Tuesday, February 3, 2026
Tuesday, February 3, 2026

ವಿದ್ಯುತ್-ಉದ್ಯೋಗ-ರೈತರ ಸಮಸ್ಯೆ -ಹಣದುಬ್ಬರ ರಾಹುಲ್ ಮೋದಿಯತ್ತ ಟ್ವಿಟರ್ ಬಾಣ

Date:

ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರದ ದುರಾಡಳಿತವು, ಒಂದು ಕಾಲದಲ್ಲಿ ವಿಶ್ವದ ಅತಿ ವೇಗದ ಆರ್ಥಿಕತೆಗಳಲ್ಲಿ ಒಂದಾಗಿದ್ದ ದೇಶದ ಆರ್ಥಿಕತೆಯನ್ನು ಹೇಗೆ ಹಾಳು ಮಾಡಬಹುದು ಎಂಬುದರ ಅಧ್ಯಯನವಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ದೇಶದಲ್ಲಿ ಬೇಸಿಗೆಯಲ್ಲಿ ಅತಿಹೆಚ್ಚು ಬೇಡಿಕೆಯಿರುವ ವಿದ್ಯುತ್ ಮತ್ತು ಕಲ್ಲಿದ್ದಲು ಕೊರತೆ ತೀವ್ರವಾಗಿರುವ ನಡುವೆಯೇ, ರಾಹುಲ್ ಗಾಂಧಿ ಅವರು ಕೇಂದ್ರ ಸರ್ಕಾರದ ವಿರುದ್ಧ ಟ್ವಿಟರ್ ಮೂಲಕ ತಮ್ಮ ವಾಗ್ದಾಳಿ ನಡೆಸಿದ್ದಾರೆ.

ಈ ಸಂಬಂಧ ನಿನ್ನೆ ಸೋಮವಾರ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ ಅವರು, ವಿದ್ಯುತ್ ಬಿಕ್ಕಟ್ಟು. ಉದ್ಯೋಗಗಳ ಬಿಕ್ಕಟ್ಟು, ರೈತರ ಬಿಕ್ಕಟ್ಟು. ಹಣದುಬ್ಬರದ ಬಿಕ್ಕಟ್ಟು. ಪ್ರಧಾನಿ ಮೋದಿ ಅವರ 8 ವರ್ಷಗಳ ದುರಾಡಳಿತವು ವಿಶ್ವದ ವೇಗದ ಆರ್ಥಿಕತೆಗಳಲ್ಲಿ ಒಂದಾಗಿದ್ದ ದೇಶದ ಆರ್ಥಿಕತೆಯನ್ನು ಹೇಗೆ ಹಾಳು ಮಾಡಬಹುದು ಎಂಬುದರ ಅಧ್ಯಯನವಾಗಿದೆ ಎಂದು ಮೋದಿ ಸರ್ಕಾರದ ವಿರುದ್ಧ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...