Saturday, December 6, 2025
Saturday, December 6, 2025

ಸುಖಾಸುಮ್ಮನೆ ಕಾಂಗ್ರೆಸ್ ನವರಿಂದ ಆರೋಪ- ಬೊಮ್ಮಾಯಿ

Date:

ಯಾವುದೇ ಹಗರಣ, ಅಕ್ರಮ ಪ್ರಕರಣಗಳೇ ಆಗಲಿ ರಾಜ್ಯ ಪೊಲೀಸ್‌ ಇಲಾಖೆ ದಕ್ಷ ಹಾಗೂ ನಿಷ್ಪಕ್ಷಪಾತ ತನಿಖೆ ಮಾಡುತ್ತಿದೆ. ಇದರಿಂದ ಕೆಲವರಿಗೆ ತೊಂದರೆಯಾಗುತ್ತಿದ್ದು, ಎಲ್ಲಿ ತಮ್ಮ ಬುಡಕ್ಕೇ ಬರುತ್ತದೋ ಎಂಬ ಭಯದಿಂದ ನಿತ್ಯ ಏನನ್ನಾದರೂ ಮಾತನಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪರೋಕ್ಷವಾಗಿ ಪ್ರತಿಪಕ್ಷಗಳ ನಾಯಕರುಗಳಿಗೆ ತಿರುಗೇಟು ನೀಡಿದ್ದಾರೆ.

ಬೆಂಗಳೂರು ನಗರದ ನೃಪತುಂಗ ವಿಶ್ವವಿದ್ಯಾಲಯದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.

ಯಾವುದೇ ಅಕ್ರಮ, ಹಗರಣಗಳಿದ್ದರೂ ನಮ್ಮ ಪೊಲೀಸರು ದಕ್ಷತೆಯಿಂದ ಕೆಲಸ ಮಾಡುತ್ತಿದ್ದಾರೆ. ಯಾವುದೇ ವಿಷಯದಲ್ಲಿ ನಿಷ್ಪಕ್ಷಪಾತವಾಗಿ ತನಿಖೆ ನಡೆಸುತ್ತಿದ್ದಾರೆ.

ಇದರಿಂದ ಕೆಲವರಿಗೆ ತೊಂದರೆಯಾಗಿದೆ. ಹಾಗಾಗಿ ಅವರು ದಿನನಿತ್ಯ ಅನಗತ್ಯವಾಗಿ ಒಂದಿಲ್ಲೊಂದು ಮಾತನಾಡುತ್ತಿದ್ದಾರೆ. ಎಲ್ಲಿ ತನಿಖೆ ಅವರ ಬುಡಕ್ಕೇ ಬಂದು ಬಿಡುತ್ತದೋ ಎಂಬ ಭಯದಿಂದ ಅವರು ಹಾಗೆ ಮಾತನಾಡುತ್ತಿದ್ದಾರೆ. ಆದರೆ, ನಾನು ಸ್ಪಷ್ಟವಾಗಿ ಹೇಳುತ್ತೇನೆ. ನಮ್ಮ ಸರ್ಕಾರ ಯಾರ ವಿರುದ್ಧವೂ ಇಲ್ಲ. ಅಪರಾಧಿಗಳ ವಿರುದ್ಧ ಇದೆ. ಅಪರಾಧಿಗಳನ್ನು ರಕ್ಷಣೆ ಮಾಡುವ ಕೆಲಸವನ್ನು ಯಾರೇ ಮಾಡಿದರೂ ಸಹಿಸುವುದಿಲ್ಲ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...