Tuesday, August 25, 2026
Tuesday, August 25, 2026

ಉಕ್ರೇನ್ ವೈದ್ಯಕೀಯ ವಿದ್ಯಾರ್ಥಿಗಳಿಗೆ ಸಿದ್ಧಗಂಗಾ ಶ್ರೀಗಳ ಕರೆ

Date:

ಉಕ್ರೇನ್​ನಲ್ಲಿ ವ್ಯಾಸಂಗ ಮಾಡುತ್ತಿದ್ದ ತುಮಕೂರು ಜಿಲ್ಲೆಯ ವೈದ್ಯಕೀಯ ವಿದ್ಯಾರ್ಥಿಗಳು ತಾಯ್ನಾಡಿಗೆ ಮರಳಿದ ಬಳಿಕ ಅವರ ಶೈಕ್ಷಣಿಕ ಪ್ರಗತಿಗೆ ಹಿನ್ನಡೆಯಾಗದಂತೆ ಸಿದ್ಧಗಂಗಾ ವೈದ್ಯಕೀಯ ಮಹಾವಿದ್ಯಾಲಯವು ಅವಕಾಶ ಕಲ್ಪಿಸಿದೆ.

ಒಟ್ಟು 27 ವಿದ್ಯಾರ್ಥಿಗಳು ಯುದ್ಧಾತಂಕದ ಬಳಿಕ ಭಾರತಕ್ಕೆ ಮರಳಿದ್ದರು. ಈ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಆತಂಕದ ಕಾರ್ಮೋಡ ಕವಿದಿರುವ ಸಂದರ್ಭದಲ್ಲಿ ಸಿದ್ಧಗಂಗಾ ಮಠಾಧ್ಯಕ್ಷ ಸಿದ್ದಲಿಂಗ ಶ್ರೀಗಳು ನೆರವಿಗೆ ಧಾವಿಸಿದ್ದಾರೆ. ಮಠದ ಕಾಲೇಜಿನಲ್ಲಿ 16 ವಿದ್ಯಾಥಿರ್ಗಳಿಗೆ ಪ್ರಾಯೋಗಿಕ ತರಗತಿ, ಗ್ರಂಥಾಲಯ ಸೇರಿದಂತೆ ಅಗತ್ಯ ನೆರವು ನೀಡಿ ಕ್ಲಿನಿಕಲ್​ ಸಪೋರ್ಟ್​ ಸಿಗುವಂತೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಸದ್ಯ ವೈದ್ಯಕೀಯ ಕೋರ್ಸ್​ಗೆ ಪೂರಕ ಹಾಗೂ ಬೆಂಬಲವಾಗಿ ಕಾಲೇಜು ಸಿಬ್ಬಂದಿ ನಿಂತಿದ್ದಾರೆ. ಈ ಮಕ್ಕಳ ಮುಂದಿನ ವೈದ್ಯಕೀಯ ಪರೀಕ್ಷೆಗಳ ಬಗ್ಗೆ ಸರ್ಕಾರವೇ ನಿರ್ಧರಿಸಲಿದೆ.

ಉಕ್ರೇನ್​ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ವೈದ್ಯಕೀಯ ವಿದ್ಯಾರ್ಥಿಗಳನ್ನು ಕೇಂದ್ರ ಸರ್ಕಾರ ಸುರಕ್ಷಿತವಾಗಿ ಕರೆತಂದಿದ್ದು ಅವರ ವಿದ್ಯಾಭ್ಯಾಸ ಮೊಟಕಾಗಬಾರದು ಎನ್ನುವ ಉದ್ದೇಶದಿಂದ ಕಾಲೇಜಿನಲ್ಲಿ ಶಿಕ್ಷಣ ಮುಂದುವರಿಸಲು ಅವಕಾಶ ನೀಡಲಾಗಿದೆ ಎಂದು ಸಿದ್ದಲಿಂಗ ಶ್ರೀಗಳು ಮಾಹಿತಿ ನೀಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...