Friday, May 22, 2026
Friday, May 22, 2026

ಸದ್ಯ ಕಲ್ಲಿದ್ದಲು ಸಮಸ್ಯೆ ಇಲ್ಲ- ಸಚಿವ ಜೋಷಿ

Date:

ದೇಶದಲ್ಲಿ ಕಲ್ಲಿದ್ದಲು ಸಮಸ್ಯೆಯಾಗಲ್ಲ. 10 ದಿನಗಳಿಗಾಗುವಷ್ಟು ಕಲ್ಲಿದ್ದಲು ದಾಸ್ತಾನಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ್‌ ಜೋಶಿ ಹೇಳಿದರು.

ಹುಬ್ಬಳ್ಳಿ ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, 10 ದಿನಗಳ ನಂತರ ದೇಶ ಸಂಪೂರ್ಣ ಕತ್ತಲಾಗುತ್ತದೆ ಎನ್ನುವ ರೀತಿಯಲ್ಲಿ ಕೆಲವರು ಮಾತನಾಡುತ್ತಿದ್ದಾರೆ. ಅದು ಸರಿಯಲ್ಲ. ಕೇಂದ್ರ ಸರ್ಕಾರ ನಿರಂತರವಾಗಿ ಪ್ರತಿದಿನ 1.07 ಮಿಲಿಯನ್‌ ಟನ್‌ ಕಲ್ಲಿದ್ದಲು ಪೂರೈಕೆ ಮಾಡುತ್ತಿದೆ.

ಬೇಡಿಕೆ ಒಮ್ಮೇಲೆ ಹೆಚ್ಚಾಗಿದ್ದರಿಂದ ಸಾಗಾಟ ಮಾಡಲು ರೈಲ್ವೆ ಇಲಾಖೆ ಸಹ ಹಲವಾರು ಕ್ರಮಗಳನ್ನು ಕೈಗೊಂಡಿದೆ. ಖಾಲಿಯಾದಷ್ಟುಕಲ್ಲಿದ್ದಲನ್ನು ನಿರಂತರವಾಗಿ ತುಂಬಿಸುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡುತ್ತಿದೆ. ಕಲ್ಲಿದ್ದಲಿನ ಸಮಸ್ಯೆಯಾಗದಂತೆ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ. ಯಾರೂ ಗಾಬರಿ ಪಡುವ ಅಗತ್ಯವಿಲ್ಲ ಎಂದು ಭರವಸೆ ನೀಡಿದರು.

ದೇಶದ ಥರ್ಮಲ್‌ ಪವರ್‌ ಪ್ಲಾಂಟ್‌ಗಳಲ್ಲಿ 21.55 ಮಿಲಿಯನ್‌ ಟನ್‌ ಕಲ್ಲಿದ್ದಲು ದಾಸ್ತಾನಿದೆ. ಕೋಲ್‌ ಕಂಪನಿಗಳಲ್ಲಿ 72.05 ಮಿಲಿಯನ್‌ ಟನ್‌ ಕಲ್ಲಿದ್ದಲು ಸಂಗ್ರಹವಿದೆ. ಯಾರೂ ಗಾಬರಿಯಾಗುವ ಅಗತ್ಯವಿಲ್ಲ ಎಂದರು.
ಈ ತಿಂಗಳು ಅನಿರೀಕ್ಷಿತವಾಗಿ ಬಿಸಿಲು ಹೆಚ್ಚಿದ್ದು, ವಿದ್ಯುತ್‌ಗೆ ಅತಿ ಹೆಚ್ಚು ಬೇಡಿಕೆ ಉಂಟಾಗಿದೆ. ದೇಶದ ಕೈಗಾರಿಕೆಗಳು ಸಹ ಪುಟಿದೆದ್ದಿವೆ. ಹೀಗಾಗಿ ಒಮ್ಮೇಲೆ ವಿದ್ಯುತ್‌ಗೆ ಬೇಡಿಕೆ ಹೆಚ್ಚಿದೆ. ದೂರದೂರದ ಪವರ್‌ ಪ್ಲಾಂಟ್‌ಗಳಲ್ಲಿ ಹತ್ತು ದಿನಕ್ಕಾಗುವಷ್ಟುಕಲ್ಲಿದ್ದಲು ಸಂಗ್ರಹವಿದೆ ಎಂದು ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಅನಾಮಧೇಯ ಶವದ ವಾರಸುದಾರರ ಪತ್ತೆಗೆ ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಠಾಣೆ ಪ್ರಕಟಣೆ

Shivamogga Police ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಬಸ್...

Madhu Bangarappa ಬೇಸೂರಿನಲ್ಲಿ ಅಣುಸ್ಥಾವರ ಆಗಲು ನಾವು ಬಿಡುವುದಿಲ್ಲ- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ‌ ಬೇಸೂರು ಗ್ರಾಮದಲ್ಲಿ ಅಣುಸ್ಥಾವರ...

Adichunchanagiri Education Trust ವೃತ್ತಿಗೆ ಗೌರವಕೊಡಿ, ಅದರಿಂದ ವ್ಯಕ್ತಿಯ ಬದುಕು ಹಸನಾಗುತ್ತದೆ : ಶ್ರೀಪ್ರಸನ್ನನಾಥಶ್ರೀ

Adichunchanagiri Education Trust ವೃತ್ತಿಗೆ ಗೌರವ ಕೊಡಿ, ಯಾವ ವ್ಯಕ್ತಿ ವೃತ್ತಿಗೆ...