Monday, December 15, 2025
Monday, December 15, 2025

ಅಂಕಪಟ್ಟಿಯಲ್ಲಿ ಖಾತೆ ತೆರೆದ ಮುಂಬೈ

Date:

ಐಪಿಎಲ್ 15ನೇ ಆವೃತ್ತಿಯಲ್ಲಿ ಮುಂಬೈ ಇಂಡಿಯನ್ಸ್ ತಂಡ ಕೊನೆಗೂ ಗೆಲುವಿನ ಮುಖ ನೋಡಿತು. ಸತತ ಎಂಟು ಸೋಲುಗಳ ನಂಟು ತೊರೆದ ರೋಹಿತ್ ಶರ್ಮಾ ಬಳಗ, ನಿನ್ನೆ ಶನಿವಾರದ ಡಬಲ್ ಹೆಡರ್ ನ ಎರಡನೇ ಪಂದ್ಯದಲ್ಲಿ ರಾಜಸ್ತಾನ ರಾಯಲ್ಸ್ ವಿರುದ್ಧ 5 ವಿಕೆಟ್ ಗಳ ಜಯ ಸಾಧಿಸಿ 2 ಅಂಕ ಸಂಪಾದಿಸಿ ಅಂಕಪಟ್ಟಿಯಲ್ಲಿ ಖಾತೆ ತೆರೆದಿದೆ.

ಈಗಾಗಲೇ ಪ್ಲೇಆಫ್ ಅವಕಾಶ ಕಳೆದುಕೊಂಡಿರುವ ಮುಂಬೈ ಇಂಡಿಯನ್ಸ್ ಗೆ ಜಯದ ನೆಮ್ಮದಿ ಲಭಿಸಿದ್ದು ಬಿಟ್ಟರೆ ಹೆಚ್ಚಿನ ಲಾಭವಿಲ್ಲ.

ಮುಂಬೈನಲ್ಲಿ, ಡಿವೈ ಪಾಟೀಲ್ ಸ್ಟೇಡಿಯಂ ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡ, ಜೋಸ್ ಬಟ್ಲರ್ ಅವರ ಅರ್ಧಶತಕದ ನೆರವಿನಿಂದ 20 ಓವರ್ಗಳ ಮುಕ್ತಾಯಕ್ಕೆ 6 ವಿಕೆಟ್ ಕಳೆದುಕೊಂಡು 158 ರನ್ ಬಾರಿಸಿತು. ಗುರಿ ಬೆನ್ನಟ್ಟಿದ ಮುಂಬೈ ಇನ್ನೂ ನಾಲ್ಕು ಎಸೆತಗಳು ಬಾಕಿ ಇರುವಂತೆಯೇ 5 ವಿಕೆಟ್ ಕಳೆದುಕೊಂಡು 161 ರನ್ ಬಾರಿಸಿ ಗೆಲುವು ಸಾಧಿಸಿತು. ಸೂರ್ಯಕುಮಾರ್ ಯಾದವ್ ಅವರ ಅರ್ಧಶತಕ ಮತ್ತು ತಿಲಕ್ ವರ್ಮ ಸಮಯೋಚಿತ ಬ್ಯಾಟಿಂಗ್ ಮುಂಬೈಗೆ ಗೆಲುವು ತಂದುಕೊಟ್ಟಿತು. ರೋಹಿತ್ ಶರ್ಮಾ ಮತ್ತೆ ಬ್ಯಾಟಿಂಗ್ ವೈಫಲ್ಯ ಕಂಡರು.

ಫೀಲ್ಡಿಂಗ್ ಆಯ್ಕೆ ಮಾಡಿಕೊಂಡ ಮುಂಬಯಿ ಬಿಗು ಬೌಲಿಂಗ್ ದಾಳಿ ಸಂಘಟಿಸಿತು. ಆದುರಿಂದ ಪವರ್ ಪ್ಲೇ ನಲ್ಲಿ ಹೆಚ್ಚು ರನ್ ಗಳಿಸಲಿಲ್ಲ. ದೇವದತ್ ಪಡಿಕಲ್ 15ರಂದು ಮೂಲಕ ಆರ್ ಆರ್ ಗೆ ಆರಂಭಿಕ ಹಿನ್ನಡೆ ಉಂಟಾಯಿತು. ನಾಯಕ ಸಂಜು ಸ್ಯಾಮ್ಸ್ ನ್ ಕೂಡ 16 ರನ್ಗಳಿಗೆ ಸೀಮಿತಗೊಂಡ ರೆ ನ್ಯೂಜಿಲೆಂಡ್ ಆಲ್-ರೌಂಡರ್ ಡ್ಯಾರಿಲ್ ಮಿಚೆಲ್ ಪ್ರಯಾಸದ 17ರನ್ ಬಾರಿಸಿದರು. ಹಿಂದಿನ ಪಂದ್ಯದಲ್ಲಿ ಆರ್ ಆರ್ ಪರ ಮಿಂಚಿದ್ದ ರಿಯಾನ್ ಪರಾಗ್ 3 ರನ್ಗಳಿಗೆ ಔಟಾಗಿ ನಿರಾಸೆ ಎದುರಿಸಿದರು. ಆದರೆ ಮತ್ತೊಂದು ಬದಿಯಲ್ಲಿ ನೆಲಕಚ್ಚಿ ಆಡಿದ ಬಟ್ಲರ್ ನಿಧಾನಗತಿಯಲ್ಲಿ ಗಳಿಸಿದರು. ಇದರ ಜೊತೆಗೆ ಹೃತಿಕ್ ಶೋಕಿಂಗ್ ಎಸೆದ ಇನಿಂಗ್ಸ್ನ 16ನೇ ಓವರ್ನಲ್ಲಿ ಸತತ ನಾಲ್ಕು ಸಿಕ್ಸರ್ ಬಾರಿಸಿ ಅರ್ಧಶತಕ ಪೂರೈಸಿದರು. ಆದರೆ ಓವರ್ ನ ಕೊನೆ ಎಸೆತಕ್ಕೆ ಔಟಾಗಿ ನಿರಾಸೆ ಎದುರಿಸಿದರು. ಕೊನೆಯಲ್ಲಿ ರವಿಚಂದ್ರನ್ ಅಶ್ವಿನ್ 9 ಎಸೆತಗಳಲ್ಲಿ 21 ರನ್ ಬಾರಿಸಿ ಸ್ಪರ್ಧಾತ್ಮಕ ಮೊತ್ತ ಪೇರಿಸಲು ತಂಡಕ್ಕೆ ನೆರವಾದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...