Thursday, February 5, 2026
Thursday, February 5, 2026

ತೀರ್ಥಹಳ್ಳಿ to ಶಿವಮೊಗ್ಗ ಕಿಮ್ಮನೆ ಪಾದಯಾತ್ರೆ

Date:

ಬಿಜೆಪಿ ಸರ್ಕಾರದ ದುರಾಡಳಿತ ಖಂಡಿಸಿ ಮತ್ತು ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ದ ತವರು ಗೃಹ ಸಚಿವರ ತವರು ಕ್ಷೇತ್ರ ತೀರ್ಥಹಳ್ಳಿಯಲ್ಲಿ ಹೋರಾಟ ಆರಂಭವಾಗಲಿದೆ.

ಮಾಜಿ ಸಚಿವ, ಕಾಂಗ್ರೆಸ್‌ ವಕ್ತಾರ ಕಿಮ್ಮನೆ ರತ್ನಾಕರ್ ಗೃಹ ಸಚಿವರ ತವರೂರು ಗುಡ್ಡೇಕೊಪ್ಪ ಗ್ರಾಮ ಪಂಚಾಯಿತಿ ಮುಂಭಾಗದಿಂದ ಶಿವಮೊಗ್ಗ ತನಕ ಪಾದಯಾತ್ರೆ ನಡೆಸಲಿದ್ದಾರೆ.

ಮೇ 6 ರಿಂದ 10ರ ತನಕ ನಾಲ್ಕು ದಿನಗಳ ಕಾಲ ಈ ಬೃಹತ್ ಪಾದಯಾತ್ರೆ ನಡೆಯಲಿದೆ. ಈ ಮೂಲಕ ಗೃಹ ಸಚಿವರ ವಿರುದ್ಧ ತವರು ಕ್ಷೇತ್ರದಲ್ಲಿಯೇ ದೊಡ್ಡ ಹೋರಾಟವನ್ನು ಪ್ರತಿಪಕ್ಷ ಕಾಂಗ್ರೆಸ್ ಹಮ್ಮಿಕೊಂಡಿದೆ.

ಕಿಮ್ಮನೆ ರತ್ನಾಕರ್ ನೇತೃತ್ವದಲ್ಲಿ ಗುಡ್ಡೇಕೊಪ್ಪ ಗ್ರಾಮ ಪಂಚಾಯಿತಿ ಮುಂಭಾಗದಿಂದ ಮೇ 6ರಂದು ಆರಂಭವಾಗುವ ಮೌನ ಪ್ರತಿಭಟನೆ ಹೊದಲ ಮಾರ್ಗವಾಗಿ ಬೆಜ್ಜವಳ್ಳಿ, ಮಂಡಗದ್ದೆ, ಸಕ್ರೆಬೈಲು, ಹರಕೆರೆ ಮೂಲಕ ಮೇ 10ರಂದು ಜಿಲ್ಲಾ ಕೇಂದ್ರ ಶಿವಮೊಗ್ಗ ತಲುಪಲಿದೆ.

ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಈ ಕುರಿತು ಮಾತನಾಡಿದ್ದು, “ಬಿಜೆಪಿ ಸರ್ಕಾರದ ಎಲ್ಲಾ ಅಕ್ರಮಗಳನ್ನು ಬಹಿರಂಗಪಡಿಸುವ ಉದ್ದೇಶದಿಂದ ಮೇ 6 ರಿಂದ 10ರ ತನಕ ಬೃಹತ್ ಪಾದಯಾತ್ರೆ ಚಳವಳಿ ಹಮ್ಮಿಕೊಂಡಿದ್ದೇವೆ” ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...