Sunday, March 23, 2025
Sunday, March 23, 2025

ಕೇದಾರನಾಥ ದೇಗುಲದ ಬಾಗಿಲು ತೆರೆದಿವೆ

Date:

ಸುಪ್ರಸಿದ್ಧ ಕೇದಾರನಾಥ ಧಾಮ ಇಂದಿನಿಂದ ಭಕ್ತರ ದರ್ಶನಕ್ಕೆ ಮುಕ್ತವಾಗಿದೆ.
ಬೆಳಗ್ಗೆ ದೇಗುಲದ ಬಾಗಿಲು ತೆರೆಯುವುದಕ್ಕೂ ಮುಂಚಿತವಾಗಿ ಧಾರ್ಮಿಕ ವಿಧಿ ಮತ್ತು ವೈದಿಕ ಮಂತ್ರಗಳ ಪಠಣ ನಡೆಯಿತು. ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ ಉಪಸ್ಥಿತರಿದ್ದರು.

ಪುರಾಣಪ್ರಸಿದ್ಧ ದೇವಸ್ಥಾನವನ್ನು 15 ಕ್ವಿಂಟಲ್​ ಹೂವುಗಳಿಂದ ಆಕರ್ಷಕವಾಗಿ ಅಲಂಕರಿಸಲಾಗಿದೆ. 10 ಸಾವಿರಕ್ಕೂ ಹೆಚ್ಚು ಯಾತ್ರಾರ್ಥಿಗಳು ಕೇದಾರನಾಥನ ದರ್ಶನ ಭಾಗ್ಯಕ್ಕೆ ಹಾತೊರೆಯುತ್ತಿದ್ದಾರೆ.ದೇವಾಲಯ ಓಪನ್​ ಆಗ್ತಿದ್ದಂತೆ ಮೊದಲಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರಿನಲ್ಲಿ ಪೂಜೆ ಸಹ ಸಲ್ಲಿಸಲಾಗಿದೆ.

ಕೊರೋನಾ ಮುನ್ನೆಚ್ಚರಿಕೆ ಕ್ರಮವಾಗಿ ಗಂಗೋತ್ರಿ, ಯಮುನೋತ್ರಿ, ಕೇದಾರನಾಥ ಮತ್ತು ಬದರಿನಾಥ ದರ್ಶನಕ್ಕೆ ನಿಗದಿತ ಕಾಲಮಿತಿಯಲ್ಲಿ ಯಾತ್ರಾರ್ಥಿಗಳಿಗೆ ಅವಕಾಶ ನೀಡಲಾಗಿದೆ. ಚಾರ್​ ಧಾಮ್​ಗೆ ತೆರಳುವ ಯಾತ್ರಿಗಳು ಆನ್​ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಲು ದೇಗುಲದ ವೆಬ್​ಸೈಟ್​ಗೆ ಭೇಟಿ ನೀಡಬೇಕಾಗುತ್ತದೆ.

ಬದರಿನಾಥಕ್ಕೆ 15,000, ಕೇದಾರನಾಥಕ್ಕೆ 12,000, ಗಂಗೋತ್ರಿಗೆ 7,000 ಮತ್ತು ಯಮುನೋತ್ರಿಗೆ 4,000 ಯಾತ್ರಾರ್ಥಿಗಳಿಗೆ ಮಾತ್ರ ಪ್ರವೇಶ ನೀಡಲಾಗಿದೆ. ಈ ಸ್ಥಳಗಳಿಗೆ ಭೇಟಿ ನೀಡಲು ಕೋವಿಡ್ ಪರೀಕ್ಷೆ ಕಡ್ಡಾಯ. ಲಸಿಕೆ ಪಡೆದುಕೊಂಡಿರುವ ಪ್ರಮಾಣ ಪತ್ರ ಒದಗಿಸುವುದು ಕೂಡಾ ಅವಶ್ಯಕವಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

PM Yoga Awards 2025 ಪ್ರಧಾನಮಂತ್ರಿಗಳ ಯೋಗ ಪ್ರಶಸ್ತಿಗೆ ಅರ್ಜಿ ಆಹ್ವಾನ

PM Yoga Awards 2025 ಯೋಗ ಕ್ರೀಡೆಗೆ ಅತ್ಯುನ್ನತವಾದ ಕೊಡುಗೆಯನ್ನು ನೀಡಿರುವಂತಹ...

Department of Tourism ಕೌಶಲ್ಯಾಭಿವೃದ್ಧಿಗೆ ಪ.ಜಾ/ ಪ.ಪಂಗಡದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

Department of Tourism ಜಿಲ್ಲಾ ಪ್ರವಾಸೋದ್ಯಮ ಇಲಾಖೆಯು ಮೈಸೂರಿನ ಫುಡ್ ಕ್ರಾಫ್ಟ್...

Shivamogga News ವಹಿಸಿರುವ ಜವಾಬ್ದಾರಿಯನ್ನ ಪರಿಣಾಮಕಾರಿಯಾಗಿ ನಿರ್ವಹಿಸುವೆ- ವಸಂತ ಹೋಬಳಿದಾರ್

Shivamogga News ಸಮಾಜದಲ್ಲಿ ಸೇವಾ ಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ಮಾಡುವಲ್ಲಿ ರೋಟರಿಯಂತಹ ಸಂಸ್ಥೆಗಳು...

Rotary Club Shivamogga ಸಮಾಜದಲ್ಲಿ ಪ್ರತಿಫಲಾಪೇಕ್ಷೆಯಿಲ್ಲದೆ ಸಹಾಯಮಾಡುವುದು ರೋಟರಿಸಂಸ್ಥೆಯ ಗುರಿ-ಸಿ.ಎ.ದೇವ್ ಆನಂದ್

Rotary Club Shivamogga ವಿಶ್ವದ ಎಲ್ಲ ದೇಶಗಳಲ್ಲಿ ಹೆಚ್ಚು ಸೇವಾ ಕಾರ್ಯಗಳನ್ನು...