ರಾಜ್ಯದಲ್ಲಿ ಪಿಎಸ್ಐ ನೇಮಕಾತಿ ಅಕ್ರಮ ಕುರಿತಂತೆ ಈಗಾಗಲೇ ಸಿಐಡಿ ಪೊಲೀಸರು ಹಲವರನ್ನು ಬಂಧಿಸಿದ್ದಾರೆ. ತನಿಖೆ ಚುರುಕಿನಿಂದ ನಡೆಯುತ್ತಿದೆ. ಈ ಸಂದರ್ಭದಲ್ಲಿ ಪ್ರಕರಣ ಸಂಬಂಧ ಯಾವುದೇ ಹೇಳಿಕೆಗಳನ್ನು ನೀಡಿದರೂ, ಯಾರು ಹೇಳಿಕೆಗಳನ್ನು ನೀಡುತ್ತಾರೋ, ಅವರೇ ಜವಾಬ್ದಾರಿ ಹೊರಬೇಕು ಎಂಬುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಖಡಕ್ ಆಗಿ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರಿನ ಆರ್ಟಿನಗರದ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು,
ಇನ್ನೂ ಪ್ರಕರಣದ ಸಂಬಂಧ ಯಾವುದೇ ಹೇಳಿಕೆಗಳನ್ನು ನೀಡಿದರೂ, ಯಾರು ಹೇಳಿಕೆಗಳನ್ನು ನೀಡುತ್ತಾರೋ ಅವರೇ ಜವಾಬ್ದಾರಿ ಹೊರಬೇಕು ಎಂಬುದಾಗಿ ಎಚ್ಚರಿಕೆ ನೀಡಿದರು.
ಪಿಎಸ್ಐ ನೇಮಕಾತಿಯ ಅಕ್ರಮದಲ್ಲಿ ಯಾರ ಬಳಿ, ಯಾವುದೇ ದಾಖಲೆಗಳು ಇದ್ದರು ನೀಡಲಿ. ಅದನ್ನು ಸಿಐಡಿ ಅಧಿಕಾರಿಗಳು ಪರಿಶೀಲಿಸುತ್ತಾರೆ ಎಂದರು.
ಇನ್ನೂ ಪ್ರಕರಣದ ಸಂಬಂಧ ಯಾವುದೇ ಹೇಳಿಕೆಗಳನ್ನು ನೀಡಿದರೂ, ಯಾರು ಹೇಳಿಕೆಗಳನ್ನು ನೀಡುತ್ತಾರೋ ಅವರೇ ಜವಾಬ್ದಾರಿ ಹೊರಬೇಕು ಎಂಬುದಾಗಿ ಎಚ್ಚರಿಕೆ ನೀಡಿದರು.
ಸಚಿವ ಪ್ರಿಯಾಂಕ್ ಖರ್ಗೆ ಟ್ವೀಟ್ ವಿಚಾರವಾಗಿ ಮಾತನಾಡಿ, ಖರ್ಗೆ ಕುಟುಂಬ ಮೂಲತಃ ಕಾಂಗ್ರೆಸ್ನವರಾಗಿದ್ದಾರೆ. ಹಲವು ದಶಕಗಳಿಂದ ಕಾಂಗ್ರೆಸ್ ಜೊತೆಗೆ ಇರುವವರು. ಕಾಂಗ್ರೆಸ್ ಭ್ರಷ್ಟಾಚಾರದ ಗಂಗೋತ್ರಿಯಾಗಿದೆ. ಈಗ ವಿಧಾನಸೌಧ ವ್ಯಾಪಾರಸೌಧ ಆಗಿಲ್ಲ. ಖರ್ಗೆ ಅವರು ಏನು ಎಂದು ನಾವು ಹೇಳಬೇಕಿಲ್ಲ. ಕಾಂಗ್ರೆಸ್ ಏನೆಂದು ನಾಡಿನ ಜನತೆಗೆ ಗೊತ್ತಿದೆ. ಅವರು ನಮಗೆ ಸರ್ಕಾರ ಹೇಗೆ ನಡೆಸಬೇಕೆಂದು ತಿಳಿಸುವುದು ಬೇಡ ಎಂದರು.