಸಮೂಹ (ವಿಜಿಎಸ್‌ಟಿ) ನೀಡುವ ಪ್ರತಿಷ್ಠಿತ ಶ್ರೇಷ್ಠ ಸಂಶೋಧನಾ ಪ್ರಕಟಣಾ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಬೆಂಗಳೂರಿನ ಜವಾಹರ್‌ಲಾಲ್ ನೆಹರು ಉನ್ನತ ವೈಜ್ಞಾನಿಕ ಸಂಶೋಧನಾ ಕೇಂದ್ರದಲ್ಲಿ ನಡೆದ ಸಮಾರಂಭದಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಸಿ. ಎನ್. ಅಶ್ವತ್ಥ್ ನಾರಾಯಣ್ ಪ್ರಶಸ್ತಿ ಪ್ರದಾನ ಮಾಡಿದರು. ವಿಜ್ಞಾನ ಮತ್ತು ತಂತ್ರಜ್ಞಾನ ವಿಷಯದಲ್ಲಿ ಜಾಗತಿಕ ಮಟ್ಟದ ಸಂಶೋಧನಾ ಲೇಖನಗಳನ್ನು ಪ್ರಕಟಿಸಿರುವುದನ್ನು ಗುರುತಿಸಿ ಇವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಈ ಸಂದರ್ಭದಲ್ಲಿ ಸಚಿವ ಅಶ್ವತ್ಥ್ ನಾರಾಯಣ್ ಮಾತನಾಡಿ, ವಿಶ್ವವಿದ್ಯಾಲಯದ ಪ್ರಾಧ್ಯಾಪಕರು ಪಠ್ಯಾಧಾರಿತ ಪಾಠ ಪ್ರವಚನಗಳ ಮೂಲಕ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುವುದರ ಜೊತೆಗೆ ಸಮಾಜಕ್ಕೆ ಉಪಯುಕ್ತವಾಗುವಂತಹ ಅನ್ವಯಿಕ ಸಂಶೋಧನೆಗಳನ್ನು ಕೈಗೊಳ್ಳಬೇಕು. ಇಂಥಹಾ ಸಮಾಜಮುಖಿ ಸಂಶೋಧನೆ ಕೈಗೊಂಡಿರುವ ಪ್ರಶಸ್ತಿ ವಿಜೇತರು ಅಭಿನಂದನಾರ್ಹರು ಎಂದರು.

ಮೂಲತಃ ಚಿತ್ರದುರ್ಗ ಜಿಲ್ಲೆಯ ನಾಯಕನಹಟ್ಟಿಯ ರಾಮಸಾಗರ ಗ್ರಾಮದ ಗುಂಡ ಬಸಯ್ಯ ಮತ್ತು ಪಾಪಮ್ಮ ಅವರ ಪುತ್ರರಾದ ಪ್ರೊ. ಬಿ. ತಿಪ್ಪೇಸ್ವಾಮಿ ಈ ಹಿಂದೆ ಯುಜಿಸಿ ನೀಡುವ ಸರ್ ಸಿ. ವಿ. ರಾಮನ್ ಪೋಸ್ಟ್ ಡಾಕ್ಟರಲ್ ಫೆಲೋಷಿಪ್ ಪಡೆದು ಅಮೆರಿಕಾದ ನಾರ್ಥ್ ಕೆರೊಲಿನಾ ಸ್ಟೇಟ್ ವಿಶ್ವವಿದ್ಯಾಲಯದಲ್ಲಿ ಉನ್ನತ ಸಂಶೋಧನೆ ಕೈಗೊಂಡಿದ್ದಾರೆ.

ಕಳೆದ 16 ವರ್ಷಗಳಿಂದ ಸ್ನಾತಕೋತ್ತರ ಸೂಕ್ಷ್ಮ ಜೀವಶಾಸ್ತ್ರ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ತಿಪ್ಪೇಸ್ವಾಮಿ ಅವರ ಸಾಧನೆ ಇತರ ಅಧ್ಯಾಪಕರಿಗೆ ಮಾದರಿಯಾಗಲಿ ಎಂದು ಕುಲಪತಿ ಪ್ರೊ. ಬಿ. ಪಿ. ವೀರಭದ್ರಪ್ಪ ಮತ್ತು ಕುಲಸಚಿವೆ ಜಿ. ಅನುರಾಧ ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...