Monday, December 8, 2025
Monday, December 8, 2025

ಅಡುಗೆ ಎಣ್ಣೆ ಮೇಲಿನ ಆಮದು ಸುಂಕ ಕಡಿತ: ಗ್ರಾಹಕ ಸ್ನೇಹೀ ಕ್ರಮ

Date:

ಬೆಲೆ ಏರಿಕೆಯಿಂದ ತತ್ತರಿಸಿರುವ ಗ್ರಾಹಕರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಲು ಮುಂದಾಗಿದೆ. ಅಡುಗೆ ಎಣ್ಣೆ ಆಮದಿನ ಮೇಲಿನ ಸೆಸ್ ಕಡಿಮೆ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

ಭಾರತವು ತನ್ನ ಅರ್ಧದಷ್ಟು ತೈಲವನ್ನು ಇಂಡೋನೇಷ್ಯಾದಿಂದ ಆಮದು ಮಾಡಿಕೊಂಡಿತು.
ಇಂಡೋನೇಷ್ಯಾವು ಇದ್ದಕ್ಕಿದ್ದಂತೆ ತಾಳೆ ಎಣ್ಣೆ ಹಾಗೂ ಕಚ್ಚಾ ತಾಳೆ ಎಣ್ಣೆಯ ರಫ್ತನ್ನು ನಿಷೇಧಿಸಿದೆ. ಇದು ಭಾರತದಲ್ಲಿ ಗೊಂದಲಕ್ಕೆ ಕಾರಣವಾಗಿದೆ.

ಬೇಡಿಕೆಯಲ್ಲಿ ಹೆಚ್ಚಳ ಹಾಗೂ ಪೂರೈಕೆಯಲ್ಲಿನ ಕುಸಿತದಿಂದಾಗಿ, ಬೆಲೆ ವೇಗವಾಗಿ ಏರುತ್ತಿದೆ.ಈ ಹಿನ್ನೆಲೆಯಲ್ಲಿ ಗ್ರಾಹಕ ವ್ಯವಹಾರಗಳ ಸಚಿವಾಲಯವು ಖಾದ್ಯ ತೈಲ ಆಮದಿನ ಮೇಲಿನ ಕೃಷಿ ಸೆಸ್ ಅನ್ನು ಶೇ.5 ರಷ್ಟು ಕಡಿಮೆ ಮಾಡಲು ಸಿದ್ಧತೆ ನಡೆಸುತ್ತಿದೆ ಎನ್ನಲಾಗಿದೆ.

ಅಂತರಾಷ್ಟ್ರೀಯ ತೈಲ ಬೆಲೆಗಳು ಏರುತ್ತಿರುವುದು ಗ್ರಾಹಕರು ಮತ್ತು ದೇಶದ ಆಡಳಿತಗಾರರನ್ನ ಘಾಸಿಗೊಳಿಸಿದೆ ಎಂದು ಎಸ್ಇಎ ಹೇಳಿದೆ.

ಇನ್ನು ಈ ಹೊರೆಯನ್ನ ಕಡಿಮೆ ಮಾಡಲು ಸರ್ಕಾರವು ಸಂಸ್ಕರಿಸಿದ, ಕಚ್ಚಾ ಅಡುಗೆ ಎಣ್ಣೆಗಳ ಮೇಲಿನ ಆಮದು ಸುಂಕವನ್ನ ಕಡಿತಗೊಳಿಸಲು ಮುಂದಾಗಿದೆ. ಈ ಮೂಲಕ ಅಡುಗೆ ಎಣ್ಣೆ ಬೆಲೆಯಲ್ಲಿ ಶೀಘ್ರವೇ ಇಳಿಕೆಯಾಗಲಿದೆ ಎಂದು ಹೇಳಲಾಗುತ್ತಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaiah ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹತ್ಯೆ, ಸೀಎಂ ಸಿದ್ಧರಾಮಯ್ಯ ಖಂಡನೆ

CM Siddharamaiah ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದ ಕಾಂಗ್ರೆಸ್ ಕಾರ್ಯಕರ್ತ...

ಶಾಲಾ ಬಸ್ ಅತಿವೇಗ ಚಾಲನೆ, ಬೈಕಿಗೆ ಢಿಕ್ಕಿ‌ ಸವಾರನ ಸ್ಥಿತಿ ಗಂಭೀರ

ಶಾಲಾ ಪ್ರವಾಸಕ್ಕೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ಸು ಮತ್ತು ಬೈಕ್ ನಡುವೆ...

B.Y.Raghavendra ಆರ್.ಎಸ್.ಎಸ್. ಗೃಹ ಸಂಪರ್ಕ ಅಭಿಯಾನದಲ್ಲಿ ಸಂಸದ ರಾಘವೇಂದ್ರ ಭಾಗಿ.

B.Y.Raghavendra ರಾಷ್ಟ್ರೀಯ ಸ್ವಯಂಸೇವಕ ಸಂಘದ ನೂರನೇ ವರ್ಷದ ಪ್ರಯುಕ್ತ, ಇಂದು...