Monday, May 18, 2026
Monday, May 18, 2026

ಪಿಎಂ ಗರೀಬ್ ಕಲ್ಯಾಣ ಯೋಜನೆ ಪಡಿತರ ಕಡಿಮೆ ನೀಡುವಂತಿಲ್ಲ

Date:

ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ, ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ಆಹಾರ ಧಾನ್ಯ ವಿತರಿಸಲಾಗುತ್ತಿದೆ. ಅಂತ್ಯೋದಯ ಪಡಿತರ ಚೀಟಿದಾರರಿಗೆ 20 ಕೆ.ಜಿ ಅಕ್ಕಿ, 15 ಕೆ.ಜಿ ಜೋಳ, ಬಿಪಿಎಲ್ ಕಾರ್ಡಿನ ಕುಟುಂಬದ ಪ್ರತಿ ಸದಸ್ಯರಿಗೆ ತಲಾ 3 ಕೆ.ಜಿ ಅಕ್ಕಿ ಮತ್ತು 2 ಕೆ.ಜಿ ಜೋಳ ಉಚಿತವಾಗಿ ವಿತರಿಸಲಾಗುತ್ತದೆ.

ಕಳೆದ ಏಪ್ರಿಲ್ ನಿಂದ ಗೋಧಿ ಹಂಚಿಕೆ ಸ್ಥಗಿತಗೊಳಿಸಲಾಗಿದೆ. ಕೆಲವೆಡೆ ಗೋಧಿ ದಾಸ್ತಾನು ಉಳಿದಿದ್ದು, ಆದ್ಯತೆಯ ಮೇಲೆ ಮೊದಲು ಬಂದ ಕಾರ್ಡುದಾರರಿಗೆ ಪ್ರತಿ ಕಾರ್ಡಿಗೆ 2 ಕೆಜಿ ಗೋಧಿ ವಿತರಿಸಲಾಗುತ್ತದೆ.

ಗ್ರಾಹಕರು ಹಂಚಿಕೆಯಾಗಿರುವ ಪಡಿತರವನ್ನು ನಿಗದಿತ ಸರಿಯಾದ ಪ್ರಮಾಣದಲ್ಲಿ ಪಡೆಯಬೇಕು. ನ್ಯಾಯಬೆಲೆ ಅಂಗಡಿಕಾರರು ಕಡಿಮೆ ಪ್ರಮಾಣದ ಆಹಾರ ಧಾನ್ಯ ನೀಡಿದರೆ ಜಿಲ್ಲಾಧಿಕಾರಿಗಳ ಕಚೇರಿಯ ಆಹಾರ ಶಾಖೆ ದೂರವಾಣಿ ಸಂಖ್ಯೆ 0836-2444594 ಮಾಹಿತಿ ನೀಡಿದರೆ ನಿಯಮಾನುಸಾರ ಕ್ರಮವಹಿಸಲಾಗುತ್ತದೆ ಎಂದು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕ ಸುಧೀರ್ ಸಾವ್ಕಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ಜಾವಳ್ಳಿ ಬಳಿ ಭೀಕರ ಅಪಘಾತ: ಸಹ ಪ್ರಾಧ್ಯಾಪಕ ಸ್ಥಳದಲ್ಲೇ ದುರ್ಮರಣ.

Breaking News ಶಿವಮೊಗ್ಗ ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿಯಲ್ಲಿ ಜಾವಳ್ಳಿ ಸಮೀಪ ಇಟ್ಟಿಗೆ...