Wednesday, October 2, 2024
Wednesday, October 2, 2024

ಆಕಾಶದೆತ್ತರ ಬೆಳೆದವರು ಪುನೀತ್- ಮುರುಘಾ ಶರಣರು

Date:

ಮುರುಘಾ ಮಠದ 2021ನೇ ಸಾಲಿನ ಪ್ರತಿಷ್ಠಿತ ಬಸವಶ್ರೀ ಪ್ರಶಸ್ತಿಯನ್ನು ಮರಣೋತ್ತರವಾಗಿ ಸ್ಯಾಂಡಲ್​ವುಡ್​ನ ಡಾ.ಪುನೀತ್‌ ರಾಜ್‌ಕುಮಾರ್ ಅವರಿಗೆ ನೀಡಲಾಗಿದೆ. ಅಶ್ವಿನಿ ಪುನೀತ್​ರಾಜ್​ಕುಮಾರ್​ ಅವರು ಪ್ರಶಸ್ತಿ ಸ್ವೀಕರಿಸಿದರು.

ಬಸವ ಜಯಂತಿ ದಿನವಾದ ಇಂದು ಮಂಗಳವಾರ ಚಿತ್ರದುರ್ಗ ಮುರುಘಾ ಮಠದ ಅನುಭವ ಮಂಟಪದಲ್ಲಿ ಆಯೋಜಿಸಿದ್ದ ಕಾರ್ಯಕ್ರದಲ್ಲಿ ಬಸವಶ್ರೀ ಪ್ರಶಸ್ತಿಯನ್ನು ಡಾ. ಶಿವಮೂರ್ತಿ ಮುರುಘಾ ಶರಣರು ಪ್ರದಾನ ಮಾಡಿದರು. ಪ್ರಶಸ್ತಿಯು 5 ಲಕ್ಷ ರೂ. ನಗದು ಮತ್ತು ಫಲಕ ಒಳಗೊಂಡಿದೆ.

ಡಾ.ಶಿವಮೂರ್ತಿ ಮುರುಘ ಶರಣರು ಮಾತನಾಡಿ, ಡಾ.ರಾಜ್​ಕುಮಾರ್ ಅವರ ಮುದ್ದಿನ ಮಗ ಪುನೀತ್‌. ಅಭಿನಯ, ಹಾಡುಗಾರಿಕೆಯಲ್ಲಿ ಪುನೀತರು, ಪರಿಣಿತರು. ತಂದೆಯ ಮಾರ್ಗದರ್ಶನ ಆಂತರ್ಯದಲ್ಲಿಟ್ಟುಕೊಂಡು ಆಕಾಶದ ಎತ್ತರಕ್ಕೆ ಬೆಳೆದರು. ಕನ್ನಡ ಚಲನಚಿತ್ರ ಲೋಕವನ್ನು ಶ್ರೀಮಂತಗೊಳಿಸಿದ್ದಾರೆ. ಪುನೀತ್​ರಂತಹ ಪ್ರತಿಭೆಯನ್ನು ಕಂಡ ನಾವುಗಳೇ ಧನ್ಯರು ಎಂದರು.

ಈ ಸಂದರ್ಭದಲ್ಲಿ ಸಚಿವ ಬಿ.ಸಿ. ಪಾಟೀಲ್, ಶಾಸಕ ತಿಪ್ಪಾರೆಡ್ಡಿ, ಜಿಲ್ಲಾಧಿಕಾರಿ ಕವಿತಾ ಮನ್ನಿಕೆರಿ, ಸಿಇಒ ನಂದಿನಿ ದೇವೆ, ಪೊಲೀಸ್ ವರಿಷ್ಠಾಧಿಕಾರಿ ಪರುಶುರಾಮ್ ಇನ್ನೂ ಮುಂತಾದ ಗಣ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ಹೆಣ್ಣುಮಕ್ಕಳಿಗೆ ಪಾಠ ಪ್ರವಚನ ಕಲ್ಪಿಸಿರುವ ಸರ್ಕಾರ ದ ಮಹತ್ವ ಯೋಜನೆ- ಭಾರದ್ವಾಜ್

Rotary Shivamogga ದೇಶದ ಏಳಿಗೆಗಾಗಿ ಉತ್ತಮ ಪ್ರಜೆಗಳನ್ನು ನಿರ್ಮಿಸುವ ಮಹತ್ವದ ಕಾರ್ಯ...

Gandhi Jayanthi ಗಾಂಧೀಜಿ ಅವರಲ್ಲದೇ ಅನೇಕರ ಹೋರಾಟದ ಫಲ, ಸ್ವಾತಂತ್ರ್ಯ. ಅದನ್ನ ಉಳಿಸಿಕೊಳ್ಳಬೇಕು- ಮಧು ಬಂಗಾರಪ್ಪ

Gandhi Jayanthi ಗಾಂಧೀಜಿ ಸೇರಿದಂತೆ ಅನೇಕ ಹೋರಾಟಗಾರರ ಹೋರಾಟದ ಫಲದಿಂದ ನಮಗೆ...

Shivamogga Dasara ಶಿವಮೊಗ್ಗ ದಸರಾ ಉತ್ಸವಕ್ಕೆ ಕ್ಷಣಗಣನೆ

Shivamogga Dasara ರಾಜ್ಯದ ಎರಡನೇ ಅತಿ ದೊಡ್ಡ ದಸರಾ ಮಹೋತ್ಸವ ‘ಶಿವಮೊಗ್ಗ...

Chaudeshwari Temple ಶಿವಮೊಗ್ಗ ಚಾಲುಕ್ಯನಗರದ ಶ್ರೀಚೌಡೇಶ್ವರಿ ದೇಗುಲದಲ್ಲಿ ನವರಾತ್ರಿ ಉತ್ಸವ

Chaudeshwari Temple ಚಾಲುಕ್ಯನಗರದಲ್ಲಿರುವ ಶ್ರೀ ಚೌಡೇಶ್ವರಿ ಅಮ್ಮನವರ ದೇವಸ್ಥಾನ ನವರಾತ್ರಿಯ...