Monday, May 18, 2026
Monday, May 18, 2026

ಶ್ರೀಲಂಕಾ ರಾಜಪಕ್ಸ ಪದತ್ಯಾಗಕ್ಕೆ ಒಪ್ಪಿಗೆ

Date:

ರಾಜೀನಾಮೆಯ ಒತ್ತಡಕ್ಕೆ ಕಡೆಗೂ ಮಣಿದಿರುವ ಶ್ರೀಲಂಕಾದ ಪ್ರಧಾನಿ ಮಹಿಂದಾ ರಾಜಪಕ್ಸ, ತಮ್ಮ ಸ್ಥಾನವನ್ನು ತ್ಯಜಿಸಲು ಒಪ್ಪಿದ್ದಾರೆ.

ಶುಕ್ರವಾರ ಮಧ್ಯರಾತ್ರಿಯಿಂದಲೇ ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಘೋಷಣೆಯಾಗಿದ್ದು ಅದರ ಬೆನ್ನಲ್ಲೇ ಮಹಿಂದಾ ಅವರಿಂದ ಪದತ್ಯಾಗದ ನಿರ್ಧಾರ ಪ್ರಕಟವಾಗಿದೆ.

ಶನಿವಾರದಂದು, ರಾಷ್ಟ್ರಪತಿ ಗೊಟಬಾಯ ರಾಜಪಕ್ಸ ಅವರ ನಿವಾಸದಲ್ಲಿ ನಡೆದ ಮಹಿಂದಾ ಸಂಪುಟದ ವಿಶೇಷ‌ ಸಭೆಯಲ್ಲಿ ರಾಜೀನಾಮೆಗೆ ಗೊಟಬಾಯ ಅವರು ನೀಡಿದ ಸೂಚನೆಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆಂದು ಮೂಲಗಳು ತಿಳಿಸಿವೆ.

ಆರ್ಥಿಕ ದುಸ್ಥಿತಿಗೆ ತಲುಪಿರುವ ಶ್ರೀಲಂಕಾದ ಸುಮಾರು 80 ಸಾವಿರ ಬಡವರಿಗೆ ಮೂಲಸೌಕರ್ಯಗಳನ್ನು ಕಲ್ಪಿಸುವ ಉದ್ದೇಶದಿಂದಾಗಿ ಧನಸಹಾಯ ನೀಡಲಾಗುತ್ತದೆ ಎಂದು ಐರೋಪ್ಯ ಒಕ್ಕೂಟ (ಇ.ಯು.) ಪ್ರಕಟಿಸಿದೆ.

ಮತ್ತೊಂದೆಡೆ, ಔಷಧಿ ಕೊಳ್ಳಲು ಹಣವಿಲ್ಲದೆ ಪರಿತಪಿಸುತ್ತಿರುವ ಶ್ರೀಲಂಕಾದ ಸರ್ಕಾರಿ ಆಸ್ಪತ್ರೆಗಳಿಗೆ ಔಷಧ ಸಹಾಯ ನೀಡುವುದಾಗಿ ಬಾಂಗ್ಲಾದೇಶ ಸರ್ಕಾರ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ಜಾವಳ್ಳಿ ಬಳಿ ಭೀಕರ ಅಪಘಾತ: ಸಹ ಪ್ರಾಧ್ಯಾಪಕ ಸ್ಥಳದಲ್ಲೇ ದುರ್ಮರಣ.

Breaking News ಶಿವಮೊಗ್ಗ ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿಯಲ್ಲಿ ಜಾವಳ್ಳಿ ಸಮೀಪ ಇಟ್ಟಿಗೆ...