ರಾಜೀನಾಮೆಯ ಒತ್ತಡಕ್ಕೆ ಕಡೆಗೂ ಮಣಿದಿರುವ ಶ್ರೀಲಂಕಾದ ಪ್ರಧಾನಿ ಮಹಿಂದಾ ರಾಜಪಕ್ಸ, ತಮ್ಮ ಸ್ಥಾನವನ್ನು ತ್ಯಜಿಸಲು ಒಪ್ಪಿದ್ದಾರೆ.
ಶುಕ್ರವಾರ ಮಧ್ಯರಾತ್ರಿಯಿಂದಲೇ ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಘೋಷಣೆಯಾಗಿದ್ದು ಅದರ ಬೆನ್ನಲ್ಲೇ ಮಹಿಂದಾ ಅವರಿಂದ ಪದತ್ಯಾಗದ ನಿರ್ಧಾರ ಪ್ರಕಟವಾಗಿದೆ.
ಶನಿವಾರದಂದು, ರಾಷ್ಟ್ರಪತಿ ಗೊಟಬಾಯ ರಾಜಪಕ್ಸ ಅವರ ನಿವಾಸದಲ್ಲಿ ನಡೆದ ಮಹಿಂದಾ ಸಂಪುಟದ ವಿಶೇಷ ಸಭೆಯಲ್ಲಿ ರಾಜೀನಾಮೆಗೆ ಗೊಟಬಾಯ ಅವರು ನೀಡಿದ ಸೂಚನೆಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆಂದು ಮೂಲಗಳು ತಿಳಿಸಿವೆ.
ಆರ್ಥಿಕ ದುಸ್ಥಿತಿಗೆ ತಲುಪಿರುವ ಶ್ರೀಲಂಕಾದ ಸುಮಾರು 80 ಸಾವಿರ ಬಡವರಿಗೆ ಮೂಲಸೌಕರ್ಯಗಳನ್ನು ಕಲ್ಪಿಸುವ ಉದ್ದೇಶದಿಂದಾಗಿ ಧನಸಹಾಯ ನೀಡಲಾಗುತ್ತದೆ ಎಂದು ಐರೋಪ್ಯ ಒಕ್ಕೂಟ (ಇ.ಯು.) ಪ್ರಕಟಿಸಿದೆ.
ಮತ್ತೊಂದೆಡೆ, ಔಷಧಿ ಕೊಳ್ಳಲು ಹಣವಿಲ್ಲದೆ ಪರಿತಪಿಸುತ್ತಿರುವ ಶ್ರೀಲಂಕಾದ ಸರ್ಕಾರಿ ಆಸ್ಪತ್ರೆಗಳಿಗೆ ಔಷಧ ಸಹಾಯ ನೀಡುವುದಾಗಿ ಬಾಂಗ್ಲಾದೇಶ ಸರ್ಕಾರ ತಿಳಿಸಿದೆ.