Sunday, April 27, 2025
Sunday, April 27, 2025

ರಕ್ತದಾನದ ಬಗ್ಗೆ ಸಾರ್ವಜನಿಕ ಗಮನ ಸೆಳೆಯಲು, ಕಿರಣ್ ಪಾದಯಾತ್ರೆ

Date:

ರಕ್ತದಾನ ಮಹಾದಾನ ಎಂದು ನಾವು ಕೇಳಿರುತ್ತೇವೆ. ಇಲ್ಲೊಬ್ಬ ವ್ಯಕ್ತಿ ರಕ್ತದಾನದ ಜಾಗೃತಿ ಮೂಡಿಸುವುದಕ್ಕೆ, ಪಾದಯಾತ್ರೆಯನ್ನು ಕಳೆದ 4ತಿಂಗಳಿನಿಂದ ಆರಂಭಿಸಿದ್ದಾನೆ.

ಈತ ದೆಹಲಿ ಮೂಲದ 37 ವರ್ಷದ ಕಿರಣ್ ವರ್ಮಾ. ಕೇರಳ ರಾಜಧಾನಿ ತಿರುವನಂತಪುರದಿಂದ ದೇಶದ ಅನೇಕ ರಾಜ್ಯಗಳಲ್ಲಿ ಸುತ್ತಾಡಿ ದೆಹಲಿ ತಲುಪುವ ಗುರಿ ಹೊಂದಿದುವ ಕಿರಣ್ ವರ್ಮಾ ನಿನ್ನೆ (ಸೋಮವಾರ) ಬೆಳಗಾವಿಗೆ ಆಗಮಿಸಿದ್ದಾರೆ.

2021ರ ಡಿಸೆಂಬರ್ 28 ರಂದು ತಿರುವನಂತಪುರಂನಿಂದ ಪಾದಯಾತ್ರೆ ಪ್ರಾರಂಭಿಸಿದ್ದರು. ಕಿರಣ್ ವರ್ಮಾ 3300 ಕಿಲೋಮೀಟರ್ ಸಂಚರಿಸಿ ಬೆಳಗಾವಿ ತಲುಪಿದ್ದಾರೆ.

2024ರ ಜೂನ್ 14ರ ವಿಶ್ವ ರಕ್ತದಾನ ದಿನದಂದು ದೆಹಲಿ ತಲುಪುವ ಗುರಿ ಹೊಂದಿರುವ ಕಿರಣ್ ವರ್ಮಾ ನಿತ್ಯ 30 ರಿಂದ 40 ಕಿಲೋಮೀಟರ್ ಸಂಚರಿಸುತ್ತಾರೆ. ಇದುವರೆಗೆ 3330 ಕಿಮೀ ನಡಿಗೆ ಪೂರ್ಣಗೊಳಿಸಿರುವ ಕಿರಣ್ ವರ್ಮಾ ಕೇರಳ, ಪಾಂಡಿಚೇರಿ, ಗೋವಾ, ತಮಿಳುನಾಡು, ಕರ್ನಾಟಕದ ವಿವಿಧ ನಗರಗಳಲ್ಲಿ ಪಾದಯಾತ್ರೆ ಮಾಡಿದ್ದಾರೆ.

ಈಗಾಗಲೇ ಭೇಟಿಯಾದ ಕಡೆಗಳಲ್ಲಿ ಕಿರಣ್ ವರ್ಮಾ ನಡಿಗೆಯಿಂದ ಸ್ಪೂರ್ತಿಗೊಂಡು ವಿವಿಧೆಡೆ 26 ರಕ್ತದಾನ ಶಿಬಿರ ಆಯೋಜನೆ ಮಾಡಿ 2037 ಯೂಟಿನ್ ರಕ್ತ ಸಂಗ್ರಹವಾಗಿದೆ ಎಂದು ತಿಳಿಸಿದ್ದಾರೆ.

ರಕ್ತದ ಕೊರತೆ ನೀಗಿಸಲು ಪ್ರೇರಣೆ ತುಂಬಲು ಏಕಾಂಗಿಯಾಗಿ ಪಾದಯಾತ್ರೆ ಮಾಡುತ್ತಿದ್ದೇನೆ. ನನ್ನ ಈ ಪಾದಯಾತ್ರೆಗೆ ಕುಟುಂಬಸ್ಥರು, ಸ್ನೇಹಿತರ ಪ್ರೋತ್ಸಾಹ ಇದೆ.‌ನನ್ನ ಪತ್ನಿ ಕೆಮಿಕಲ್ ಇಂಜಿನಿಯರ್ ಇದ್ದು ಕುಟುಂಬದ ಜವಾಬ್ದಾರಿ ಹೊತ್ತಿದ್ದಾರೆ.ನಿತ್ಯದ ಖರ್ಚು ವೆಚ್ಚಕ್ಕೆ ಸ್ನೇಹಿತರು ಕುಟುಂಬಸ್ಥರು ಧನಸಹಾಯ ಮಾಡುತ್ತಿದ್ದಾರೆ‌. ಯಾವುದೇ ಸರ್ಕಾರದಿಂದ ನಾನು ನೆರವು ಪಡೆದಿಲ್ಲ ಎಂದು ತಿಳಿಸಿದ್ದಾರೆ.

