Friday, May 22, 2026
Friday, May 22, 2026

ಆಕಾಶದೆತ್ತರ ಬೆಳೆದವರು ಪುನೀತ್- ಮುರುಘಾ ಶರಣರು

Date:

ಮುರುಘಾ ಮಠದ 2021ನೇ ಸಾಲಿನ ಪ್ರತಿಷ್ಠಿತ ಬಸವಶ್ರೀ ಪ್ರಶಸ್ತಿಯನ್ನು ಮರಣೋತ್ತರವಾಗಿ ಸ್ಯಾಂಡಲ್​ವುಡ್​ನ ಡಾ.ಪುನೀತ್‌ ರಾಜ್‌ಕುಮಾರ್ ಅವರಿಗೆ ನೀಡಲಾಗಿದೆ. ಅಶ್ವಿನಿ ಪುನೀತ್​ರಾಜ್​ಕುಮಾರ್​ ಅವರು ಪ್ರಶಸ್ತಿ ಸ್ವೀಕರಿಸಿದರು.

ಬಸವ ಜಯಂತಿ ದಿನವಾದ ಇಂದು ಮಂಗಳವಾರ ಚಿತ್ರದುರ್ಗ ಮುರುಘಾ ಮಠದ ಅನುಭವ ಮಂಟಪದಲ್ಲಿ ಆಯೋಜಿಸಿದ್ದ ಕಾರ್ಯಕ್ರದಲ್ಲಿ ಬಸವಶ್ರೀ ಪ್ರಶಸ್ತಿಯನ್ನು ಡಾ. ಶಿವಮೂರ್ತಿ ಮುರುಘಾ ಶರಣರು ಪ್ರದಾನ ಮಾಡಿದರು. ಪ್ರಶಸ್ತಿಯು 5 ಲಕ್ಷ ರೂ. ನಗದು ಮತ್ತು ಫಲಕ ಒಳಗೊಂಡಿದೆ.

ಡಾ.ಶಿವಮೂರ್ತಿ ಮುರುಘ ಶರಣರು ಮಾತನಾಡಿ, ಡಾ.ರಾಜ್​ಕುಮಾರ್ ಅವರ ಮುದ್ದಿನ ಮಗ ಪುನೀತ್‌. ಅಭಿನಯ, ಹಾಡುಗಾರಿಕೆಯಲ್ಲಿ ಪುನೀತರು, ಪರಿಣಿತರು. ತಂದೆಯ ಮಾರ್ಗದರ್ಶನ ಆಂತರ್ಯದಲ್ಲಿಟ್ಟುಕೊಂಡು ಆಕಾಶದ ಎತ್ತರಕ್ಕೆ ಬೆಳೆದರು. ಕನ್ನಡ ಚಲನಚಿತ್ರ ಲೋಕವನ್ನು ಶ್ರೀಮಂತಗೊಳಿಸಿದ್ದಾರೆ. ಪುನೀತ್​ರಂತಹ ಪ್ರತಿಭೆಯನ್ನು ಕಂಡ ನಾವುಗಳೇ ಧನ್ಯರು ಎಂದರು.

ಈ ಸಂದರ್ಭದಲ್ಲಿ ಸಚಿವ ಬಿ.ಸಿ. ಪಾಟೀಲ್, ಶಾಸಕ ತಿಪ್ಪಾರೆಡ್ಡಿ, ಜಿಲ್ಲಾಧಿಕಾರಿ ಕವಿತಾ ಮನ್ನಿಕೆರಿ, ಸಿಇಒ ನಂದಿನಿ ದೇವೆ, ಪೊಲೀಸ್ ವರಿಷ್ಠಾಧಿಕಾರಿ ಪರುಶುರಾಮ್ ಇನ್ನೂ ಮುಂತಾದ ಗಣ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga jyanendra ಉಪಲೋಕಾಯುಕ್ತರ ಅನಿಸಿಕೆ ಸರಿ. ರಾಜ್ಯದಲ್ಲಿ ಭ್ರಷ್ಠಾಚಾರದ ತಾಂಡವ- ಆರಗ ಜ್ಞಾನೇಂದ್ರ

Araga jyanendra ಕರ್ನಾಟಕದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ ಎಂಬ ಉಪ ಲೋಕಾಯುಕ್ತ ಬಿ...

Backward Classes Welfare Department ವಿದ್ಯಾರ್ಥಿನಿಲಯಗಳ ಪ್ರವೇಶಾತಿಗೆ ಆನ್ ಲೈನ್ ಅರ್ಜಿ ಆಹ್ವಾನ

Backward Classes Welfare Department ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2026-27...

Nidhi Apke Nikat ಮೇ 27 .ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ನಿಧಿ ಆಪ್ ಕೆ ನಿಕಟ್ 2.0 ಕಾರ್ಯಕ್ರಮ

Nidhi Apke Nikat ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿ ವತಿಯಿಂದ ನಿಧಿ...

Shivamogga Police ಅನಾಮಧೇಯ ಶವದ ವಾರಸುದಾರರ ಪತ್ತೆಗೆ ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಠಾಣೆ ಪ್ರಕಟಣೆ

Shivamogga Police ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಬಸ್...