Friday, May 22, 2026
Friday, May 22, 2026

ಪಾಕ್ ನಲ್ಲಿ ಉನ್ನತ ವ್ಯಾಸಂಗ: ಭಾರತದಲ್ಲಿ ಅಮಾನ್ಯ

Date:

ಪಾಕಿಸ್ತಾನದಲ್ಲಿ ಉನ್ನತ ವ್ಯಾಸಂಗ ಪಡೆದರೆ ಭಾರತದಲ್ಲಿ ಮಾನ್ಯತೆ ಸಿಗುವುದಿಲ್ಲ ಎಂದು ಯುಜಿಸಿ ಇತ್ತೀಚೆಗಷ್ಟೇ ನಿಯಮ ಹೊರಡಿಸಿದ ಬೆನ್ನಲ್ಲೇ ಇದೀಗ ಭಾರತೀಯ ವೈದ್ಯಕೀಯ ಮಂಡಳಿಯೂ ಅಂತಹುದೇ ನಿಯಮ ಜಾರಿಗೊಳಿಲು ಮುಂದಾಗಿದೆ.

ಪಾಕಿಸ್ಥಾನದಲ್ಲಿ ಪಡೆದಿರುವ ಎಂಬಿಬಿಎಸ್‌ ಅಥವಾ ದಂತ ವೈದ್ಯ ಪದವಿಗಳಿಗೆ ಭಾರತದಲ್ಲಿ ಮಾನ್ಯತೆ ಸಿಗುವುದಿಲ್ಲ. ಅಲ್ಲದೆ, ಪಾಕ್‌ನ ವೈದ್ಯ ಶಿಕ್ಷಣ ಸಂಸ್ಥೆಗಳಿಂದ ವೈದ್ಯ ಪದವೀಧರರಾಗುವ ಭಾರತೀಯರಿಗೆ ಅಥವಾ ಅನಿವಾಸಿ ಭಾರತೀಯರಿಗೆ ಭಾರತದ ಯಾವುದೇ ಕಡೆಗಳಲ್ಲಿಯೂ ವೈದ್ಯ ವೃತ್ತಿ ನಿರ್ವಹಿಸಲು ಅವಕಾಶ ನೀಡುವುದಿಲ್ಲ ಎಂದು ಭಾರತೀಯ ವೈದ್ಯ ಕೀಯ ಮಂಡಳಿ ಅಧಿಸೂಚನೆ ಹೊರಡಿಸಿದೆ.

ಪಾಕ್‌ನಲ್ಲಿ ಪಡೆದ ಎಂಬಿಬಿಎಸ್ ಅಥವಾ ದಂತ ವೈದ್ಯ ಪದವಿಗೆ ಭಾರತದಲ್ಲಿ ಮಾನ್ಯತೆ ಇಲ್ಲ ಎಂದು ಮಂಡಳಿ ಹೇಳಿದೆ.

ಆದರೆ ಭಾರತೀಯ ವಿದೇಶಾಂಗ ಇಲಾಖೆಯ ಒಪ್ಪಿಗೆ ಮೇರೆಗೆ 2018ರ ಡಿಸೆಂಬರ್‌ಗೂ ಮೊದಲು ಹಾಗೂ ನಂತರ ಪಾಕಿಸ್ಥಾನದಲ್ಲಿ ವೈದ್ಯ ವ್ಯಾಸಂಗ ಮಾಡಿರುವ ವಿದ್ಯಾರ್ಥಿಗಗೆ ಹೊಸ ಅಧಿಸೂಚನೆಯಿಂದ ವಿನಾಯಿತಿ ಕಲ್ಪಿಸಲಾಗಿದೆ ಎಂದು ತಿಳಿದುಬಂದಿದೆ.

ಒಂದು ವೇಳೆ ಪಾಕ್‌ನಲ್ಲಿ ವೈದ್ಯ ಪದವಿ ಪಡೆದು ಬಳಿಕ ಭಾರತ ಸರ್ಕಾರದ ಮಾನ್ಯತೆಯೊಂದಿಗೆ ಭಾರತಕ್ಕೆ ವಲಸೆ ಬಂದಿರವ ವ್ಯಕ್ತಿಗಳಿಗೆ ಕೂಡಾ ನಿಯಮದಿಂದ ವಿನಾಯಿತಿ ಇದೆ ಎಂದು ಮಂಡಳಿ ತಿಳಿಸಿದೆ.

