Monday, August 24, 2026
Monday, August 24, 2026

ಸಾರಿಗೆ ಸಂಸ್ಥೆಯ ನೌಕರರ ಪ್ರಕರಣಗಳ ಮನ್ನಾ ಸರ್ಕಾರದ ಸ್ತುತ್ಯರ್ಹ ಕ್ರಮ

Date:

ಕೆ.ಎಸ್.ಆರ್.ಟಿ.ಸಿ. ಇತಿಹಾಸದಲ್ಲಿಯೇ ಮೊದಲ ಬಾರಿಗೆ 7,200 ನೌಕರರ ಶಿಸ್ತು ಪ್ರಕರಣಗಳನ್ನು ಒಂದು ಬಾರಿಗೆ ಮಾತ್ರ ಅನ್ವಯಿಸುವಂತೆ ಮನ್ನಾ‌ ಮಾಡಲಾಗಿದೆ ಎಂದು ವ್ಯವಸ್ಥಾಪಕ ನಿರ್ದೇಶಕ ವಿ. ಅನ್ಬುಕುಮಾರ್ ಅವರು ಹೇಳಿದ್ದಾರೆ.

ಕೆ.ಎಸ್.ಆರ್.ಟಿ.ಸಿ. ನಿಗಮದ‌ ವತಿಯಿಂದ ಕಾರ್ಮಿಕರ ದಿನಾಚರಣೆ ಆಚರಿಸಲಾಗಿದೆ. ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, 10 ತಿಂಗಳುಗಳ ಅವಧಿಗಿಂತ ಕಡಿಮೆ ಅವಧಿಯ ಒಳಗಿನ ಗೈರುಹಾಜರಿಯನ್ನು ಮನ್ನಿಸಿ ಕೂಡಲೇ ಕರ್ತವ್ಯಕ್ಕೆ ಹಾಜರಾಗುವ ನೌಕರರ ವಿಚಾರಣೆಯನ್ನು ರದ್ದುಗೊಳಿಸಿ, ಬಸ್ಸನ್ನು ನೀಡಿ ಚಾಲನೆಗೆ ಅನುವು ಮಾಡಿಕೊಡಲಾಗಿದೆ. ಅದರಂತೆ ಗೈರು ಹಾಜರಾಗಿದ್ದ 110 ನೌಕರರು ಕಳೆದ ಮೂರು ದಿನಗಳಿಂದ ಕರ್ತವ್ಯ ಹಾಜರಾಗಿದ್ದಾರೆ ಎಂದು ತಿಳಿಸಿದ್ದಾರೆ.

ನಿಗಮದ ಎಲ್ಲಾ ಸಿಬ್ಬಂದಿಗಳು 35,000, ಅದರಲ್ಲಿ ಒಟ್ಟು 8414 ಶಿಸ್ತು ಪ್ರಕರಣಗಳಿದೆ. ಕಳೆದ‌ 3 ದಿನಗಳಿಂದ 7200 ಶಿಸ್ತು ಪ್ರಕರಣಗಳನ್ನು ಅತೀ ಕಡಿಮೆ ಮೊತ್ತ ದಂಡ ಅಂದರೆ, ರೂ. 100, ರೂ. 200, ಗರಿಷ್ಠ ರೂ. 500 ಅನ್ನು ವಿಧಿಸಿ ಪ್ರಕರಣಗಳನ್ನು ಮುಕ್ತಾಯಗೊಳಿಸಲಾಗಿದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ವ್ಯವಸ್ಥಾಪಕ ನಿರ್ದೇಶಕರು, ಶಿಸ್ತು ಪ್ರಕರಣಗಳನ್ನು ಮುಕ್ತಾಯಗೊಂಡಿರುವ ನೌಕರರಿಗೆ ಆದೇಶ‌ದ‌ ಪ್ರತಿಯನ್ನು ಸಿಹಿಯೊಂದಿಗೆ ವಿತರಿಸಿ ಶುಭ ಕೋರಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K. Shivakumar 500 ಕೆಪಿಎಸ್ ಶಾಲೆಗಳನ್ನ ಸಮಗ್ರ ಉನ್ನತೀಕರಿಸುವ “ಶಿಕ್ಷಣ ಕ್ರಾಂತಿ-2030″ಯೋಜನೆಗೆ ಹೆಜ್ಜೆಯಿಟ್ಟಿದ್ದೇವೆ,- ಡಿ.ಕೆ.ಶಿವಕುಮಾರ್.

D.K. Shivakumar ನಮ್ಮ ಹಳ್ಳಿಯ ಮಣ್ಣಿನ ಪ್ರತಿಭೆಗಳು ವಿಶ್ವದಂಗಳದಲ್ಲಿ ರಾರಾಜಿಸಬೇಕು, ಅವರಿಗೆ ಅತ್ಯುನ್ನತ...

B.Y. Raghavendra “ಸರ್ಕಾರಿ ಶಾಲೆಗೆ ನೀವು ಸಲ್ಲಿಸಿರುವ ಅಪಾರಸೇವೆಗೆ ದೊರೆತ ಅರ್ಹ ಗೌರವ”- ಬಿ.ವೈ.ರಾಘವೇಂದ್ರ.

B.Y. Raghavendra ಕೇಂದ್ರ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿರುವ...

Shivamogga News ಹರಕೆರೆ ರಿಂಗ್ ರಸ್ತೆಯಲ್ಲಿ ದರೋಡೆ ಮಾಡಿದ್ದ ಖದೀಮರು ಈಗ ‘ಅಂದರ್’.

Shivamogga News ಹರಕೆರೆ ರಿಂಗ್‌ರೋಡ್‌ನಲ್ಲಿ ಸಾರ್ವಜನಿಕರನ್ನು ಬೆದರಿಸಿ, ಹಲ್ಲೆ ನಡೆಸಿ ಹಣ...

D. Devaraj Arasu ದೇವರಾಜ ಅರಸು ಅವರಿಗೆ ನಮ್ಮರೈತರು ಚಿರ ಋಣಿಯಾಗಿರಬೇಕು – ಬಿ.ಆರ್.ಜಯಂತ್.

D. Devaraj Arasu  1974ರ ಭೂ ಸುಧಾರಣಾ ಕಾಯ್ದೆಗೆ ಐತಿಹಾಸಿಕ ಮಹತ್ವವಿದ್ದು,...