Tuesday, March 24, 2026
Tuesday, March 24, 2026

ಕೇದಾರನಾಥ ದೇಗುಲದ ಬಾಗಿಲು ತೆರೆದಿವೆ

Date:

ಸುಪ್ರಸಿದ್ಧ ಕೇದಾರನಾಥ ಧಾಮ ಇಂದಿನಿಂದ ಭಕ್ತರ ದರ್ಶನಕ್ಕೆ ಮುಕ್ತವಾಗಿದೆ.
ಬೆಳಗ್ಗೆ ದೇಗುಲದ ಬಾಗಿಲು ತೆರೆಯುವುದಕ್ಕೂ ಮುಂಚಿತವಾಗಿ ಧಾರ್ಮಿಕ ವಿಧಿ ಮತ್ತು ವೈದಿಕ ಮಂತ್ರಗಳ ಪಠಣ ನಡೆಯಿತು. ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ ಉಪಸ್ಥಿತರಿದ್ದರು.

ಪುರಾಣಪ್ರಸಿದ್ಧ ದೇವಸ್ಥಾನವನ್ನು 15 ಕ್ವಿಂಟಲ್​ ಹೂವುಗಳಿಂದ ಆಕರ್ಷಕವಾಗಿ ಅಲಂಕರಿಸಲಾಗಿದೆ. 10 ಸಾವಿರಕ್ಕೂ ಹೆಚ್ಚು ಯಾತ್ರಾರ್ಥಿಗಳು ಕೇದಾರನಾಥನ ದರ್ಶನ ಭಾಗ್ಯಕ್ಕೆ ಹಾತೊರೆಯುತ್ತಿದ್ದಾರೆ.ದೇವಾಲಯ ಓಪನ್​ ಆಗ್ತಿದ್ದಂತೆ ಮೊದಲಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರಿನಲ್ಲಿ ಪೂಜೆ ಸಹ ಸಲ್ಲಿಸಲಾಗಿದೆ.

ಕೊರೋನಾ ಮುನ್ನೆಚ್ಚರಿಕೆ ಕ್ರಮವಾಗಿ ಗಂಗೋತ್ರಿ, ಯಮುನೋತ್ರಿ, ಕೇದಾರನಾಥ ಮತ್ತು ಬದರಿನಾಥ ದರ್ಶನಕ್ಕೆ ನಿಗದಿತ ಕಾಲಮಿತಿಯಲ್ಲಿ ಯಾತ್ರಾರ್ಥಿಗಳಿಗೆ ಅವಕಾಶ ನೀಡಲಾಗಿದೆ. ಚಾರ್​ ಧಾಮ್​ಗೆ ತೆರಳುವ ಯಾತ್ರಿಗಳು ಆನ್​ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಲು ದೇಗುಲದ ವೆಬ್​ಸೈಟ್​ಗೆ ಭೇಟಿ ನೀಡಬೇಕಾಗುತ್ತದೆ.

ಬದರಿನಾಥಕ್ಕೆ 15,000, ಕೇದಾರನಾಥಕ್ಕೆ 12,000, ಗಂಗೋತ್ರಿಗೆ 7,000 ಮತ್ತು ಯಮುನೋತ್ರಿಗೆ 4,000 ಯಾತ್ರಾರ್ಥಿಗಳಿಗೆ ಮಾತ್ರ ಪ್ರವೇಶ ನೀಡಲಾಗಿದೆ. ಈ ಸ್ಥಳಗಳಿಗೆ ಭೇಟಿ ನೀಡಲು ಕೋವಿಡ್ ಪರೀಕ್ಷೆ ಕಡ್ಡಾಯ. ಲಸಿಕೆ ಪಡೆದುಕೊಂಡಿರುವ ಪ್ರಮಾಣ ಪತ್ರ ಒದಗಿಸುವುದು ಕೂಡಾ ಅವಶ್ಯಕವಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

National Horticulture Mission Scheme ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಪ. ಜಾ./ ಪ. ಪಂ. ರೈತರಿಂದ ಅರ್ಜಿ ಅಹ್ವಾನ

National Horticulture Mission Scheme 2025-26ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್...

S.N. Channabasappa ಮತಪತ್ರ ಪದ್ಧತಿ ಜಾರಿಗೆ ತರುತ್ತಿರುವ ಸರ್ಕಾರದ ನಿರ್ಧಾರಕ್ಕೆ ಸದನದಲ್ಲಿ ಶಾಸಕ ಎಸ್.ಎನ್. ಚನ್ನಬಸಪ್ಪ ತೀವ್ರ ವಿರೋಧ

S.N. Channabasappa ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಚುನಾವಣಾ ಪ್ರಕ್ರಿಯೆಯನ್ನು ಮತ್ತಷ್ಟು ಡಿಜಿಟಲೀಕರಣಗೊಳಿಸುವ...

MESCOM ಸಾಗರ : ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಮಾ 26 ರಂದು...

Manasadhara Trust ಸರ್ಕಾರಿ ಶಾಲಾ ಮಕ್ಕಳಿಗಾಗಿ ಮನಃಸ್ಫೂರ್ತಿ ಬೇಸಿಗೆ ಶಿಬಿರ

Manasadhara Trust ಮಾನಸಾಧಾರ ಟ್ರಸ್ಟ್(ರಿ), ಮನಃಸ್ಫೂರ್ತಿ ವಿಶೇಷ ಶಾಲೆ(ರಿ) ಮತ್ತು ಕಲಿಕಾ...