Sunday, March 29, 2026
Sunday, March 29, 2026

ಸ್ವಂತ ಗೃಹಕ್ಕೆ ನರೇಂದ್ರ ಮೋದಿ ಹೆಸರಿಟ್ಟ ಅಭಿಮಾನಿ ಗೌ.ಹಾಲೇಶ್

Date:

ಅಭಿಮಾನಿ ಬಳಗ, ಸಂಘಗಳನ್ನು ಹೆಸರಾಂತ ವ್ಯಕ್ತಿಗಳ ಹೆಸರಲ್ಲಿ ಕಟ್ಟಿ ಕೊಂಡಿರುವುದನ್ನು ಸಾಮಾನ್ಯವಾಗಿ ನಾವು ಆದರೆ ಇಲ್ಲೊಬ್ಬ ತನ್ನ ಮನೆಗೆ ಮೋದಿ ಅವರ ಹೆಸರಿಟ್ಟು ತನ್ನ ಅಭಿಮಾನವನ್ನು ವ್ಯಕ್ತಪಡಿಸಿದ್ದಾನೆ.

ಚನ್ನಗಿರಿಯ ನಿವಾಸಿ ಗೌಡ್ರ ಹಾಲೇಶ್ ಕಟ್ಟಿಸಿದ ಹೊಸ ಮನೆಗೆ ಪ್ರಧಾನಿ ನರೇಂದ್ರ ಮೋದಿ ಹೆಸರನ್ನು ಇಟ್ಟು ನಾಮಕರಣ ಮಾಡಿ ತಾಲ್ಲೂಕಿನ ಜನರ ಗಮನ ಸೆಳೆದಿದ್ದಾರೆ. ಹಾಲೇಶ್ ಆರ್‌ಎಸ್‌ಎಸ್ ಕಾರ್ಯಕರ್ತರಾಗಿದ್ದಾರೆ. ಅನೇಕ ವರ್ಷಗಳಿಂದ ಬಿಜೆಪಿಗಾಗಿ ದುಡಿಯುತ್ತಿದ್ದಾರೆ. ಇವರು ತಾಲ್ಲೂಕಿನ ಮುದ್ದೇನಹಳ್ಳಿ ಗ್ರಾಮದ ಬಳಿಯ ತೋಟದಲ್ಲಿ ಹೊಸ ಮನೆ ಕಟ್ಟಲು ತೀರ್ಮಾನಿಸಿದರು. ಅದರಂತೆ 42 ಲಕ್ಷ ರೂ. ವೆಚ್ಚದಲ್ಲಿ ಸುಸಜ್ಜಿತ ನೂತನ ಮನೆಯೊಂದನ್ನು ನಿರ್ಮಿಸಿದ್ದಾರೆ.

ಹೊಸ ಮನೆ ಕಟ್ಟಿದ ಮೇಲೆ ಆ ಮನೆಗೆ ಯಾವುದಾದರೂ ಹೆಸರನ್ನು ನಾಮಕರಣ ಮಾಡುವುದು ಸಂಪ್ರದಾಯ. ಸಾಮಾನ್ಯವಾಗಿ ನಾವು ನಿರ್ಮಿಸಿದ ಹೊಸ ಮನೆಗೆ ಮನೆ ದೇವರು, ಮಕ್ಕಳು ಅಥವಾ ತಂದೆ ತಾಯಿಗಳ ಹೆಸರನ್ನು ನಾಮಕರಣ ಮಾಡುತ್ತಾರೆ. ಆದರೆ ಈತ ನರೇಂದ್ರ ಮೋದಿಯವರ ಅಭಿಮಾನಿಯಾದ ಇವರು ತಾವು ಕಟ್ಟಿಸಿದ ಹೊಸ ಮನೆಗೆ ಶ್ರೀ ನರೇಂದ್ರ ಮೋದಿ ನಿಲಯ ಎಂಬ ಹೆಸರು ಇಟ್ಟಿದ್ದಾರೆ.

ನರೇಂದ್ರ ಮೋದಿ ನಿಲಯದ ಉದ್ಘಾಟನೆಯನ್ನು ಮೇ. 3ರಂದು ಬಸವ ಜಯಂತಿಯ ದಿನ ಉದ್ಘಾಟಿಸಲು ತೀರ್ಮಾನಿಸಿದ್ದಾರೆ. ಈಗ ನರೇಂದ್ರ ಮೋದಿ ನಿಲಯವನ್ನು ನೋಡಲು ತಾಲ್ಲೂಕಿನ ವಿವಿಧ ಗ್ರಾಮಗಳಿಂದ ಜನರು ಬರುತ್ತಿದ್ದಾರೆ. ಈ
ಕಾರ್ಯಕ್ರಮಕ್ಕೆ ನರೇಂದ್ರ ಮೋದಿ ಅವರ ಅಭಿಮಾನಿಗಳಿಗೆ ಮಾತ್ರ ಆಹ್ವಾನವಿದೆ.

