Thursday, February 5, 2026
Thursday, February 5, 2026

ಅಮರ ನಟ ಡಾ.ಪುನೀತ್ ಗೆ ಚಿತ್ರದುರ್ಗದಲ್ಲಿ ಬಸವಶ್ರೀ ಗೌರವ ಪ್ರದಾನ

Date:

ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರು ಸಾವಿನಲ್ಲೂ ಸಾರ್ಥಕತೆ ಮೆರೆದವರು. ಸಾವಿನ ನಂತರದಲ್ಲಿ ಅನೇಕ ಪ್ರಶಸ್ತಿಗಳು ಇವರಿಗೆ ಲಭಿಸಿವೆ. ಅದರಲ್ಲಿ ಮರಣೋತ್ತರವಾಗಿ ಪ್ರತಿಷ್ಠಿತ ಬಸವಶ್ರೀ ಪ್ರಶಸ್ತಿಯನ್ನು ಚಿತ್ರದುರ್ಗದ ಮುರುಘಾ ಮಠದ ವತಿಯಿಂದ ನಾಳೆ ಶ್ರೀಮಠದ ಅನುಭವ ಮಂಟಪದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಶಸ್ತಿಯನ್ನು ಪ್ರಧಾನ ಮಾಡಲಾಗುತ್ತದೆ.

ಪುನೀತ್ ರಾಜಕುಮಾರ್ ಅವರ ಪತ್ನಿ ಅಶ್ವಿನಿ ಅವರಿಗೆ ಬಸವಶ್ರೀ ಪ್ರಶಸ್ತಿ ಪ್ರಧಾನ ಮಾಡಲಾಗುತ್ತದೆ. ಡಾಕ್ಟರ್ ಶ್ರೀ ಶಿವಮೂರ್ತಿ ಮುರುಘಾ ಶರಣರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಸಚಿವ ಬಿ.ಸಿ. ಪಾಟೀಲ್, ಶಾಸಕ ತಿಪ್ಪಾರೆಡ್ಡಿ, ನಟರಾದ ಡಾ. ಶಿವರಾಜ್ ಕುಮಾರ್, ರಾಘವೇಂದ್ರ ರಾಜಕುಮಾರ್ ಉಪಸ್ಥಿತರಿರಲಿದ್ದಾರೆ.

ಬಸವಶ್ರೀ ಪುರಸ್ಕೃತರ ಕುರಿತು ಹಿರಿಯ ಸಾಹಿತಿ, ನಾಟಕಕಾರ ಡಾ. ರಾಜಪ್ಪ ದಳವಾಯಿ ಮಾತನಾಡಲಿದ್ದಾರೆ. ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ, ಅನಿವಾಸಿ ಭಾರತೀಯ ಉದ್ಯಮಿ ಭರತ್ ಕುಮಾರ್, ಚಿತ್ರೋದ್ಯಮಿ ಚಿನ್ನೇಗೌಡ ಭಾಗವಹಿಸಲಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...