Friday, October 4, 2024
Friday, October 4, 2024

ಕೇದಾರನಾಥ ದೇಗುಲದ ಬಾಗಿಲು ತೆರೆದಿವೆ

Date:

ಸುಪ್ರಸಿದ್ಧ ಕೇದಾರನಾಥ ಧಾಮ ಇಂದಿನಿಂದ ಭಕ್ತರ ದರ್ಶನಕ್ಕೆ ಮುಕ್ತವಾಗಿದೆ.
ಬೆಳಗ್ಗೆ ದೇಗುಲದ ಬಾಗಿಲು ತೆರೆಯುವುದಕ್ಕೂ ಮುಂಚಿತವಾಗಿ ಧಾರ್ಮಿಕ ವಿಧಿ ಮತ್ತು ವೈದಿಕ ಮಂತ್ರಗಳ ಪಠಣ ನಡೆಯಿತು. ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ ಉಪಸ್ಥಿತರಿದ್ದರು.

ಪುರಾಣಪ್ರಸಿದ್ಧ ದೇವಸ್ಥಾನವನ್ನು 15 ಕ್ವಿಂಟಲ್​ ಹೂವುಗಳಿಂದ ಆಕರ್ಷಕವಾಗಿ ಅಲಂಕರಿಸಲಾಗಿದೆ. 10 ಸಾವಿರಕ್ಕೂ ಹೆಚ್ಚು ಯಾತ್ರಾರ್ಥಿಗಳು ಕೇದಾರನಾಥನ ದರ್ಶನ ಭಾಗ್ಯಕ್ಕೆ ಹಾತೊರೆಯುತ್ತಿದ್ದಾರೆ.ದೇವಾಲಯ ಓಪನ್​ ಆಗ್ತಿದ್ದಂತೆ ಮೊದಲಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರಿನಲ್ಲಿ ಪೂಜೆ ಸಹ ಸಲ್ಲಿಸಲಾಗಿದೆ.

ಕೊರೋನಾ ಮುನ್ನೆಚ್ಚರಿಕೆ ಕ್ರಮವಾಗಿ ಗಂಗೋತ್ರಿ, ಯಮುನೋತ್ರಿ, ಕೇದಾರನಾಥ ಮತ್ತು ಬದರಿನಾಥ ದರ್ಶನಕ್ಕೆ ನಿಗದಿತ ಕಾಲಮಿತಿಯಲ್ಲಿ ಯಾತ್ರಾರ್ಥಿಗಳಿಗೆ ಅವಕಾಶ ನೀಡಲಾಗಿದೆ. ಚಾರ್​ ಧಾಮ್​ಗೆ ತೆರಳುವ ಯಾತ್ರಿಗಳು ಆನ್​ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಲು ದೇಗುಲದ ವೆಬ್​ಸೈಟ್​ಗೆ ಭೇಟಿ ನೀಡಬೇಕಾಗುತ್ತದೆ.

ಬದರಿನಾಥಕ್ಕೆ 15,000, ಕೇದಾರನಾಥಕ್ಕೆ 12,000, ಗಂಗೋತ್ರಿಗೆ 7,000 ಮತ್ತು ಯಮುನೋತ್ರಿಗೆ 4,000 ಯಾತ್ರಾರ್ಥಿಗಳಿಗೆ ಮಾತ್ರ ಪ್ರವೇಶ ನೀಡಲಾಗಿದೆ. ಈ ಸ್ಥಳಗಳಿಗೆ ಭೇಟಿ ನೀಡಲು ಕೋವಿಡ್ ಪರೀಕ್ಷೆ ಕಡ್ಡಾಯ. ಲಸಿಕೆ ಪಡೆದುಕೊಂಡಿರುವ ಪ್ರಮಾಣ ಪತ್ರ ಒದಗಿಸುವುದು ಕೂಡಾ ಅವಶ್ಯಕವಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Jawahar Navodaya Vidyalaya ಗಾಜನೂರಿನ ನವೋದಯ ಶಾಲಾ ಪ್ರವೇಶಾತಿ 2025-26 ಪರೀಕ್ಷೆಗೆ ಆನ್ ಲೈನ್ ಅರ್ಜಿ ಆಹ್ವಾನ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯವು 2025-26ನೇ ಸಾಲಿಗೆ 9...

Department of Parliamentary Affairs and Legislation ಅಕ್ಟೋಬರ್ 5 ರಂದು ನಡೆಯುವ “ಯುವ ಸಂಸತ್” ಸ್ಥಳ‌ ಬದಲಾವಣೆ ಗಮನಿಸಿ

Department of Parliamentary Affairs and Legislation ಸಂಸದೀಯ ಮತ್ತು ವ್ಯವಹಾರಗಳು...

MESCOM ಅ.4 ರಿಂದ7 ವರೆಗೆ ಮೆಸ್ಕಾಂ ಆನ್ ಲೈನ್ ಸೇವೆ ತಾತ್ಕಾಲಿಕ ಅಲಭ್ಯ

MESCOM ಅ.04ರಿಂದ 07 ರ ವರೆಗೆ ಮೆಸ್ಕಾಂ ಮಾಹಿತಿ ತಂತ್ರಜ್ಞಾನ...

Shivamogga Dasara ಶಿವಮೊಗ್ಗ ಚಲನಚಿತ್ರ ದಸರಾ ಚಾಲನೆಗೆ ಹಿರಿಯ ನಟಿ ಉಮಾಶ್ರೀ ಆಗಮನ

Shivamogga Dasara ಶಿವಮೊಗ್ಗ ಮಹಾ ನಗರ ಪಾಲಿಕೆ ವತಿಯಿಂದ ಆಯೋಜಿಸಲಾಗಿರುವ...