Thursday, July 9, 2026
Thursday, July 9, 2026

ಪಕ್ಷಾಂತರ ಸುಳಿವು ನೀಡದ ದತ್ತರ ಚಿತ್ತ?

Date:

ಜೆಡಿಎಸ್ ಪಕ್ಷ ಹಮ್ಮಿಗೊಂಡಿರುವ ಜನತಾ ಜಲಧಾರೆ ಸೇರಿದಂತೆ ಪಕ್ಷದ ಯಾವುದೇ ಚಟುವಟಿಕೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡರ ಮಾನಸ ಪುತ್ರ ವೈ.ಎಸ್.ವಿ.ದತ್ತಾ ಸುಳಿದಿಲ್ಲ. ಆದ್ದರಿಂದ ಪಕ್ಷ ಬಿಡುವ ಚಿಂತನೆಯಲ್ಲಿ ದತ್ತಾ ಇದ್ದಾರಾ ಎನ್ನುವ ಚರ್ಚೆ ಈಗ ರಾಜ್ಯ ರಾಜಕಾರಣದಲ್ಲಿ ಹರಿದಾಡುತ್ತಿದೆ.

ದತ್ತಾ ಕಾಂಗ್ರೆಸ್ ಸೇರುತ್ತಾರೆ ಎನ್ನುವ ಮಾತುಗಳು ಕೂಡ ಇದೆ. ಇದೆಲ್ಲದಕ್ಕೂ ವೈ.ಎಸ್.ವಿ.ದತ್ತಾ ಅಡ್ಡ ಗೋಡೆ ಮೇಲೆ ದೀಪವಿಟ್ಟಂತೆ ನಾನು ಜೆಡಿಎಸ್‌ನಲ್ಲಿ ಇರುತ್ತೇನೆ ಎಂದು ಹೇಳುವುದಕ್ಕೂ ಕಾಲ ಬರಬೇಕು. ಮಾತ್ರವಲ್ಲದೇ ಕಾಂಗ್ರೆಸ್ ಸೇರುತ್ತೇನೆ ಎಂದು ಹೇಳುವುದಕ್ಕೂ ಸಮಯ ಬರಬೇಕೆಂದು ಚಿಕ್ಕಮಗಳೂರಿನಲ್ಲಿ ದತ್ತಾ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಮಾಧ್ಯಮ ಮಿತ್ರರೊಂದಿಗೆ ಮಾತಾನಾಡಿ ಕಾಲ ಬಂದಾಗ ನನ್ನ ನಿರ್ಧಾರ ಹೇಳುತ್ತೇನೆ. ಎಲ್ಲದಕ್ಕೂ ಸಮಯ ಬರಬೇಕೆಂದರು. ಜೆಡಿಎಸ್ ತೊರೆಯುವ ಕುರಿತು ಮಾಧ್ಯಮದವರ ಪ್ರಶ್ನೆಯನ್ನು ನಯವಾಗಿ ತಿರಸ್ಕರಿಸಿದ ವೈ.ಎಸ್.ವಿ.ದತ್ತಾ ಮುಂದಿನ ದಿನಗಳಲ್ಲಿ ನಿರ್ಧಾರ ಪ್ರಕಟಿಸುತ್ತೇನೆಂದು ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...