Monday, February 16, 2026
Monday, February 16, 2026

ಕಂದಾಯ ಇಲಾಖೆಗೆ ಭೂಮಿ ಹಸ್ತಾಂತರ ಬಗರ್ ಹುಕುಂ ಸಮಸ್ಯೆ ಕೊಂಚ ಪರಿಹಾರ

Date:

ಅರಣ್ಯ ಇಲಾಖೆಯಿಂದ ಕಂದಾಯ ಇಲಾಖೆಗೆ 6 ಲಕ್ಷ ಹೆಕ್ಟೇರ್‌ ಭೂಮಿ ಹಸ್ತಾಂತರವಾಗಲಿದೆ.

ಈ ಪೈಕಿ ಸುಮಾರು 5 ಲಕ್ಷ ಹೆಕ್ಟೇರ್‌ ಅನ್ನು 15 ವರ್ಷಗಳಿಂದ ಸಾಗುವಳಿ ಮಾಡುತ್ತಿರುವವರಿಗೆ ಹಂಚಲಾಗುವುದು ಎಂದು ಕಂದಾಯ ಸಚಿವ ಆರ್‌. ಅಶೋಕ್‌ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,

ಇಲಾಖೆಯು ತನ್ನ ಅಗತ್ಯಕ್ಕೆ ಬೇಕಾದ ಭೂಮಿ ಯನ್ನು ಹೊರತುಪಡಿಸಿ ಉಳಿದ ಭೂಮಿಯನ್ನು ರೈತರಿಗೆ ಹಂಚಲಿದೆ. ಈ ಮೂಲಕ ಮೈಸೂರು, ಚಾಮರಾಜನಗರ, ಶಿವಮೊಗ್ಗ ಸಹಿತ ರಾಜ್ಯಾದ್ಯಂತ ಇರುವ ಬಗರ್‌ ಹುಕುಂ ಸಮಸ್ಯೆಗೆ ಶಾಶ್ವತ ತೆರೆ ಬೀಳಲಿದೆ ಎಂದು ತಿಳಿಸಿದರು.

ಈ ಮೊದಲು ಡೀಮ್ಡ್ ಫಾರೆಸ್ಟ್‌ ಎಂದು ಗುರುತಿಸಿ ಅರಣ್ಯ ಇಲಾಖೆ ವಶದಲ್ಲಿದ್ದ 6 ಲಕ್ಷ ಹೆಕ್ಟೇರ್‌ ಭೂಮಿ ಈಗ ಕಂದಾಯ ಇಲಾಖೆಗೆ ಹಸ್ತಾಂತರ ವಾಗಲಿದೆ ಎಂದು ಹೇಳಿದರು.

ಕೊಡಗು, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳಲ್ಲಿ 90 ಸಾವಿರ ಎಕರೆಗೂ ಹೆಚ್ಚು ಭೂಮಿ ಒತ್ತುವರಿ ಯಾಗಿದೆ. ಹೀಗೆ ಒತ್ತುವರಿಯಾದ ಜಮೀನನ್ನು ಒತ್ತುವರಿದಾರರಿಗೇ 30 ವರ್ಷಗಳ ಗುತ್ತಿಗೆ ಆಧಾರದ ಮೇಲೆ ನೀಡಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.

ಕೊಡಗು ಜಿಲ್ಲೆಯಲ್ಲಿ 12 ಸಾವಿರ ಎಕರೆ, ಹಾಸನದಲ್ಲಿ 30 ಸಾವಿರ ಎಕರೆ, ಚಿಕ್ಕಮಗಳೂರು ಜಿಲ್ಲೆಯಲ್ಲಿ 45 ಸಾವಿರ ಎಕರೆ ಭೂಮಿ ಒತ್ತುವರಿ ಯಾಗಿದೆ. ಒತ್ತುವರಿಯಾದ ಭೂಮಿಯಲ್ಲಿ ಕಾಫಿ, ಏಲಕ್ಕಿ ಸಹಿತ ಹಲವು ಬೆಳೆಗಳನ್ನು ಬೆಳೆಯ ಲಾಗುತ್ತಿದೆ. ಈ ಪೈಕಿ ಐದು ಎಕರೆಗಿಂತ ಕಡಿಮೆ ಪ್ರಮಾಣದ ಒತ್ತುವರಿ ಮಾಡಿಕೊಂಡವರ ಸಂಖ್ಯೆ ಶೇ. 90ರಷ್ಟಿದೆ ಎಂದು ಸಚಿವರು ವಿವರಿಸಿದರು.

ಕಂದಾಯ ಇಲಾಖೆಗೆ ಮರಳಿ ಬರುವ ಪೈಕಿ ಎಷ್ಟು ಪ್ರಮಾಣದ ಭೂಮಿ ಸರಕಾರದ ಅಗತ್ಯಕ್ಕೆ ಬೇಕು ಎಂದು ಗುರುತಿಸ ಲಾಗುತ್ತಿದ್ದು, ಆಸ್ಪತ್ರೆ ಸಹಿತ ಸಾರ್ವಜನಿಕ ಸೇವೆಯ ಕಟ್ಟಡಗಳಿಗೆ ಇದು ಬಳಕೆಯಾಗಲಿದೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Navyashree Eeshwaravan Charitable Trust ಒಬ್ಬರ ಪ್ರಾಣವುಳಿಸಿದ ಪುಣ್ಯ ರಕ್ತದಾನದಿಂದ ಬರುತ್ತದೆ- ನವ್ಯಶ್ರೀ ನಾಗೇಶ್

ನೊಂದವರು, ಸಂಕಷ್ಟದಲ್ಲಿರುವವರಿಗೆ ನೆರವಾಗುವ ಮೂಲಕ ಪರಶಿವನ ಅನುಗ್ರಹ ಪಡೆಯಬಹುದು. ಮತ್ತೊಬ್ಬರ ಜೀವ...

Chamber Of Commerce Shivamogga ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು- ಡಿ.ಎಸ್.ಅರುಣ್

Chamber Of Commerce Shivamogga ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ...

Shakti scheme ಇನ್ನುಮುಂದೆ ಫ್ರೀ ಬಸ್ ಪ್ರಯಾಣಕ್ಕೆ ಆಧಾರ್ ಕಾರ್ಡ್ ಬದಲಿಗೆ ಸ್ಮಾರ್ಟ್ ಕಾರ್ಡ್

Shakti scheme ʼಶಕ್ತಿʼ ಯೋಜನೆಯಡಿ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣ ಮಾಡುವ...