Thursday, March 26, 2026
Thursday, March 26, 2026

ಶ್ರೀಲಂಕಾದಲ್ಲಿ ತುರ್ತುಪರಿಸ್ಥಿತಿ ಘೋಷಣೆ

Date:

ಆರ್ಥಿಕವಾಗಿ ದಿವಾಳಿ ಹೊಂದಿರುವ ಶ್ರೀಲಂಕಾದಲ್ಲಿ 5 ವಾರಗಳಲ್ಲಿ 2ನೇ ಬಾರಿಗೆ ದ್ವೀಪರಾಷ್ಟ್ರದಲ್ಲಿ ನಿನ್ನೆ ಶುಕ್ರವಾರ ಮಧ್ಯರಾತ್ರಿಯಿಂದ ಜಾರಿಗೆ ಬರುವಂತೆ ಅಧ್ಯಕ್ಷ ಗೊಟಬೊಯ ರಾಜಪಕ್ಷ ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ.

ರಾಜಪಕ್ಷ ರಾಜೀನಾಮೆಗೆ ಆಗ್ರಹಿಸಿ ದೇಶಾದ್ಯಂತ ತೀವ್ರ ಪ್ರತಿಭಟನೆ ನಡೆಯುತ್ತಿದ್ದು, ಈ ನಿಟ್ಟಿನಲ್ಲಿ ಭದ್ರತಾ ಪಡೆಗಳಿಗೆ ಹೆಚ್ಚಿನ ಅಧಿಕಾರ ನೀಡಿ, ತುರ್ತು ಪರಿಸ್ಥಿತಿ ಘೋಷಿಸಲಾಗಿದೆ ಎಂದು ವರದಿ ವಿವರಿಸಿದೆ.

ಪ್ರಸ್ತುತ ರಾಜಪಕ್ಷ ಸರ್ಕಾರ ಅಧಿಕಾರದಿಂದ ಕೆಳಗಿಳಿಯಬೇಕು ಎಂದು ಆಗ್ರಹಿಸಿ ವಿದ್ಯಾರ್ಥಿಗಳು ಶುಕ್ರವಾರ ಬೆಳಗ್ಗೆ ಪಾರ್ಲಿಮೆಂಟ್ ಮುಂಭಾಗದಲ್ಲಿ ಭಾರೀ ಪ್ರತಿಭಟನೆ ನಡೆಸಿದ್ದರು. ಅಂಗಡಿ, ಮುಂಗಟ್ಟು, ಸಾರಿಗೆಯನ್ನು ಬಂದ್ ಮಾಡಿದೆ. ಶಾಂತಿ ಕಾಪಾಡುವ ಹಿನ್ನೆಲೆಯಲ್ಲಿ ದೇಶಾದ್ಯಂತ ಕಠಿಣ ಕಾನೂನನ್ನು ಜಾರಿಗೊಳಿಸಲಾಗಿದೆ ಎಂದು ಅಧ್ಯಕ್ಷ ಗೊಟಬೊಯ ವಕ್ತಾರ ತಿಳಿಸಿದ್ದಾರೆ.

ರಾಜಪಕ್ಷ ವಿರುದ್ಧ ದಂಗೆ ಎದ್ದಿರುವ ವಿದ್ಯಾರ್ಥಿಗಳು ಮತ್ತು ಪ್ರತಿಭಟನಾಕಾರರನ್ನು ಬಂಧಿಸಿ ಯಾವುದೇ ನ್ಯಾಯಾಂಗ ವಿಚಾರಣೆ ಇಲ್ಲದೇ ದೀರ್ಘಕಾಲದವರೆಗೆ ಜೈಲಿನಲ್ಲಿಡುವ ಅಧಿಕಾರವನ್ನು ತುರ್ತುಪರಿಸ್ಥಿತಿ ಘೋಷಿಸಿ, ಭದ್ರತಾ ಪಡೆಗಳಿಗೆ ವಿಶೇಷ ಅಧಿಕಾರವನ್ನು ನೀಡಲಾಗಿದೆ.

ಕಾನೂನು ಸುವ್ಯವಸ್ಥೆ ಕಾಪಾಡಲು ದೇಶಾದ್ಯಂತ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ. ತುರ್ತು ಸೇವೆ ಮತ್ತು ಸಾರ್ವಜನಿಕ ವ್ಯವಸ್ಥೆಯ ನಿರ್ವಹಣೆ ಸುಗಮವಾಗಿ ನಡೆಯಲು ಅಧ್ಯಕ್ಷ ಗೊಟಬೊಯ ಅವರು ತಮ್ಮ ವಿಶೇಷ ಅಧಿಕಾರವನ್ನು ಬಳಸಿ ತುರ್ತುಪರಿಸ್ಥಿತಿ ಜಾರಿಗೊಳಿಸಿರುವುದಾಗಿ ವರದಿ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Prabhuling Kavalikatti ಅಸ್ಪೃಶ್ಯತೆ ನಿರ್ಮೂಲನೆಗೆ ಒತ್ತು ಜೊತೆಗೆ ಕಾಯಿದೆಯಡಿ ಕಟ್ಟುನಿಟ್ಟಿನ ಕ್ರಮ- ಪ್ರಭುಲಿಂಗ ಕವಳಿಕಟ್ಟಿ.

Prabhuling Kavalikatti ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರ ಮೇಲಿನ ದೌರ್ಜನ್ಯ ತಡೆ...

MESCOM ಮಾರ್ಚ್ 26. ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಜನ ಸಂಪರ್ಕ ಸಭೆ.

MESCOM ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಮಾ 26 ರಂದು...

World Tuberculosis Day ಕ್ಷಯರೋಗಿಗಳು ದುಶ್ಚಟಗಳಿಂದ ದೂರವಿದ್ದು ,ಪೌಷ್ಠಿಕ ಆಹಾರ ಸೇವಿಸಿದರೆ ರೋಗ ವಾಸಿ- ಡಾ.ಕೆ.ಎಸ್.ನಟರಾಜ್.

World Tuberculosis Day ಸೂಕ್ತ ಚಿಕಿತ್ಸೆಯಿಂದ ಕ್ಷಯರೋಗದಿಂದ ಸಂಪೂರ್ಣರಾಗಿ ಗುಣಮುಖರಾಗಬಹುದಾಗಿದ್ದು, ಎಲ್ಲಾ...

Shimoga News ವಿದ್ಯಾರ್ಥಿಗಳು ಪುಸ್ತಕ ಓದುವ ಹವ್ಯಾಸ ಬೆಳಿಸಿಕೊಳ್ಳಬೇಕು- ಎನ್.ಪ್ರಕಾಶ್

Shivamogga News ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳ ಕೌಶಲ್ಯವನ್ನು ಹೆಚ್ಚಿಸಲು ಮತ್ತು ಉನ್ನತ...