ಕಳೆದ ಬಾರಿ ಕೊರೋನಾ ಸಂಕಷ್ಟದಲ್ಲಿದ್ದಾಗ ಪ್ಲಾಸ್ಮಾ ಕೊರತೆ ಎದುರಾಗಿದ್ದು ಎಲ್ಲರಿಗೂ ಗೊತ್ತು‌. ದೇಶದಲ್ಲಿ 5 ಮಿಲಿಯನ್ ಯುವಕರು ರಕ್ತದಾನ ಮಾಡಿದ್ರೆ ರಕ್ತದ ಕೊರತೆಯಿಂದ ಯಾರೂ ಸಾಯಲ್ಲ ಅಂತಾರೆ ಕಿರಣ್ ವರ್ಮಾ. ಪಾದಯಾತ್ರೆ ವೇಳಡ ಆಯಾ ನಗರದ ಹೋಟೆಲ್‌ಗಳಲ್ಲಿ ಆಹಾರ ಸೇವಿಸಿ ಲಾಡ್ಜ್‌ಗಳಲ್ಲಿ ವಾಸ್ತವ್ಯ ಹೂಡುತ್ತೇನೆ. ಕೆಲವೆಡೆ ತಮ್ಮ ಸ್ನೇಹಿತರು ಹಾಗೂ ಪಾದಯಾತ್ರೆ ವೇಳೆ ಪರಿಚಯವಾದವರು ಆಶ್ರಯ ನೀಡ್ತಾರೆ. ಬಸ್ ನಿಲ್ದಾಣಗಳಲ್ಲೂ ರಾತ್ರಿ ಕಳೆದಿದ್ದೇನೆ. ಕೆಲವೆಡೆ ನಾನು ಏಕಾಂಗಿಯಾಗಿ ಪಾದಯಾತ್ರೆ ಹೊರಟಾಗ ಕೆಲ ಪುಂಡರು ಹಲ್ಲೆ ಮಾಡಿ ಮೊಬೈಲ್ ವಾಚ್ ಕಿತ್ತುಕೊಳ್ಳಲು ಯತ್ನಿಸಿದ್ದಾರೆ ಎಂದು ತಮ್ಮ ಪಾದಯಾತ್ರೆ ಅನುಭವ ಮಾಧ್ಯಮಗಳ ಜೊತೆ ಕಿರಣ್ ವರ್ಮಾ ಹಂಚಿಕೊಂಡಿದ್ದಾರೆ.

ಇನ್ನು ಇಂತಹ ಸಾಮಾಜಿಕ ಕೆಲಸದಲ್ಲಿ ತೊಡಗಿಸಿಕೊಂಡಿದ್ದಕ್ಕೆ ಖುಷಿ ಇದೆ. ರಕ್ತದಾನ ಮಾಡುವುದರಿಂದ ಆರೊಗ್ಯವಂತರಾಗಿಯೂ ಇರಬಹುದು, ಒಂದು ಜೀವ ಉಳಿಸಿದ ಸಾರ್ಥಕತೆಯೂ ಇರುತ್ತದೆ‌. ಹೀಗಾಗಿ ಯುವಕರು ರಕ್ತದಾನ ಮಾಡಲು ಮುಂದೆ ಬರಬೇಕು ಅಂತಾ ಯುವಕರಲ್ಲಿ ಕಿರಣ್ ವರ್ಮಾ ಮನವಿ ಮಾಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

National Defense University ಪಠ್ಯಕ್ರಮದ ರಚನೆ & ಕೌಶಲ್ಯಾಭಿವೃದ್ಧಿಗೆಒತ್ತು-ರಾಷ್ಟ್ರೀಯ ರಕ್ಷಾ ವಿವಿಯಲ್ಲಿ ವೃತ್ತಿ ಸಮಾಲೋಚನೆ ಯಶಸ್ವಿ

National Defense University ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯ (RRU), ಶಿವಮೊಗ್ಗ ಕ್ಯಾಂಪಸ್ನಲ್ಲಿ,...

Digital library ಹೊಸ ವಿಷಯ ಕಲಿಕೆ ಸಂಗಡ ಮಕ್ಕಳು ದೈಹಿಕ & ಮಾನಸಿಕ ದೃಢತೆ ಸಾಧಿಸಬೇಕು- ವೀರೇಶ್ ಕ್ಯಾತನಕೊಪ್ಪ

Digital library ಮಕ್ಕಳಿಗೆ ಬೇಸಿಗೆ ಶಿಬಿರಗಳು ಅತ್ಯಂತ ಅವಶ್ಯಕ ಎಂದು ಸೂಗುರು...

CM siddharamaih ಪಹಲ್ಗಾಮ್ ದುರ್ಘಟನೆ‌ ಗುಪ್ತಚರ ವ್ಯವಸ್ಥೆಯ ವೈಫಲ್ಯ- ಮುಖ್ಯಮಂತ್ರಿ ಸಿದ್ಧರಾಮಯ್ಯ

CM siddharamaih ಕರ್ನಾಟಕದಲ್ಲಿ ಅವಧಿ ಮೀರಿ ನೆಲೆಸಿರುವ ವಿದೇಶಿಗರ ಬಗ್ಗೆ...