Tuesday, August 25, 2026
Tuesday, August 25, 2026

ಅನಾಥಮಕ್ಕಳಿಗೆ ಆಹ್ಲಾದ ತಂದ ಮಂಗಳೂರು ಡಿಸಿ ಡಾ.ರಾಜೇಂದ್ರ

Date:

ಮಂಗಳೂರು ನಗರದ ಬೊಂದೇಲ್‌ನಲ್ಲಿ ಇರುವ ಬಾಲಕರ ಬಾಲ ಮಂದಿರದಲ್ಲಿ ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಗೆ ಸೇರಿದ 6ರಿಂದ 17 ವರ್ಷದೊಳಗಿನ 13 ಅನಾಥ ಮಕ್ಕಳಿದ್ದು, ಅವರನ್ನು ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಅವರು ಪಿಲಿಕುಳ ನಿಸರ್ಗಧಾಮಕ್ಕೆ ಪ್ರವಾಸ ಕರೆದೊಯ್ದಿದ್ದರು.

ಈ ಮಕ್ಕಳಿಗೆ ಪೋಷಕರಿಲ್ಲದ ನೋವು ಕಾಡಬಾರದೆಂದು ಮಂಗಳವಾರ ಪಿಲಿಕುಳ ನಿಸರ್ಗಧಾಮಕ್ಕೆ ಪ್ರವಾಸ ಕರೆದೊಯ್ಯಲಾಗಿತ್ತು. ಜಿಲ್ಲಾಧಿಕಾರಿಯವರೇ ಈ ಮಕ್ಕಳ ವಾಹನ, ಊಟ-ಉಪಾಹಾರ ವ್ಯವಸ್ಥೆ ಕಲ್ಪಿಸಿದ್ದರು.

ಸಂಜೆ ಸ್ವತಃ ಪಿಲಿಕುಳಕ್ಕೆ ಆಗಮಿಸಿ ಮಕ್ಕಳೊಂದಿಗೆ ಕಾಲ ಕಳೆದರು. ಪಿಲಿಕುಳ ನಿಸರ್ಗಧಾಮದ ಆಯುಕ್ತ ವೆಂಕಟೇಶ್‌, ನಿರ್ದೇಶಕರು, ಕಾರ್ಯನಿರ್ವಹಣಾಧಿಕಾರಿ ಮತ್ತು ಸಿಬಂದಿ ಮಕ್ಕಳಿಗೆ ಅಚ್ಚುಕಟ್ಟಾದ ವ್ಯವಸ್ಥೆ ಕಲ್ಪಿಸಿದರು.

ಮಹಿಳಾ ಮತ್ತು ಮಕ್ಕಳ ಸಂರಕ್ಷಣಾಧಿಕಾರಿ ಯಮುನಾ, ಮಕ್ಕಳ ರಕ್ಷಣ ವಿಭಾಗದ ಸಿಬಂದಿ ಸಂಧ್ಯಾ, ಸೌಭಾಗ್ಯಾ, ಪ್ರತಿಮಾ, ದೀಕ್ಷಾ, ಅಧೀಕ್ಷಕ ಶ್ರೀಧರ್‌, ರಕ್ಷಕ ತಾರಾನಾಥ್‌, ಸ್ವತ್ಛತ ಸಿಬಂದಿ ಲವೀನಾ ಹಾಗೂ ಬಾಲ ಮಂದಿರದ ಸಿಬಂದಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...