Sunday, December 14, 2025
Sunday, December 14, 2025

ಶ್ರೀಲಂಕಾದಲ್ಲಿ ತುರ್ತುಪರಿಸ್ಥಿತಿ ಘೋಷಣೆ

Date:

ಆರ್ಥಿಕವಾಗಿ ದಿವಾಳಿ ಹೊಂದಿರುವ ಶ್ರೀಲಂಕಾದಲ್ಲಿ 5 ವಾರಗಳಲ್ಲಿ 2ನೇ ಬಾರಿಗೆ ದ್ವೀಪರಾಷ್ಟ್ರದಲ್ಲಿ ನಿನ್ನೆ ಶುಕ್ರವಾರ ಮಧ್ಯರಾತ್ರಿಯಿಂದ ಜಾರಿಗೆ ಬರುವಂತೆ ಅಧ್ಯಕ್ಷ ಗೊಟಬೊಯ ರಾಜಪಕ್ಷ ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ.

ರಾಜಪಕ್ಷ ರಾಜೀನಾಮೆಗೆ ಆಗ್ರಹಿಸಿ ದೇಶಾದ್ಯಂತ ತೀವ್ರ ಪ್ರತಿಭಟನೆ ನಡೆಯುತ್ತಿದ್ದು, ಈ ನಿಟ್ಟಿನಲ್ಲಿ ಭದ್ರತಾ ಪಡೆಗಳಿಗೆ ಹೆಚ್ಚಿನ ಅಧಿಕಾರ ನೀಡಿ, ತುರ್ತು ಪರಿಸ್ಥಿತಿ ಘೋಷಿಸಲಾಗಿದೆ ಎಂದು ವರದಿ ವಿವರಿಸಿದೆ.

ಪ್ರಸ್ತುತ ರಾಜಪಕ್ಷ ಸರ್ಕಾರ ಅಧಿಕಾರದಿಂದ ಕೆಳಗಿಳಿಯಬೇಕು ಎಂದು ಆಗ್ರಹಿಸಿ ವಿದ್ಯಾರ್ಥಿಗಳು ಶುಕ್ರವಾರ ಬೆಳಗ್ಗೆ ಪಾರ್ಲಿಮೆಂಟ್ ಮುಂಭಾಗದಲ್ಲಿ ಭಾರೀ ಪ್ರತಿಭಟನೆ ನಡೆಸಿದ್ದರು. ಅಂಗಡಿ, ಮುಂಗಟ್ಟು, ಸಾರಿಗೆಯನ್ನು ಬಂದ್ ಮಾಡಿದೆ. ಶಾಂತಿ ಕಾಪಾಡುವ ಹಿನ್ನೆಲೆಯಲ್ಲಿ ದೇಶಾದ್ಯಂತ ಕಠಿಣ ಕಾನೂನನ್ನು ಜಾರಿಗೊಳಿಸಲಾಗಿದೆ ಎಂದು ಅಧ್ಯಕ್ಷ ಗೊಟಬೊಯ ವಕ್ತಾರ ತಿಳಿಸಿದ್ದಾರೆ.

ರಾಜಪಕ್ಷ ವಿರುದ್ಧ ದಂಗೆ ಎದ್ದಿರುವ ವಿದ್ಯಾರ್ಥಿಗಳು ಮತ್ತು ಪ್ರತಿಭಟನಾಕಾರರನ್ನು ಬಂಧಿಸಿ ಯಾವುದೇ ನ್ಯಾಯಾಂಗ ವಿಚಾರಣೆ ಇಲ್ಲದೇ ದೀರ್ಘಕಾಲದವರೆಗೆ ಜೈಲಿನಲ್ಲಿಡುವ ಅಧಿಕಾರವನ್ನು ತುರ್ತುಪರಿಸ್ಥಿತಿ ಘೋಷಿಸಿ, ಭದ್ರತಾ ಪಡೆಗಳಿಗೆ ವಿಶೇಷ ಅಧಿಕಾರವನ್ನು ನೀಡಲಾಗಿದೆ.

ಕಾನೂನು ಸುವ್ಯವಸ್ಥೆ ಕಾಪಾಡಲು ದೇಶಾದ್ಯಂತ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ. ತುರ್ತು ಸೇವೆ ಮತ್ತು ಸಾರ್ವಜನಿಕ ವ್ಯವಸ್ಥೆಯ ನಿರ್ವಹಣೆ ಸುಗಮವಾಗಿ ನಡೆಯಲು ಅಧ್ಯಕ್ಷ ಗೊಟಬೊಯ ಅವರು ತಮ್ಮ ವಿಶೇಷ ಅಧಿಕಾರವನ್ನು ಬಳಸಿ ತುರ್ತುಪರಿಸ್ಥಿತಿ ಜಾರಿಗೊಳಿಸಿರುವುದಾಗಿ ವರದಿ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...