Monday, December 8, 2025
Monday, December 8, 2025

ಚರ್ಚಾಸ್ಪದವಾಗಿರುವ ಕೋವಿಡ್ ಸಾವಿನ ಸಂಖ್ಯೆ

Date:

ಕೋವಿಡ್ ಸಾವಿನ ಸಂಖ್ಯೆ ಮುಚ್ಚಿಟ್ಟ ಆರೋಪ ವಿಚಾರವಾಗಿ ಕಾಂಗ್ರೆಸ್ ಮುಖಂಡ ರಾಮಲಿಂಗಾರೆಡ್ಡಿ ಕೇಂದ್ರದ ವಿರುದ್ಧ ಕಿಡಿಕಾರಿದ್ದಾರೆ.

ಈ ಸಂಬಂಧ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ನಾನು ಕೋವಿಡ್ ಡೆತ್ ಬಗ್ಗೆ ಪ್ರಶ್ನೆ ಕೇಳಿದ್ದೆ.
ಅಂಕಿ ಅಂಶಗಳ ಸಮೇತ ಸಾವಿನ ಸಂಖ್ಯೆ ಎತ್ತಿದ್ದೆ. ಕೋವಿಡ್ ಸಾವಿನ ಸಂಖ್ಯೆ ಮುಚ್ಚಿಟ್ಟಿದ್ದರು. ಈಗ ಡಬ್ಲ್ಯೂ‌ಹೆಚ್​ಒನವರು ವರದಿ ಕೊಟ್ಟಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಳದ ವರದಿ ಕೊಟ್ಟಿದ್ದಾರೆ. ಇವರು ಸಾವಿನ ಸಂಖ್ಯೆ ಕಡಿಮೆ ನೀಡಿದ್ದರು ಎಂದು ರಾಮಲಿಂಗಾ ರೆಡ್ಡಿ ಆರೋಪಿಸಿದರು.

ನಾನು 42 ಲಕ್ಷ ಜನ ಸಾವನ್ನಪ್ಪಿದ್ದಾರೆ ಎಂದಿದ್ದೆ. ವರದಿಯಲ್ಲಿ 47 ಲಕ್ಷ ಜನ ಸತ್ತಿದ್ದಾರೆಂದಿದೆ. ಕೇಂದ್ರ ಸರ್ಕಾರ ಈಗ ಏನು‌ ಹೇಳುತ್ತದೆ. 2019ಕ್ಕೆ ಹೋಲಿಕೆ ಮಾಡಿದರೆ 2021ರಲ್ಲಿ ಹೆಚ್ಚು ಸಾವನ್ನಪ್ಪಿದ್ದಾರೆ.

ಒಂದೆರಡು ಮಾಧ್ಯಮ ಬಿಟ್ಟರೆ ಎಲ್ಲರೂ ವರದಿ ಮಾಡಿದ್ದಾರೆ. ಕೋವಿಡ್ ಸಮರ್ಥವಾಗಿ ಎದುರಿಸಿದ್ದೇವೆ ಎಂದಿದ್ದರು, ಜಂಭ ಕೊಚ್ಚಿಕೊಳ್ಳುತ್ತಿದ್ದರು.

ಯಾವ ಸಾಂಕ್ರಾಮಿಕ ರೋಗದ ವೇಳೆಯೂ ಇಷ್ಟು ಸಾವಾಗಿರಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaiah ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹತ್ಯೆ, ಸೀಎಂ ಸಿದ್ಧರಾಮಯ್ಯ ಖಂಡನೆ

CM Siddharamaiah ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದ ಕಾಂಗ್ರೆಸ್ ಕಾರ್ಯಕರ್ತ...

ಶಾಲಾ ಬಸ್ ಅತಿವೇಗ ಚಾಲನೆ, ಬೈಕಿಗೆ ಢಿಕ್ಕಿ‌ ಸವಾರನ ಸ್ಥಿತಿ ಗಂಭೀರ

ಶಾಲಾ ಪ್ರವಾಸಕ್ಕೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ಸು ಮತ್ತು ಬೈಕ್ ನಡುವೆ...

B.Y.Raghavendra ಆರ್.ಎಸ್.ಎಸ್. ಗೃಹ ಸಂಪರ್ಕ ಅಭಿಯಾನದಲ್ಲಿ ಸಂಸದ ರಾಘವೇಂದ್ರ ಭಾಗಿ.

B.Y.Raghavendra ರಾಷ್ಟ್ರೀಯ ಸ್ವಯಂಸೇವಕ ಸಂಘದ ನೂರನೇ ವರ್ಷದ ಪ್ರಯುಕ್ತ, ಇಂದು...