Wednesday, July 9, 2025
Wednesday, July 9, 2025

ಗುಟೆರಸ್ ಅವರ ಸಲಹೆಯನ್ನ ಅಂಗೀಕರಿಸಿದ ವಿಶ್ವಸಂಸ್ಥೆ

Date:

ರಷ್ಯಾ ಹಾಗೂ ಉಕ್ರೇನ್ ಸಂಘರ್ಷಕ್ಕೆ ಶಾಂತಿಯುತ ಪರಿಹಾರವನ್ನು ಕಂಡುಕೊಳ್ಳಬೇಕು ಎಂಬ ವಿಶ್ವಸಂಸ್ಥೆಯ ಮಹಾಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರಸ್ ಅವರ ಹೇಳಿಕೆಯನ್ನು ಭದ್ರತಾ ಮಂಡಳಿಯು ಸರ್ವಾನುಮತದಿಂದ ಅಂಗೀಕರಿಸಿದೆ.

ಅವರ ಪ್ರಯತ್ನಗಳಿಗೆ ಮಂಡಳಿಯು ಬಲವಾದ ಬೆಂಬಲವನ್ನು ವ್ಯಕ್ತಪಡಿಸಿದೆ.

ನಿನ್ನೆ ಶುಕ್ರವಾರದ ನಡೆದ ಕಿರು ಸಭೆಯಲ್ಲಿ ಅಂಗೀಕರಿಸಿದ ಹೇಳಿಕೆಯಲ್ಲಿ, ಉಕ್ರೇನ್‌ನಲ್ಲಿ ನಡೆಯುತ್ತಿರುವ ಆಕ್ರಮಣವನ್ನು ಯುದ್ಧ , ಸಂಘರ್ಷ ಅಥವಾ ಆಕ್ರಮಣ ಎಂದು ಉಲ್ಲೇಖಿಸಿಲ್ಲ. ಏಕೆಂದರೆ, ಮಂಡಳಿಯ ಹಲವು ಸದಸ್ಯರು ರಷ್ಯಾವು ಉಲ್ಲೇಖಿಸಿದಂತೆ ಉಕ್ರೇನ್ ಮೇಲಿನ ದಾಳಿಯನ್ನು ವಿಶೇಷ ಮಿಲಿಟರಿ ಕಾರ್ಯಾಚರಣೆ ಎಂದು ಕರೆಯುತ್ತಿದ್ದಾರೆ.

ಆದರೆ, ಭದ್ರತಾ ಮಂಡಳಿಯಲ್ಲಿ ವಿಟೊ ಅಧಿಕಾರವನ್ನು ಹೊಂದಿರುವ ರಷ್ಯಾ, ಈ ಹಿಂದಿನ ಹೇಳಿಕೆ ಅಥವಾ ನಿರ್ಣಯಗಳನ್ನು ನಿರ್ಬಂಧಿಸಿದ ರೀತಿಯೇ ಇದನ್ನೂ ನಿರ್ಬಂಧಿಸುವ ಸಾಧ್ಯತೆ ಇದೆ.

ಉಕ್ರೇನ್‌ನಲ್ಲಿ ಶಾಂತಿ ಮತ್ತು ಭದ್ರತೆಯ ನಿರ್ವಹಣೆಯ ಬಗ್ಗೆ ತೀವ್ರ ಕಳವಳವನ್ನು ವ್ಯಕ್ತಪಡಿಸಲಾಗಿದೆ. ಎಲ್ಲಾ ಸದಸ್ಯ ರಾಷ್ಟ್ರಗಳು ವಿಶ್ವಸಂಸ್ಥೆಯ ಅಡಿಯಲ್ಲಿ, ತಮ್ಮ ಅಂತರರಾಷ್ಟ್ರೀಯ ವಿವಾದಗಳನ್ನು ಶಾಂತಿಯುತ ವಿಧಾನಗಳಿಂದ ಪರಿಹರಿಸುವುದಾಗಿ ಒಪ್ಪಿಗೆ ಸೂಚಿಸಿರುವುದನ್ನು ಪುನರುಚ್ಚರಿಸಲಾಯಿತು.

ಮಾಸ್ಕೋ ಮತ್ತು ಕೀವ್‌ಗೆ ಇತ್ತೀಚಿಗೆ ಭೇಟಿ ನೀಡಿದ್ದ ಗುಟೆರೆಸ್, ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮತ್ತು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿ ಅವರೊಂದಿಗೆ ನಾಗರಿಕರನ್ನು ಸ್ಥಳಾಂತರಿಸಲು ಅನುವುಮಾಡಿಕೊಡುವ ಕುರಿತಂತೆ ಮನವೊಲಿಸಿದ್ದರು. ಅದರಂತೆ, ಆಗ್ನೇಯ ಬಂದರು ನಗರವಾದ ಮರಿಯುಪೋಲ್ ಮತ್ತು ಅಜೋವ್ ಸ್ಟಾಲ್ ಉಕ್ಕಿನ ಘಟಕದಿಂದ ಜನರನ್ನು ಸ್ಥಳಾಂತರಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddaramaiah ನವದೆಹಲಿಯಲ್ಲಿ”ಸಿಎಂ”ಸಿದ್ಧರಾಮಯ್ಯ ಅವರಿಂದ ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್ ಭೇಟಿ

CM Siddaramaiah ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಯಲ್ಲಿ ಇಂದು ರಕ್ಷಣಾ ಸಚಿವ...

Rotary Club ರೋಟರಿ ಕ್ಲಬ್ ರಿವರ್ ಸೈಡ್ ನೂತನ ಪದಾಧಿಕಾರಿಗಳಿಗೆ ಶುಭಹಾರೈಸಿ ಸನ್ಮಾನ

Rotary Club 24 ವರ್ಷಗಳಿಂದ ನಿರಂತರವಾಗಿ ಮನುಕುಲದ ಸೇವೆಯಲ್ಲಿ ಹಾಗೂ ಸಮಾಜಮುಖಿ...

Sitaramchandra Temple ಭಗವದ್ಗೀತೆಯ ಜ್ಞಾನದಿಂದ ಸಮಾಜದಲ್ಲಿ ಶಾಂತಿ & ಮಾನವೀಯತೆ ಸ್ಥಾಪನೆ- ಅಶೋಕ ಭಟ್

Sitaramchandra Temple ಭಗವದ್ಗೀತಾ ಜ್ಞಾನವನ್ನು ಪ್ರತಿಯೊಬ್ಬರು ಅಳವಡಿಸಿಕೊಂಡರೆ ಸರ್ವರೂ ಸಮಾನರಾಗಿ ಸಮಾಜದಲ್ಲಿ...

Congress Karnataka ಕೆಪಿಸಿಸಿಯ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಉಪಾಧ್ಯಕ್ಷರಾಗಿ ಇ.ಎನ್.ರಮೇಶ್

Congress Karnataka ಕರ್ನಾಟಕ ಪ್ರದೇಶ ಕಾಂಗ್ರೇಸ್ ಸಮಿತಿಯ ಅಧ್ಯಕ್ಷರಾದ ಡಿ.ಕೆ...