Tuesday, December 16, 2025
Tuesday, December 16, 2025

ದೇಶದಾದ್ಯಂತ 190 ಕೋಟಿ ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ

Date:

ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಕಳೆದ 24 ಗಂಟೆಗಳಲ್ಲಿ 3,805 ಹೊಸ ಕೇಸುಗಳು ಪತ್ತೆಯಾಗಿದೆ, ನಿನ್ನೆ ಶುಕ್ರವಾರ ದೇಶದಲ್ಲಿ 3,545 ಕೋವಿಡ್ ಕೇಸುಗಳು ವರದಿಯಾಗಿದ್ದವು.

ಒಂದೇ ದಿನದಲ್ಲಿ 22 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಇದುವರೆಗೆ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 5,24,024ಕ್ಕೇರಿದೆ.

ಈಗ ದೇಶದಲ್ಲಿ ಒಟ್ಟಾರೆ ಕೋವಿಡ್ ಸೋಂಕಿತರ ಸಂಖ್ಯೆ 4 ಕೋಟಿಯ 30 ಲಕ್ಷದ 98 ಸಾವಿರದ 743ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 20 ಸಾವಿರದ 303 ಆಗಿದೆ. ಅದು ಒಟ್ಟಾರೆ ಕೇಸಿನ ಶೇ. 0.05ರಷ್ಟಿದೆ.

ದೇಶದಲ್ಲಿ ಕೋವಿಡ್ ನಿಂದ ಗುಣಮುಖ ಹೊಂದುತ್ತಿರುವವರ ಪ್ರಮಾಣ ಶೇ. 98.74ರಷ್ಟಿದೆ. ಕಳೆದ 24 ಗಂಟೆಗಳಲ್ಲಿ ಗುಣಮುಖ ಹೊಂದಿದವರ ಸಂಖ್ಯೆ 3,168 ಆಗಿದೆ. ಒಟ್ಟಾರೆಯಾಗಿ ಇದುವರೆಗೆ ಗುಣಮುಖರಾದವರ ಸಂಖ್ಯೆ 4 ಕೋಟಿಯ 25 ಲಕ್ಷದ 54 ಸಾವಿರದ 416 ಆಗಿದೆ.

ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 4 ಲಕ್ಷದ 87 ಸಾವಿರದ 544 ಮಂದಿಗೆ ಕೊರೋನಾ ಪರೀಕ್ಷೆ ಮಾಡಲಾಗಿದೆ. ಕೊರೋನಾ ಪಾಸಿಟಿವ್ ದರ ಶೇ. 0.78ರಷ್ಟಾಗಿದೆ. ವಾರದಲ್ಲಿ ಕೊರೋನಾ ಪಾಸಿಟಿವ್ ದರ ಶೇ. 0.79ರಷ್ಟಿದೆ.

ಇನ್ನು ದೇಶಾದ್ಯಂತ ಕೊರೋನಾ ಲಸಿಕೆ ಅಭಿಯಾನವನ್ನು ತೆಗೆದುಕೊಂಡರೆ 190 ಕೋಟಿ ಲಸಿಕೆ ಡೋಸ್ ಗಳನ್ನು ಇದುವರೆಗೆ ನೀಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಹೇಳಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Scheduled Castes Welfare Department ಮಾನಿಸಿಕ ಒತ್ತಡ ನಿರ್ವಹಣೆ ಬಗ್ಗೆ ಆನ್ ಲೈನ್ ಪಾಡ್ ಕ್ಯಾಸ್ಟ್ ವಿಡಿಯೊ ಸಂವಾದ

Scheduled Castes Welfare Department ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Kuvempu University ಶ್ರೀಕಾಂತ್ ಬಿರಾದಾರ್ ಅವರಿಗೆ ಕುವೆಂಪು ವಿವಿ ಡಾಕ್ಟರೇಟ್ ಪದವಿ

Kuvempu University ಮೂಡಲಗಿ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ...

Karnataka Information Commission ಡಿಸೆಂಬರ್ 20. ರಾಜ್ಯ ಮಾಹಿತಿ ಆಯುಕ್ತರ ಶಿವಮೊಗ್ಗ ಜಿಲ್ಲಾ ಪ್ರವಾಸ ಮಾಹಿತಿ

Karnataka Information Commission ರಾಜ್ಯ ಮಾಹಿತಿ ಆಯೋಗದ ಆಯುಕ್ತರಾದ ರುದ್ರಣ್ಣ ಹರ್ತಿಕೋಟೆ...

B.Y. Raghavendra ವೈಯಕ್ತಿಕವಾಗಿ ಕುಟುಂಬದ ಹಿರಿಯರನ್ನ ಕಳೆದುಕೊಂಡಂತಾಗಿದೆ, ಶಾಮನೂರು ನಿಧನಕ್ಕೆ ಬಿ.ವೈ.ರಾಘವೇಂದ್ರ ಕಂಬನಿ

B.Y. Raghavendra ಅಖಿಲಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು, ಹಿರಿಯ...