Sunday, April 27, 2025
Sunday, April 27, 2025

ಹೊಸ ಅನ್ವೇಷಣೆಗಳ ಮೂಲಕ ಮಾರುಕಟ್ಟೆ ಪ್ರವೇಶಿಸಬೇಕು

Date:

ಕಾರ್ಪೊರೆಟ್ ಸಂಸ್ಥೆಗಳು ಹೊಸ ಅನ್ವೇಷಣೆಗಳು ಮತ್ತು ಹೊಸ ಉತ್ಪನ್ನಗಳನ್ನು ಮಾರುಕಟ್ಟೆಗೆ ಕಾಲಕಾಲಕ್ಕೆ ಪರಿಚಯಿಸುತ್ತಿರಬೇಕು. ಇಲ್ಲವಾದರೆ ಜಾಗತಿಕ ಮಾರುಕಟ್ಟೆಯಲ್ಲಿ ಅವುಗಳು ತಮ್ಮ ಅಸ್ತಿತ್ವ ಕಳೆದುಕೊಳ್ಳುತ್ತವೆ. ಈ ರೀತಿಯ ಅನ್ವೇಷಣೆಗೆ ಒತ್ತು ನೀಡುವ ಸಂಸ್ಥೆಗಳ ಬಗ್ಗೆ ಹೂಡಿಕೆದಾರರು ಹೆಚ್ಚು ಗಮನಹರಿಸುವುದು ಸೂಕ್ತ ಎಂದು ಬೆಂಗಳೂರಿನ ಆನಂದ್ ರಾಠಿ ಸಂಸ್ಥೆಯ ವ್ಯವಸ್ಥಾಪಕ ರೆಹಮತ್ ಬೇಗ್ ಅಭಿಪ್ರಾಯಪಟ್ಟರು.

ಕುವೆಂಪು ವಿಶ್ವವಿದ್ಯಾಲಯದ ನಿರ್ವಹಣಾಶಾಸ್ತ್ರ ವಿಭಾಗವು ಬುಧವಾರದಂದು ಪ್ರೊ. ಎಸ್. ಪಿ. ಹಿರೇಮಠ್ ಸಭಾಂಗಣದಲ್ಲಿ “ಕ್ಯಾಪಿಟಲ್ ಮಾರ್ಕೆಟ್ ಡೈನಾಮಿಕ್ಸ್ ಮತ್ತು ಅವಕಾಶಗಳು” ಕುರಿತು ಆಯೋಜಿಸಿದ್ದ ಒಂದು ದಿನದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ಬಿಎಸ್‌ಇ ಮತ್ತು ಎನ್‌ಎಸ್‌ಇ ಷೇರು ಮಾರುಕಟ್ಟೆಗಳಲ್ಲಿ ಹೂಡಿಕೆ ಮಾಡುವಾಗ ಪ್ರಸಕ್ತ ವಿದ್ಯಮಾನಗಳು ಮತ್ತು ಜಾಗತಿಕ ಬೆಳವಣ ಗೆಗಳು ಸಂಸ್ಥೆಗಳ ಮೇಲೆ ಹೇಗೆ ಪ್ರಭಾವ ಬೀರುತ್ತವೆ ಎಂಬುದನ್ನು ಅರಿತು ಹೂಡಿಕೆದಾರರು ಮುಂದಡಿಯಿಡಬೇಕು ಎಂದರು.

ಗ್ರಾಮೀಣ ಭಾಗದ ಶೈಕ್ಷಣಿಕ ಸಂಸ್ಥೆಗಳಲ್ಲಿ ನಿರ್ವಹಣಾಶಾಸ್ತ್ರ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ನಗರ ಕೇಂದ್ರಿತ ಸಂಸ್ಥೆಗಳ ವಿದ್ಯಾರ್ಥಿಗಳಷ್ಟೇ ಬುದ್ಧಿಮತ್ತೆ, ಔದ್ಯೋಗಿಕ ಕೌಶಲ್ಯ ಹೊಂದಿದ್ದು, ಸಂವಹನ ಕೌಶಲ್ಯವನ್ನು ರೂಢಿಸಿಕೊಳ್ಳುವುದರತ್ತ ಹೆಚ್ಚು ಗಮನಹರಿಸಿದರೆ, ಉದ್ಯಮದಲ್ಲಿ ಉತ್ತಮ ಅವಕಾಶ ಪಡೆಯುವುದರಲ್ಲಿ ಸಂಶಯವಿಲ್ಲ ಎಂದು ಅವರು ಹೇಳಿದರು.

ಇದೇ ಸಂದರ್ಭದಲ್ಲಿ ಆನಂದ್ ರಾಠಿ ಸಂಸ್ಥೆಯಿಂದ ಮೌಖಿಕ ಪರೀಕ್ಷೆ ನಡೆಸಿ ವಿಭಾಗದ ಕೆಲವು ವಿದ್ಯಾರ್ಥಿಗಳನ್ನು ಸಂಸ್ಥೆಯ ಮುಂದಿನ ಉದ್ಯೋಗ ಪ್ರಕ್ರಿಯೆಗೆ ಆಯ್ಕೆ ಮಾಡಿಕೊಳ್ಳಲಾಯಿತು. ವಿಭಾಗದ ಅಧ್ಯಕ್ಷ ಪ್ರೊ. ಹೆಚ್. ಎನ್. ರಮೇಶ್, ಪ್ರೊ. ಹಿರೇಮಣ ನಾಯಕ್, ಡಾ. ಕೆ. ಆರ್. ಮಂಜುನಾಥ್, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

National Defense University ಪಠ್ಯಕ್ರಮದ ರಚನೆ & ಕೌಶಲ್ಯಾಭಿವೃದ್ಧಿಗೆಒತ್ತು-ರಾಷ್ಟ್ರೀಯ ರಕ್ಷಾ ವಿವಿಯಲ್ಲಿ ವೃತ್ತಿ ಸಮಾಲೋಚನೆ ಯಶಸ್ವಿ

National Defense University ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯ (RRU), ಶಿವಮೊಗ್ಗ ಕ್ಯಾಂಪಸ್ನಲ್ಲಿ,...

Digital library ಹೊಸ ವಿಷಯ ಕಲಿಕೆ ಸಂಗಡ ಮಕ್ಕಳು ದೈಹಿಕ & ಮಾನಸಿಕ ದೃಢತೆ ಸಾಧಿಸಬೇಕು- ವೀರೇಶ್ ಕ್ಯಾತನಕೊಪ್ಪ

Digital library ಮಕ್ಕಳಿಗೆ ಬೇಸಿಗೆ ಶಿಬಿರಗಳು ಅತ್ಯಂತ ಅವಶ್ಯಕ ಎಂದು ಸೂಗುರು...

CM siddharamaih ಪಹಲ್ಗಾಮ್ ದುರ್ಘಟನೆ‌ ಗುಪ್ತಚರ ವ್ಯವಸ್ಥೆಯ ವೈಫಲ್ಯ- ಮುಖ್ಯಮಂತ್ರಿ ಸಿದ್ಧರಾಮಯ್ಯ

CM siddharamaih ಕರ್ನಾಟಕದಲ್ಲಿ ಅವಧಿ ಮೀರಿ ನೆಲೆಸಿರುವ ವಿದೇಶಿಗರ ಬಗ್ಗೆ...