Thursday, August 13, 2026
Thursday, August 13, 2026

ಮಹಾರಾಷ್ಟ್ರ ನಿಲುವಿಗೆ ಬೊಮ್ಮಾಯಿ ತಿರುಗೇಟು

Date:

ಕರ್ನಾಟಕದ ಗಡಿ ಬಗ್ಗೆ ಸರ್ಕಾರದ ನಿಲುವು ಬಹಳ ಸ್ಪಷ್ಟವಾಗಿದೆ. ರಾಜ್ಯದ ಗಡಿ ಪ್ರದೇಶದ ಒಂದಿಂಚೂ ಜಾಗವನ್ನು ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ ಎಂದು ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.

ನಿನ್ನೆ ಸೋಮವಾರ ವಿಧಾನಸೌಧದಲ್ಲಿ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಅವರು, ಮಹಾರಾಷ್ಟ್ರದಲ್ಲಿನ ರಾಜಕಾರಣಿಗಳು ಇಕ್ಕಟ್ಟಿನಲ್ಲಿ ಸಿಲುಕಿದ್ದಾರೆ. ಅದಕ್ಕಾಗಿ ರಾಜ್ಯದ ಗಡಿ ಭಾಷೆಗಳ ಬಗ್ಗೆ ಕೆದಕುತ್ತಿದ್ದಾರೆ. ಮಹಾರಾಷ್ಟ್ರದಲ್ಲಿ ಅನೇಕ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳಿವೆ. ಅವುಗಳನ್ನು ಹೇಗೆ ತೆಗೆದುಕೊಳ್ಳಬೇಕು ಎಂಬುದರ ಚಿಂತನೆ ಸರ್ಕಾರ ಮಾಡುತ್ತಿದೆ. ಅವರ ರಾಜಕೀಯ ಉಳಿವಿಗಾಗಿ ರಾಜ್ಯದ ಗಡಿ ಭಾಷೆ ವಿಚಾರಗಳನ್ನು ಎತ್ತುವುದು ಸಣ್ಣತನ. ಅದನ್ನು ಕೈಬಿಡಬೇಕು ಎಂದು ಬಸವರಾಜ್ ಬೊಮ್ಮಾಯಿ ಅವರು ಹೇಳಿದ್ದಾರೆ.

ಮರಾಠಿ ಮಾತನಾಡುವ ಜನರು ಇರುವ ಕರ್ನಾಟಕದ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸುವವರೆಗೂ ಅಲ್ಲಿನ ಜನರ ಹೋರಾಟಕ್ಕೆ ಬೆಂಬಲ ನೀಡುವುದಾಗಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್‌ ಪವಾರ್‌ ಹೇಳಿದ್ದರು. ಅದಕ್ಕೆ ಬೊಮ್ಮಾಯಿ ಈ ರೀತಿ ತಿರುಗೇಟು ನೀಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...