Sunday, March 29, 2026
Sunday, March 29, 2026

ಪಾಕ್ ನಲ್ಲಿ ಉನ್ನತ ವ್ಯಾಸಂಗ: ಭಾರತದಲ್ಲಿ ಅಮಾನ್ಯ

Date:

ಪಾಕಿಸ್ತಾನದಲ್ಲಿ ಉನ್ನತ ವ್ಯಾಸಂಗ ಪಡೆದರೆ ಭಾರತದಲ್ಲಿ ಮಾನ್ಯತೆ ಸಿಗುವುದಿಲ್ಲ ಎಂದು ಯುಜಿಸಿ ಇತ್ತೀಚೆಗಷ್ಟೇ ನಿಯಮ ಹೊರಡಿಸಿದ ಬೆನ್ನಲ್ಲೇ ಇದೀಗ ಭಾರತೀಯ ವೈದ್ಯಕೀಯ ಮಂಡಳಿಯೂ ಅಂತಹುದೇ ನಿಯಮ ಜಾರಿಗೊಳಿಲು ಮುಂದಾಗಿದೆ.

ಪಾಕಿಸ್ಥಾನದಲ್ಲಿ ಪಡೆದಿರುವ ಎಂಬಿಬಿಎಸ್‌ ಅಥವಾ ದಂತ ವೈದ್ಯ ಪದವಿಗಳಿಗೆ ಭಾರತದಲ್ಲಿ ಮಾನ್ಯತೆ ಸಿಗುವುದಿಲ್ಲ. ಅಲ್ಲದೆ, ಪಾಕ್‌ನ ವೈದ್ಯ ಶಿಕ್ಷಣ ಸಂಸ್ಥೆಗಳಿಂದ ವೈದ್ಯ ಪದವೀಧರರಾಗುವ ಭಾರತೀಯರಿಗೆ ಅಥವಾ ಅನಿವಾಸಿ ಭಾರತೀಯರಿಗೆ ಭಾರತದ ಯಾವುದೇ ಕಡೆಗಳಲ್ಲಿಯೂ ವೈದ್ಯ ವೃತ್ತಿ ನಿರ್ವಹಿಸಲು ಅವಕಾಶ ನೀಡುವುದಿಲ್ಲ ಎಂದು ಭಾರತೀಯ ವೈದ್ಯ ಕೀಯ ಮಂಡಳಿ ಅಧಿಸೂಚನೆ ಹೊರಡಿಸಿದೆ.

ಪಾಕ್‌ನಲ್ಲಿ ಪಡೆದ ಎಂಬಿಬಿಎಸ್ ಅಥವಾ ದಂತ ವೈದ್ಯ ಪದವಿಗೆ ಭಾರತದಲ್ಲಿ ಮಾನ್ಯತೆ ಇಲ್ಲ ಎಂದು ಮಂಡಳಿ ಹೇಳಿದೆ.

ಆದರೆ ಭಾರತೀಯ ವಿದೇಶಾಂಗ ಇಲಾಖೆಯ ಒಪ್ಪಿಗೆ ಮೇರೆಗೆ 2018ರ ಡಿಸೆಂಬರ್‌ಗೂ ಮೊದಲು ಹಾಗೂ ನಂತರ ಪಾಕಿಸ್ಥಾನದಲ್ಲಿ ವೈದ್ಯ ವ್ಯಾಸಂಗ ಮಾಡಿರುವ ವಿದ್ಯಾರ್ಥಿಗಗೆ ಹೊಸ ಅಧಿಸೂಚನೆಯಿಂದ ವಿನಾಯಿತಿ ಕಲ್ಪಿಸಲಾಗಿದೆ ಎಂದು ತಿಳಿದುಬಂದಿದೆ.