ಪಾಕ್‌ನಲ್ಲಿ ಉನ್ನತ ವ್ಯಾಸಂಗಕ್ಕೆ ತೆರಳುವ ವಿದ್ಯಾರ್ಥಿಗಳ ಯಾವುದೇ ಪದವಿ, ಇಂಜಿನಿಯರಿಂಗ್ ಪದವಿಗೆ ಭಾರತದಲ್ಲಿ ಮಾನ್ಯತೆ ಕಲ್ಪಿಸುವುದಿಲ್ಲ ಹಾಗೂ ಇಲ್ಲಿ ಅಂತಹವರಿಗೆ ಉದ್ಯೋಗ ನಿರ್ವಹಿಸಲು ಅವಕಾಶವಿಲ್ಲ ಎಂಬುದಾಗಿ ಇತ್ತೀಚೆಗಷ್ಟೇ ವಿಶ್ವವಿದ್ಯಾನಿಲಯಗಳ ಧನಸಹಾಯ ಆಯೋಗ (ಯುಜಿಸಿ) ಹಾಗೂ ಭಾರತೀಯ ತಾಂತ್ರಿಕ ಶಿಕ್ಷಣ ಮಂಡಳಿ (ಎಐಸಿಟಿಇ) ಅಧಿಸೂಚನೆ ಹೊರಡಿಸಿದ್ದವು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Adichunchanagiri Education Trust ವೃತ್ತಿಗೆ ಗೌರವಕೊಡಿ, ಅದರಿಂದ ವ್ಯಕ್ತಿಯ ಬದುಕು ಹಸನಾಗುತ್ತದೆ : ಶ್ರೀಪ್ರಸನ್ನನಾಥಶ್ರೀ

Adichunchanagiri Education Trust ವೃತ್ತಿಗೆ ಗೌರವ ಕೊಡಿ, ಯಾವ ವ್ಯಕ್ತಿ ವೃತ್ತಿಗೆ...

B.Y. Raghavendra ಬೇಸೂರು ಅಣುಸ್ಥಾವರದ ಬಗ್ಗೆ ರಾಜ್ಯ ಸರ್ಕಾರಕ್ಕೆ ಯಾವುದೇ ಪ್ರಸ್ತಾಪ ಸಲ್ಲಿಸಿಲ್ಲ- ಬಿ.ವೈ.ರಾಘವೇಂದ್ರ

B.Y. Raghavendra ಸಾಗರ ತಾಲ್ಲೂಕಿನ ಬೇಸೂರು ಗ್ರಾಮದಲ್ಲಿ ಅಣು ವಿದ್ಯುತ್ ಸ್ಥಾವರ...

Madhu Bangarappa ಸಚಿವ ಮಧು ಬಂಗಾರಪ್ಪ ಪತ್ರಿಕಾ ಗೋಷ್ಠಿ: ನೀಟ್ ಪರೀಕ್ಷೆ ಪ್ರಸ್ತಾಪ. ಬಿಜೆಪಿ ಯವರ ವಿರುದ್ಧ ಕೆಂಡ

ಶಿವಮೊಗ್ಗದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಹತ್ವದ ಹೇಳಿಕೆ ನೀಡಿದ್ದಾರೆ.ಶಿವಮೊಗ್ಗ ಜಿಲ್ಲೆಯಲ್ಲಿ...

Madhu Bangarappa ಜೂನ್ 1. ಶಿವಮೊಗ್ಗದಲ್ಲಿ ಸಾವಿರ ಕೆಪಿಎಸ್ ಶಾಲೆಗಳಿಗೆ ಮುಖ್ಯಮಂತ್ರಿಗಳಿಂದ ಶಂಕುಸ್ಥಾಪನೆ – ಮಧು ಬಂಗಾರಪ್ಪ

Madhu Bangarappa ಬೆಲೆ ಕಟ್ಟಲಾಗದ ಗ್ಯಾರಂಟಿಯಾದ ಶಿಕ್ಷಣವನ್ನು ಇಡೀ ದೇಶಕ್ಕೇ ಮಾದರಿಯಾಗಿ...