ನರೇಂದ್ರ ಮೋದಿಯವರು ರಾಜಕೀಯ ರಂಗಕ್ಕೆ ಪ್ರವೇಶ ಮಾಡಿದ ದಿನದಿಂದಲೂ ಅವರನ್ನು ಗಮನಿಸುತ್ತಾ ಬಂದಿದ್ದೆ. ಅವರು ಪ್ರಧಾನಿಯಾದ ಮೇಲೆ ಇನ್ನಷ್ಟು ಪ್ರೀತಿ ಬೆಳೆಯಿತು. ಜಮ್ಮು ಮತ್ತು ಕಾಶ್ಮೀರದಲ್ಲಿ 370ನೇ ವಿಧಿಯನ್ನು ರದ್ಧುಗೊಳಿಸಲು ದಿಟ್ಟ ನಿರ್ಧಾರ ತೆಗೆದುಕೊಂಡಿದೆ. ಕೊರೊನಾವನ್ನು ಹಿಮ್ಮೆಟ್ಟಿಸಲು ದೇಶದ ಜನರಿಗೆ ಉಚಿತ ಲಸಿಕೆ ನೀಡಿ ದೇಶದ ಒಳಿತಿಗಾಗಿ ದಿಟ್ಟ ನಿರ್ಧಾರಗಳನ್ನು ಕೈಗೊಳ್ಳುವ ಮೂಲಕ ಇಡೀ ವಿಶ್ವವೇ ಗಮನಸೆಳೆಯುವಂತೆ ಮಾಡಿದ್ದಾರೆ. ಇದರಿಂದ ಅವರು ತುಂಬ ಇಷ್ಟ. ಆದ್ದರಿಂದ ನರೇಂದ್ರ ಮೋದಿ ಹೆಸರನ್ನು ಇಟ್ಟಿದ್ದೇನೆ. ನರೇಂದ್ರ ಮೋದಿ ಅಭಿಮಾನಿಗಳಿಗೆ ಮಾತ್ರ ಗೃಹ ಪ್ರವೇಶಕ್ಕೆ ಆಹ್ವಾನ ನೀಡಿದ್ದೇನೆ ಎಂದು ಗೌ. ಹಾಲೇಶ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kote SeethaRamanjaneya Temple ವೈಭವದಿಂದ ನಡೆದ ಶ್ರೀಆಂಜನೇಯಸ್ವಾಮಿ ರಥೋತ್ಸವ

Kote SeethaRamanjaneya Temple ಪುರಾತನವಾದ ಶ್ರೀ ಆಂಜನೇಯ ಸ್ವಾಮಿ ಸನ್ನಿಧಿಯಲ್ಲಿ ಪ್ರತಿವರ್ಷದಂತೆ...

Department of Kannada and Culture ಶ್ರೀಅಗ್ನಿಬನ್ನಿರಾಯಸ್ವಾಮಿಯವರ ಇತಿಹಾಸವನ್ನ ನಾವೆಲ್ಲಾ ತಿಳಿದುಕೊಳ್ಳಬೇಕು- ಆನಂದ್.

Department of Kannada and Culture ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು...

Rotary Club Shimoga ಚಿನ್ನ,ಬೆಳ್ಳಿ ಧಾರಣೆ ವ್ಯತ್ಯಾಸಕ್ಕೆ ಜಾಗತಿಕ ಸಮಸ್ಯೆಗಳೇ ಕಾರಣ- ಸೆಂಥಿಲ್ ವೆಲನ್.

Rotary Club Shimoga ಚಿನ್ನ ಮತ್ತು ಬೆಳ್ಳಿ ಕಷ್ಟಕಾಲದಲ್ಲಿ ಅಪತ್ಬಾಂದವ ರೀತಿಯಲ್ಲಿ ವರ್ತಿಸುತ್ತದೆ....

S. N. Channabasappa ಮಾದಕ ದ್ಯವ್ಯ ವ್ಯಸನ ವಿರೋಧಿ ಕ್ರಮಗಳಿಗೆ ವಿಶೇಷ ಕಾರ್ಯಪಡೆ ರಚನೆ ಮಾಡಿ- ಎಸ್.ಎನ್.ಚನ್ನಬಸಪ್ಪ.

S. N. Channabasappa ರಾಜ್ಯದಲ್ಲಿ ಹೆಚ್ಚುತ್ತಿರುವ ಅಪರಾಧ ಕೃತ್ಯಗಳು ಮತ್ತು ಮಾದಕ...