Wednesday, March 26, 2025
Wednesday, March 26, 2025

ಆಗಸ್ಟ್ 15 ಕ್ಕೆ 75 ಡಿಜಿಟಲ್ ಬ್ಯಾಂಕಿಂಗ್ ಘಟಕ ಉದ್ಘಾಟನೆ

Date:

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು 75ನೇ ಸ್ವಾತಂತ್ರ್ಯೋತ್ಸವ ಪ್ರಯುಕ್ತ ಆಗಸ್ಟ್ 15ನೇ ತಾರೀಕಿನಂದು 75 ಜಿಲ್ಲೆಗಳಲ್ಲಿ 75 ಡಿಜಿಟಲ್ ಬ್ಯಾಂಕಿಂಗ್ ಯೂನಿಟ್​ಗಳನ್ನು ಉದ್ಘಾಟನೆ ಮಾಡಲಿದ್ದಾರೆ ಎಂದು ವರದಿಗಳು ತಿಳಿಸಿವೆ.

ಈ ಘಟಕಗಳು ಒಟ್ಟಾರೆಯಾಗಿ ಕಾಗದರಹಿತವಾಗಿ ಇರುತ್ತವೆ. ಮತ್ತು ಇವುಗಳನ್ನು ಡಿಜಿಟಲ್ ಆರ್ಥಿಕ ಸಾಕ್ಷರತಾ ಕೇಂದ್ರಗಳನ್ನಾಗಿ ಬಳಸಿಕೊಳ್ಳಲಾಗುವುದು. ಕೇಂದ್ರದಿಂದ 75 ಜಿಲ್ಲೆಗಳ ಹೆಸರನ್ನು ಅಂತಿಮಗೊಳಿಸಲಾಗಿದೆ.

ಮೂಲಸೌಕರ್ಯ ಒದಗಿಸಲು ಹಾಗೂ ಡಿಜಿಟಲ್ ಬ್ಯಾಂಕಿಂಗ್ ಯೂನಿಟ್​ಗಳ ಸಿಬ್ಬಂದಿಗೆ ತರಬೇತಿ ನೀಡುವಂತೆ ಬ್ಯಾಂಕ್​ಗಳಿಗೆ ತಿಳಿಸಲಾಗಿದೆ ಎಂದು ಮೇ 6ನೇ ತಾರೀಕಿನಂದು ಎಕನಾಮಿಕ್ ಟೈಮ್ಸ್ ವರದಿ ಮಾಡಿದೆ.

ಡಿಜಿಟಲ್ ಬ್ಯಾಂಕಿಂಗ್ ಯೂನಿಟ್​ಗಳನ್ನು ಸ್ಥಾಪಿಸಲು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾವು ಏಪ್ರಿಲ್ 8ನೇ ತಾರೀಕಿನಂದು ಮಾರ್ಗದರ್ಶಿ ಸೂತ್ರಗಳನ್ನು ಬಿಡುಗಡೆ ಮಾಡಿದೆ. ಬಜೆಟ್​ನಲ್ಲಿ ಘೋಷಣೆ ಮಾಡಿದ ಬೆನ್ನಿಗೆ ತೆಗೆದುಕೊಂಡಿರುವ ತೀರ್ಮಾನ ಇದು. ಡಿಬಿಯು ಎಂಬುದು ವಿಶೇಷವಾಗಿ ರೂಪುಗೊಂಡ ಬಿಜಿನೆಸ್ ಯೂನಿಟ್/ಹಬ್. ಅಲ್ಲಿ ಕೆಲವು ಡಿಜಿಟಲ್ ಮೂಲಸೌಕರ್ಯ ಇರುತ್ತದೆ.

