Monday, July 13, 2026
Monday, July 13, 2026

ಪಿಎಂ ಗರೀಬ್ ಕಲ್ಯಾಣ ಯೋಜನೆ ಪಡಿತರ ಕಡಿಮೆ ನೀಡುವಂತಿಲ್ಲ

Date:

ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ, ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ಆಹಾರ ಧಾನ್ಯ ವಿತರಿಸಲಾಗುತ್ತಿದೆ. ಅಂತ್ಯೋದಯ ಪಡಿತರ ಚೀಟಿದಾರರಿಗೆ 20 ಕೆ.ಜಿ ಅಕ್ಕಿ, 15 ಕೆ.ಜಿ ಜೋಳ, ಬಿಪಿಎಲ್ ಕಾರ್ಡಿನ ಕುಟುಂಬದ ಪ್ರತಿ ಸದಸ್ಯರಿಗೆ ತಲಾ 3 ಕೆ.ಜಿ ಅಕ್ಕಿ ಮತ್ತು 2 ಕೆ.ಜಿ ಜೋಳ ಉಚಿತವಾಗಿ ವಿತರಿಸಲಾಗುತ್ತದೆ.

ಕಳೆದ ಏಪ್ರಿಲ್ ನಿಂದ ಗೋಧಿ ಹಂಚಿಕೆ ಸ್ಥಗಿತಗೊಳಿಸಲಾಗಿದೆ. ಕೆಲವೆಡೆ ಗೋಧಿ ದಾಸ್ತಾನು ಉಳಿದಿದ್ದು, ಆದ್ಯತೆಯ ಮೇಲೆ ಮೊದಲು ಬಂದ ಕಾರ್ಡುದಾರರಿಗೆ ಪ್ರತಿ ಕಾರ್ಡಿಗೆ 2 ಕೆಜಿ ಗೋಧಿ ವಿತರಿಸಲಾಗುತ್ತದೆ.

ಗ್ರಾಹಕರು ಹಂಚಿಕೆಯಾಗಿರುವ ಪಡಿತರವನ್ನು ನಿಗದಿತ ಸರಿಯಾದ ಪ್ರಮಾಣದಲ್ಲಿ ಪಡೆಯಬೇಕು. ನ್ಯಾಯಬೆಲೆ ಅಂಗಡಿಕಾರರು ಕಡಿಮೆ ಪ್ರಮಾಣದ ಆಹಾರ ಧಾನ್ಯ ನೀಡಿದರೆ ಜಿಲ್ಲಾಧಿಕಾರಿಗಳ ಕಚೇರಿಯ ಆಹಾರ ಶಾಖೆ ದೂರವಾಣಿ ಸಂಖ್ಯೆ 0836-2444594 ಮಾಹಿತಿ ನೀಡಿದರೆ ನಿಯಮಾನುಸಾರ ಕ್ರಮವಹಿಸಲಾಗುತ್ತದೆ ಎಂದು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕ ಸುಧೀರ್ ಸಾವ್ಕಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B. Y. Raghavendra ಕೆರೆ ತುಂಬಿಸಿದ ಏತ ನೀರಾವರಿ: ಉಡುಗಣಿ- ತಾಳಗುಂದ- ಹೊಸೂರು ಗ್ರಾಮಸ್ಥರ ಕಣ್ಣಲ್ಲಿ ಆನಂದ ಭಾಷ್ಪ

B. Y. Raghavendra ಶಿಕಾರಿಪುರ ತಾಲೂಕಿನ ಕೃಷಿ ರಂಗದ ಇತಿಹಾಸದಲ್ಲೇ ಅತ್ಯಂತ...

U.T. Khader ತೀರ್ಥಹಳ್ಳಿ ಸಾರ್ವಜನಿಕ ಆಸ್ಪತ್ರೆಗೆ ಆರೋಗ್ಯ ಸಚಿವ ಖಾದರ್ ಭೇಟಿ: ಪ್ರತೀ ವಾರ್ಡಿನ ರೋಗಿಗಳೊಂದಿಗೆ ಕ್ಷೇಮ ವಿಚಾರಣೆ

U.T. Khader ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಜಯಚಾಮರಾಜೇಂದ್ರ ಸರ್ಕಾರಿ ಆಸ್ಪತ್ರೆಗೆ ಆರೋಗ್ಯ...

Klive Special Article ಸಕಲ ವಿದ್ಯಾಸಂಪನ್ನ, ಮಹಾಮಹಿಮ ಶ್ರೀವಿಜಯೀಂದ್ರ ತೀರ್ಥರು. ...

ದಿನದ ಒಳ್ಳೆಯಮಾತು(ಯತಿಗಳ ಸ್ಮರಣೆ) ವಿಜಯೀಂದ್ರತೀರ್ಥ ಗುರುಸಾರ್ವಭೌಮರು Klive Special Article ಶ್ರೀವಿಜಯೀಂದ್ರತೀರ್ಥಗುರುಗಳು ಕಲಿಯುಗ ಕಲ್ಪತರು...