Tuesday, August 25, 2026
Tuesday, August 25, 2026

ಸುಖಾಸುಮ್ಮನೆ ಕಾಂಗ್ರೆಸ್ ನವರಿಂದ ಆರೋಪ- ಬೊಮ್ಮಾಯಿ

Date:

ಯಾವುದೇ ಹಗರಣ, ಅಕ್ರಮ ಪ್ರಕರಣಗಳೇ ಆಗಲಿ ರಾಜ್ಯ ಪೊಲೀಸ್‌ ಇಲಾಖೆ ದಕ್ಷ ಹಾಗೂ ನಿಷ್ಪಕ್ಷಪಾತ ತನಿಖೆ ಮಾಡುತ್ತಿದೆ. ಇದರಿಂದ ಕೆಲವರಿಗೆ ತೊಂದರೆಯಾಗುತ್ತಿದ್ದು, ಎಲ್ಲಿ ತಮ್ಮ ಬುಡಕ್ಕೇ ಬರುತ್ತದೋ ಎಂಬ ಭಯದಿಂದ ನಿತ್ಯ ಏನನ್ನಾದರೂ ಮಾತನಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪರೋಕ್ಷವಾಗಿ ಪ್ರತಿಪಕ್ಷಗಳ ನಾಯಕರುಗಳಿಗೆ ತಿರುಗೇಟು ನೀಡಿದ್ದಾರೆ.

ಬೆಂಗಳೂರು ನಗರದ ನೃಪತುಂಗ ವಿಶ್ವವಿದ್ಯಾಲಯದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.

ಯಾವುದೇ ಅಕ್ರಮ, ಹಗರಣಗಳಿದ್ದರೂ ನಮ್ಮ ಪೊಲೀಸರು ದಕ್ಷತೆಯಿಂದ ಕೆಲಸ ಮಾಡುತ್ತಿದ್ದಾರೆ. ಯಾವುದೇ ವಿಷಯದಲ್ಲಿ ನಿಷ್ಪಕ್ಷಪಾತವಾಗಿ ತನಿಖೆ ನಡೆಸುತ್ತಿದ್ದಾರೆ.

ಇದರಿಂದ ಕೆಲವರಿಗೆ ತೊಂದರೆಯಾಗಿದೆ. ಹಾಗಾಗಿ ಅವರು ದಿನನಿತ್ಯ ಅನಗತ್ಯವಾಗಿ ಒಂದಿಲ್ಲೊಂದು ಮಾತನಾಡುತ್ತಿದ್ದಾರೆ. ಎಲ್ಲಿ ತನಿಖೆ ಅವರ ಬುಡಕ್ಕೇ ಬಂದು ಬಿಡುತ್ತದೋ ಎಂಬ ಭಯದಿಂದ ಅವರು ಹಾಗೆ ಮಾತನಾಡುತ್ತಿದ್ದಾರೆ. ಆದರೆ, ನಾನು ಸ್ಪಷ್ಟವಾಗಿ ಹೇಳುತ್ತೇನೆ. ನಮ್ಮ ಸರ್ಕಾರ ಯಾರ ವಿರುದ್ಧವೂ ಇಲ್ಲ. ಅಪರಾಧಿಗಳ ವಿರುದ್ಧ ಇದೆ. ಅಪರಾಧಿಗಳನ್ನು ರಕ್ಷಣೆ ಮಾಡುವ ಕೆಲಸವನ್ನು ಯಾರೇ ಮಾಡಿದರೂ ಸಹಿಸುವುದಿಲ್ಲ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...