ಡಿಜಿಟಲ್ ಬ್ಯಾಂಕಿಂಗ್ ಉತ್ಪನ್ನಗಳು ಹಾಗೂ ಸೇವೆಗಳನ್ನು ಒದಗಿಸುವುದಕ್ಕೆ ಬೇಕಾದಷ್ಟು ಸವಲತ್ತು ಇರುತ್ತದೆ. ಡಿಬಿಯು ಉದ್ದೇಶ ಏನೆಂದರೆ, ಡಿಜಿಟಲ್ ಹಣಕಾಸು ಸೇವೆ ವಿಸ್ತರಣೆ ಮತ್ತು ಆರ್ಥಿಕ ಒಳಗೊಳ್ಳುವಿಕೆ.
ಮಾರ್ಗದರ್ಶಿ ಸೂತ್ರದ ಪ್ರಕಾರ, ಶೆಡ್ಯೂಲ್ಡ್ ವಾಣಿಜ್ಯ ಬ್ಯಾಂಕ್​ಗಳಾಗಿದ್ದು, ಈ ಹಿಂದಿನ ಡಿಜಿಟಲ್ ಬ್ಯಾಂಕಿಂಗ್ ಅನುಭವ ಇದ್ದಲ್ಲಿ ಟಯರ್​ 1ರಿಂದ ಟಯರ್ 6 ಕೇಂದ್ರಗಳಲ್ಲಿ ಡಿಬಿಯುಗಳನ್ನು ತೆರೆಯಲು ಅನುಮತಿಸಲಾಗುತ್ತದೆ. ಪ್ರತಿ ಪ್ರಕರಣದಲ್ಲೂ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಅನುಮತಿ ಬೇಕಾಗುವುದಿಲ್ಲ. ಬ್ಯಾಂಕ್​ಗಳ ಡಿಬಿಯುಗಳನ್ನು ಬ್ಯಾಂಕ್​ಗಳ ಔಟ್​ಲೆಟ್​ಗಳಂತೆ ಪರಿಗಣಿಸಲಾಗುತ್ತದೆ ಎಂದು ಆರ್​ಬಿಐ ಹೇಳಿದೆ.

ಈಗಿರುವ ಬ್ಯಾಂಕಿಂಗ್ ಔಟ್​ಲೆಟ್​ಗಿಂತ ಫಾರ್ಮಾಟ್​ನಲ್ಲಿ, ರಚನೆಯಲ್ಲಿ ಪ್ರತ್ಯೇಕವಾಗಿರುತ್ತದೆ. ಡಿಜಿಟಲ್ ಬ್ಯಾಂಕಿಂಗ್ ಬಳಕೆದಾರರಿಗೆ ಸೂಕ್ತವಾಗಿರುತ್ತದೆ ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of School Education ಮಾರ್ಚ್ 27 & 28 ರಂದು ಜಿಲ್ಲಾಮಟ್ಟದ ದೈಹಿಕ ಶಿಕ್ಷಣ ಶಿಕ್ಷಕರ‌ ಕ್ರೀಡಾಕೂಟ

Department of School Education ಶಾಲಾ ಶಿಕ್ಷಣ ಇಲಾಖೆಯು 2024-25ನೇ ಸಾಲಿನ...

BJP Protest 18 ಶಾಸಕರ ಅಮಾನತು. ಸರ್ಕಾರದಿಂದ ಅಧಿಕಾರ ದುರುಪಯೋಗ. ಜಿಲ್ಲಾ ಬಿಜೆಪಿ‌‌ ಪ್ರತಿಭಟನೆ

BJP Protest ಮುಸ್ಲಿಮರಿಗೆ ಅಸಂವಿಧಾನಿಕ 4% ಮೀಸಲಾತಿ, SCP-TSP ನಿಧಿಗಳ ದುರ್ಬಳಕೆ,...

ಶೀಘ್ರ ಬಾಡಿಗೆ ಕರಾರನ್ನ ನವೀಕರಣಗೊಳಿಸಿ- ಪಿ.ಮಂಜುನಾಥ್

ಶಿವಮೊಗ್ಗ ನಗರದ ಬಸ್ ನಿಲ್ದಾಣದ ಅವರಣದಲ್ಲಿರುವ ಅಂಗಡಿ ಮಳಿಗೆಗಳ ಬಾಡಿಗೆ ಕರಾರು...

World Tuberculosis Day ಕ್ಷಯರೋಗವು ಹರಡುವ ರೋಗ ಕುಟುಂಬಸ್ಥರು ಬಹಳ ಎಚ್ಚರದಿಂದಿರಬೇಕು- ಡಾ.ಕೆ. ಎಸ್.ನಟರಾಜ್

World Tuberculosis Day ಕ್ಷಯರೋಗ ಒಬ್ಬರಿಂದ ಒಬ್ಬರಿಗೆ ಹರಡುವ ರೋಗವಾಗಿದ್ದು ಭಾರತ...