Saturday, December 13, 2025
Saturday, December 13, 2025

ಸದ್ಯ ಕಲ್ಲಿದ್ದಲು ಸಮಸ್ಯೆ ಇಲ್ಲ- ಸಚಿವ ಜೋಷಿ

Date:

ದೇಶದಲ್ಲಿ ಕಲ್ಲಿದ್ದಲು ಸಮಸ್ಯೆಯಾಗಲ್ಲ. 10 ದಿನಗಳಿಗಾಗುವಷ್ಟು ಕಲ್ಲಿದ್ದಲು ದಾಸ್ತಾನಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ್‌ ಜೋಶಿ ಹೇಳಿದರು.

ಹುಬ್ಬಳ್ಳಿ ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, 10 ದಿನಗಳ ನಂತರ ದೇಶ ಸಂಪೂರ್ಣ ಕತ್ತಲಾಗುತ್ತದೆ ಎನ್ನುವ ರೀತಿಯಲ್ಲಿ ಕೆಲವರು ಮಾತನಾಡುತ್ತಿದ್ದಾರೆ. ಅದು ಸರಿಯಲ್ಲ. ಕೇಂದ್ರ ಸರ್ಕಾರ ನಿರಂತರವಾಗಿ ಪ್ರತಿದಿನ 1.07 ಮಿಲಿಯನ್‌ ಟನ್‌ ಕಲ್ಲಿದ್ದಲು ಪೂರೈಕೆ ಮಾಡುತ್ತಿದೆ.

ಬೇಡಿಕೆ ಒಮ್ಮೇಲೆ ಹೆಚ್ಚಾಗಿದ್ದರಿಂದ ಸಾಗಾಟ ಮಾಡಲು ರೈಲ್ವೆ ಇಲಾಖೆ ಸಹ ಹಲವಾರು ಕ್ರಮಗಳನ್ನು ಕೈಗೊಂಡಿದೆ. ಖಾಲಿಯಾದಷ್ಟುಕಲ್ಲಿದ್ದಲನ್ನು ನಿರಂತರವಾಗಿ ತುಂಬಿಸುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡುತ್ತಿದೆ. ಕಲ್ಲಿದ್ದಲಿನ ಸಮಸ್ಯೆಯಾಗದಂತೆ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ. ಯಾರೂ ಗಾಬರಿ ಪಡುವ ಅಗತ್ಯವಿಲ್ಲ ಎಂದು ಭರವಸೆ ನೀಡಿದರು.

ದೇಶದ ಥರ್ಮಲ್‌ ಪವರ್‌ ಪ್ಲಾಂಟ್‌ಗಳಲ್ಲಿ 21.55 ಮಿಲಿಯನ್‌ ಟನ್‌ ಕಲ್ಲಿದ್ದಲು ದಾಸ್ತಾನಿದೆ. ಕೋಲ್‌ ಕಂಪನಿಗಳಲ್ಲಿ 72.05 ಮಿಲಿಯನ್‌ ಟನ್‌ ಕಲ್ಲಿದ್ದಲು ಸಂಗ್ರಹವಿದೆ. ಯಾರೂ ಗಾಬರಿಯಾಗುವ ಅಗತ್ಯವಿಲ್ಲ ಎಂದರು.
ಈ ತಿಂಗಳು ಅನಿರೀಕ್ಷಿತವಾಗಿ ಬಿಸಿಲು ಹೆಚ್ಚಿದ್ದು, ವಿದ್ಯುತ್‌ಗೆ ಅತಿ ಹೆಚ್ಚು ಬೇಡಿಕೆ ಉಂಟಾಗಿದೆ. ದೇಶದ ಕೈಗಾರಿಕೆಗಳು ಸಹ ಪುಟಿದೆದ್ದಿವೆ. ಹೀಗಾಗಿ ಒಮ್ಮೇಲೆ ವಿದ್ಯುತ್‌ಗೆ ಬೇಡಿಕೆ ಹೆಚ್ಚಿದೆ. ದೂರದೂರದ ಪವರ್‌ ಪ್ಲಾಂಟ್‌ಗಳಲ್ಲಿ ಹತ್ತು ದಿನಕ್ಕಾಗುವಷ್ಟುಕಲ್ಲಿದ್ದಲು ಸಂಗ್ರಹವಿದೆ ಎಂದು ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Visvesvaraya Technological University ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆಗೆ ವಿಶೇಷ ಕಾರ್ಯಾಗಾರ

Visvesvaraya Technological University ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ "ಜ್ಞಾನ...

B.Y. Raghavendra ಶಿವಮೊಗ್ಗದಲ್ಲಿ ESIC ಉಪ-ಪ್ರಾದೇಶಿಕ ಕಚೇರಿ ಸ್ಥಾಪನೆಗೆ ಬಿ.ವೈ.ರಾಘವೇಂದ್ರ ಮನವಿ

B.Y. Raghavendra ಕೇಂದ್ರ ಕಾರ್ಮಿಕ ಹಾಗೂ ಉದ್ಯೋಗ ಸಚಿವರಾದ ಸನ್ಮಾನ್ಯ ಡಾ....

CM Siddharamaih ವಿವಿಧ ರೈತ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಸಭೆ

CM Siddharamaih ಸುವರ್ಣ ವಿಧಾನಸೌಧದಲ್ಲಿ ವಿವಿಧ ರೈತ ಸಂಘಟನೆಗಳ ಪ್ರತಿನಿಧಿಗಳೊಂದಿಗೆ...