ಒಂದು ವೇಳೆ ಪಾಕ್‌ನಲ್ಲಿ ವೈದ್ಯ ಪದವಿ ಪಡೆದು ಬಳಿಕ ಭಾರತ ಸರ್ಕಾರದ ಮಾನ್ಯತೆಯೊಂದಿಗೆ ಭಾರತಕ್ಕೆ ವಲಸೆ ಬಂದಿರವ ವ್ಯಕ್ತಿಗಳಿಗೆ ಕೂಡಾ ನಿಯಮದಿಂದ ವಿನಾಯಿತಿ ಇದೆ ಎಂದು ಮಂಡಳಿ ತಿಳಿಸಿದೆ.

ಪಾಕ್‌ನಲ್ಲಿ ಉನ್ನತ ವ್ಯಾಸಂಗಕ್ಕೆ ತೆರಳುವ ವಿದ್ಯಾರ್ಥಿಗಳ ಯಾವುದೇ ಪದವಿ, ಇಂಜಿನಿಯರಿಂಗ್ ಪದವಿಗೆ ಭಾರತದಲ್ಲಿ ಮಾನ್ಯತೆ ಕಲ್ಪಿಸುವುದಿಲ್ಲ ಹಾಗೂ ಇಲ್ಲಿ ಅಂತಹವರಿಗೆ ಉದ್ಯೋಗ ನಿರ್ವಹಿಸಲು ಅವಕಾಶವಿಲ್ಲ ಎಂಬುದಾಗಿ ಇತ್ತೀಚೆಗಷ್ಟೇ ವಿಶ್ವವಿದ್ಯಾನಿಲಯಗಳ ಧನಸಹಾಯ ಆಯೋಗ (ಯುಜಿಸಿ) ಹಾಗೂ ಭಾರತೀಯ ತಾಂತ್ರಿಕ ಶಿಕ್ಷಣ ಮಂಡಳಿ (ಎಐಸಿಟಿಇ) ಅಧಿಸೂಚನೆ ಹೊರಡಿಸಿದ್ದವು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kote SeethaRamanjaneya Temple ವೈಭವದಿಂದ ನಡೆದ ಶ್ರೀಆಂಜನೇಯಸ್ವಾಮಿ ರಥೋತ್ಸವ

Kote SeethaRamanjaneya Temple ಪುರಾತನವಾದ ಶ್ರೀ ಆಂಜನೇಯ ಸ್ವಾಮಿ ಸನ್ನಿಧಿಯಲ್ಲಿ ಪ್ರತಿವರ್ಷದಂತೆ...

Department of Kannada and Culture ಶ್ರೀಅಗ್ನಿಬನ್ನಿರಾಯಸ್ವಾಮಿಯವರ ಇತಿಹಾಸವನ್ನ ನಾವೆಲ್ಲಾ ತಿಳಿದುಕೊಳ್ಳಬೇಕು- ಆನಂದ್.

Department of Kannada and Culture ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು...

Rotary Club Shimoga ಚಿನ್ನ,ಬೆಳ್ಳಿ ಧಾರಣೆ ವ್ಯತ್ಯಾಸಕ್ಕೆ ಜಾಗತಿಕ ಸಮಸ್ಯೆಗಳೇ ಕಾರಣ- ಸೆಂಥಿಲ್ ವೆಲನ್.

Rotary Club Shimoga ಚಿನ್ನ ಮತ್ತು ಬೆಳ್ಳಿ ಕಷ್ಟಕಾಲದಲ್ಲಿ ಅಪತ್ಬಾಂದವ ರೀತಿಯಲ್ಲಿ ವರ್ತಿಸುತ್ತದೆ....

S. N. Channabasappa ಮಾದಕ ದ್ಯವ್ಯ ವ್ಯಸನ ವಿರೋಧಿ ಕ್ರಮಗಳಿಗೆ ವಿಶೇಷ ಕಾರ್ಯಪಡೆ ರಚನೆ ಮಾಡಿ- ಎಸ್.ಎನ್.ಚನ್ನಬಸಪ್ಪ.

S. N. Channabasappa ರಾಜ್ಯದಲ್ಲಿ ಹೆಚ್ಚುತ್ತಿರುವ ಅಪರಾಧ ಕೃತ್ಯಗಳು ಮತ್ತು ಮಾದಕ...