Friday, February 6, 2026
Friday, February 6, 2026

ಹಲೋ ಕಂದಾಯ ಸಚಿವರೆ! ಸಹಾಯವಾಣಿ-ದೇಶದಲ್ಲೇ ಮೊದಲ ಪ್ರಯತ್ನ

Date:

ಕೃಷಿ ಭೂಮಿಯನ್ನು ಕೃಷಿಯೇತರ ಉದ್ದೇಶಕ್ಕೆ ಬಳಸಲು ಭೂಮಾಲೀಕರಿಗೆ 3 ದಿನದಲ್ಲಿ ಅವಕಾಶ ಕಲ್ಪಿಸಲು ಭೂ ಕಂದಾಯ ಕಾಯ್ದೆಗೆ ತಿದ್ದುಪಡಿ ಮತ್ತು ರಾಜ್ಯದ 9 ವಿವಿಧ ಮಾಸಿಕ ಪಿಂಚಣಿಗಳ ಅರ್ಹರಿಗೆ 72 ಗಂಟೆಯಲ್ಲಿ ಮನೆ ಬಾಗಿಲಿಗೆ ಪಿಂಚಣಿ ತಲುಪಿಸಲು ದೇಶದಲ್ಲಿಯೇ ಮೊದಲ ಬಾರಿಗೆ ಹಲೋ, ಕಂದಾಯ ಸಚಿವರೇ ಸಹಾಯವಾಣಿ ಕಾರ್ಯಕ್ರಮವನ್ನು ಶೀಘ್ರದಲ್ಲಿಯೇ ಅನುಷ್ಠಾನಗೊಳಿಸಲು ಸರ್ಕಾರ ತೀರ್ಮಾನಿಸಿದೆ.

ನಿನ್ನೆ ಶನಿವಾರ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಕಂದಾಯ ಸಚಿವ ಆರ್‌.ಅಶೋಕ್‌ ಅವರು, ಇಲಾಖೆಯಲ್ಲಿ ಕೈಗೊಂಡ ಸುಧಾರಣಾ ಕ್ರಮಗಳ ಕುರಿತು ವಿಸ್ತೃತವಾಗಿ ಮಾಹಿತಿ ನೀಡಿದರು.

ದೇಶದಲ್ಲಿಯೇ ಪ್ರಥಮ ಬಾರಿಗೆ ದೂರವಾಣಿ ಮೂಲಕವೇ ಪಿಂಚಣಿ ಕೋರಿಕೆ ಸ್ವೀಕರಿಸಿ 72 ಗಂಟೆಯಲ್ಲಿ ನವೋದಯ ಮೊಬೈಲ್‌ ಆ್ಯಪ್ ಆಧರಿಸಿ ಪಿಂಚಣಿ ಮಂಜೂರಾತಿ ಮಾಡುವ ವಿನೂತನ ಕಾಗದ ರಹಿತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಮುಖ್ಯಮಂತ್ರಿಗಳು ಶೀಘ್ರದಲ್ಲಿಯೇ ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರಲಿದೆ. ಆ ಸಮಯದಲ್ಲಿ ಸಹಾಯವಾಣಿ ಸಂಖ್ಯೆಯನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ಹೇಳಿದರು.

ಕುಟುಂಬದ ವಾರ್ಷಿಕ ಆದಾಯ 32 ಸಾವಿರ ರೂ.ಗಿಂತ ಕಡಿಮೆ ಇರುವ ವೃದ್ಧರು, ಅಂಗವಿಕಲರು, ವಿಧವೆಯರು ಮತ್ತು ಅವಿವಾಹಿತ ಅಥವಾ ವಿಚ್ಛೇದಿತ ಮಹಿಳೆಯರು ಮಾಸಿಕ ಪಿಂಚಣಿ ಸೌಲಭ್ಯಕ್ಕಾಗಿ ದೂರವಾಣಿ ಮೂಲಕ ಕೋರಿಕೆ ಸಲ್ಲಿಸಬಹುದು. ಆಧಾರ್‌ ಸಂಖ್ಯೆ ಒದಗಿಸಿ ಪಿಂಚಣಿ ಸೌಲಭ್ಯಕ್ಕೆ ಮನವಿ ಮಾಡಬಹುದಾಗಿದೆ. ದೂರವಾಣಿ ಮೂಲಕ ಸ್ವೀಕರಿಸಲಾದ ಕೋರಿಕೆ ಮೇರೆಗೆ ಗ್ರಾಮ ಲೆಕ್ಕಾಧಿಕಾರಿಗಳು ಅರ್ಜಿದಾರರ ಮನೆಬಾಗಿಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ನವೋದಯ ಮೊಬೈಲ್‌ ಆ್ಯಪ್ ಮೂಲಕ ಅರ್ಜಿದಾರರ ಮಾಹಿತಿ ನಮೂದಿಸುತ್ತಾರೆ. ಅರ್ಜಿದಾರರು ಕಡ್ಡಾಯವಾಗಿ ಆಧಾರ್‌ ಕಾರ್ಡ್‌, ಬ್ಯಾಂಕ್ ಅಥವಾ ಅಂಚೆ ಖಾತೆ ವಿವರ, ವಿಳಾಸ ಮತ್ತು ವಯಸ್ಸಿಗೆ ಸಂಬಂಧಿಸಿದ ದಾಖಲಾತಿಗಳನ್ನು ಒದಗಿಸಬೇಕು. ಅರ್ಹರಿಗೆ 72 ಗಂಟೆಯೊಳಗೆ ಉಪತಹಸೀಲ್ದಾರರಿಂದ ಪಿಂಚಣಿ ಮಂಜೂರಾತಿ ಅನುಮೋದನೆ ನೀಡಲಾಗುತ್ತದೆ ಎಂದು ವಿವರಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...