Sunday, June 7, 2026
Sunday, June 7, 2026

ಸದ್ಯ ಕಲ್ಲಿದ್ದಲು ಸಮಸ್ಯೆ ಇಲ್ಲ- ಸಚಿವ ಜೋಷಿ

Date:

ದೇಶದಲ್ಲಿ ಕಲ್ಲಿದ್ದಲು ಸಮಸ್ಯೆಯಾಗಲ್ಲ. 10 ದಿನಗಳಿಗಾಗುವಷ್ಟು ಕಲ್ಲಿದ್ದಲು ದಾಸ್ತಾನಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ್‌ ಜೋಶಿ ಹೇಳಿದರು.

ಹುಬ್ಬಳ್ಳಿ ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, 10 ದಿನಗಳ ನಂತರ ದೇಶ ಸಂಪೂರ್ಣ ಕತ್ತಲಾಗುತ್ತದೆ ಎನ್ನುವ ರೀತಿಯಲ್ಲಿ ಕೆಲವರು ಮಾತನಾಡುತ್ತಿದ್ದಾರೆ. ಅದು ಸರಿಯಲ್ಲ. ಕೇಂದ್ರ ಸರ್ಕಾರ ನಿರಂತರವಾಗಿ ಪ್ರತಿದಿನ 1.07 ಮಿಲಿಯನ್‌ ಟನ್‌ ಕಲ್ಲಿದ್ದಲು ಪೂರೈಕೆ ಮಾಡುತ್ತಿದೆ.

ಬೇಡಿಕೆ ಒಮ್ಮೇಲೆ ಹೆಚ್ಚಾಗಿದ್ದರಿಂದ ಸಾಗಾಟ ಮಾಡಲು ರೈಲ್ವೆ ಇಲಾಖೆ ಸಹ ಹಲವಾರು ಕ್ರಮಗಳನ್ನು ಕೈಗೊಂಡಿದೆ. ಖಾಲಿಯಾದಷ್ಟುಕಲ್ಲಿದ್ದಲನ್ನು ನಿರಂತರವಾಗಿ ತುಂಬಿಸುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡುತ್ತಿದೆ. ಕಲ್ಲಿದ್ದಲಿನ ಸಮಸ್ಯೆಯಾಗದಂತೆ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ. ಯಾರೂ ಗಾಬರಿ ಪಡುವ ಅಗತ್ಯವಿಲ್ಲ ಎಂದು ಭರವಸೆ ನೀಡಿದರು.

ದೇಶದ ಥರ್ಮಲ್‌ ಪವರ್‌ ಪ್ಲಾಂಟ್‌ಗಳಲ್ಲಿ 21.55 ಮಿಲಿಯನ್‌ ಟನ್‌ ಕಲ್ಲಿದ್ದಲು ದಾಸ್ತಾನಿದೆ. ಕೋಲ್‌ ಕಂಪನಿಗಳಲ್ಲಿ 72.05 ಮಿಲಿಯನ್‌ ಟನ್‌ ಕಲ್ಲಿದ್ದಲು ಸಂಗ್ರಹವಿದೆ. ಯಾರೂ ಗಾಬರಿಯಾಗುವ ಅಗತ್ಯವಿಲ್ಲ ಎಂದರು.
ಈ ತಿಂಗಳು ಅನಿರೀಕ್ಷಿತವಾಗಿ ಬಿಸಿಲು ಹೆಚ್ಚಿದ್ದು, ವಿದ್ಯುತ್‌ಗೆ ಅತಿ ಹೆಚ್ಚು ಬೇಡಿಕೆ ಉಂಟಾಗಿದೆ. ದೇಶದ ಕೈಗಾರಿಕೆಗಳು ಸಹ ಪುಟಿದೆದ್ದಿವೆ. ಹೀಗಾಗಿ ಒಮ್ಮೇಲೆ ವಿದ್ಯುತ್‌ಗೆ ಬೇಡಿಕೆ ಹೆಚ್ಚಿದೆ. ದೂರದೂರದ ಪವರ್‌ ಪ್ಲಾಂಟ್‌ಗಳಲ್ಲಿ ಹತ್ತು ದಿನಕ್ಕಾಗುವಷ್ಟುಕಲ್ಲಿದ್ದಲು ಸಂಗ್ರಹವಿದೆ ಎಂದು ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Akashavani Bhadravati ಜೂನ್ ತಿಂಗಳ ಪ್ರತೀ ಭಾನುವಾರ ಆಕಾಶವಾಣಿ ಭದ್ರಾವತಿ ಕೇಂದ್ರದ ಮೂಲಕ ” ಜೈಲು ಹಕ್ಕಿಗಳ ಗಾನಸುಧೆ” ಆಲಿಸಿ.

Akashavani Bhadravati ಭದ್ರಾವತಿ ಆಕಾಶವಾಣಿಯಲ್ಲಿ ಜೂನ್ 2026ರ ಪ್ರತಿ ಭಾನುವಾರ ಸಂಜೆ 4.00...

DK Shivakumar ಕೆಂಪೇಗೌಡ ದಿನಾಚರಣೆಯಂದು 15 ಲಕ್ಷ ಸಸಿನೆಡುವ ವಿಶೇಷ ಕಾರ್ಯಕ್ರಮ- ಸೀಎಂ ಡಿ.ಕೆ.ಶಿವಕುಮಾರ್

DK Shivakumar ಎಲ್ಲರೂ ಪರಿಸರವನ್ನು ಕಾಪಾಡುವ ಮೂಲಕ ರಾಜ್ಯವನ್ನು ಹಸಿರಾಗಿಸಬೇಕು. ಪ್ರತಿ ಮನೆಯಲ್ಲಿ...

World Environment Day ಪರಿಸರ ಮಾಲಿನ್ಯ ರಕ್ಷಣೆಗೆ ಕೃತಕ‌ ಬುದ್ಧಿಮತ್ತೆ ಬಳಕೆ ಅಗತ್ಯ- ಜಿ.ಎ.ಹಿರೇಮಠ್.

World Environment Day ಪರಿಸರ ಮಾಲಿನ್ಯದ ಮೂಲಗಳನ್ನು ಪತ್ತೆ ಹಚ್ಚಲು ಹಾಗೂ ನೈಜ,...