Sunday, June 22, 2025
Sunday, June 22, 2025

ಕೆಕೆಆರ್ ವಿರುದ್ಧ ಲಖನೌ ಜೈಂಟ್ಸ್ ಜಯ

Date:

ಕ್ವಿಂಟನ್ ಡಿ ಕಾಕ್ ಆಕರ್ಷಕ ಅರ್ಧಶತಕ (50) ಮತ್ತು ಆವೇಶ್ ಖಾನ್ (19ಕ್ಕೆ 3) ಸೇರಿದಂತೆ ಬೌಲರ್‌ಗಳ ಮಾರಕ ದಾಳಿ ನೆರವಿನಿಂದ ಲಖನೌ ಸೂಪರ್ ಜೈಂಟ್ಸ್ ತಂಡವು ಐಪಿಎಲ್ 2022 ಟೂರ್ನಿಯಲ್ಲಿ ಶನಿವಾರ ಕೋಲ್ಕತ್ತ ನೈಟ್ ರೈಡರ್ಸ್ ವಿರುದ್ಧ ನಡೆದ ಪಂದ್ಯದಲ್ಲಿ 75 ರನ್ ಅಂತರದ ಭರ್ಜರಿ ಗೆಲುವು ದಾಖಲಿಸಿದೆ.

ಇದರೊಂದಿಗೆ ಐಪಿಎಲ್ ಟೂರ್ನಿಯಲ್ಲಿ ಇದೇ ಮೊದಲ ಬಾರಿಗೆ ಆಡುತ್ತಿರುವ ಲಖನೌ, ಗುಜರಾತ್ ಟೈಟನ್ಸ್ ತಂಡವನ್ನು ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದೆ.

ಇದಲ್ಲದೆ 11 ಪಂದ್ಯಗಳಲ್ಲಿ ಎಂಟನೇ ಗೆಲುವಿನೊಂದಿಗೆ ಒಟ್ಟು 16 ಅಂಕ ಸಂಪಾದಿಸಿದೆ.
ಅತ್ತ ಕೆಕೆಆರ್ 11 ಪಂದ್ಯಗಳಲ್ಲಿ ಏಳನೇ ಸೋಲಿಗೆ ಶರಣಾಗಿದೆ. ಈ ಮೂಲಕ ಎಂಟನೇ ಸ್ಥಾನದಲ್ಲೇ ಉಳಿದುಕೊಂಡಿದೆ.
ಮೊದಲು ಬ್ಯಾಟಿಂಗ್ ನಡೆಸಿದ ಲಖನೌ ಏಳು ವಿಕೆಟ್ ನಷ್ಟಕ್ಕೆ 176 ರನ್ ಗಳಿಸಿತ್ತು. ಬಳಿಕ ಗುರಿ ಬೆನ್ನಟ್ಟಿದ ಕೋಲ್ಕತ್ತ 14.3 ಓವರ್‌ಗಳಲ್ಲಿ 101 ರನ್ನಿಗೆ ತನ್ನೆಲ್ಲ ವಿಕೆಟ್‌ಗಳನ್ನು ಕಳೆದುಕೊಂಡಿತು.

ಸವಾಲಿನ ಮೊತ್ತ ಬೆನ್ನಟ್ಟಿದ ಕೆಕೆಆರ್ ಆರಂಭ ಉತ್ತಮವಾಗಿರಲಿಲ್ಲ. ತಂಡವು 25 ರನ್ ಗಳಿಸುವಷ್ಟರಲ್ಲಿ ಬಾಬಾ ಇಂದ್ರಜಿತ್ (0), ಆಯರನ್ ಫಿಂಚ್ (14) ನಾಯಕ ಶ್ರೇಯಸ್ ಅಯ್ಯರ್ (6) ಹಾಗೂ ನಿತೀಶ್ ರಾಣಾ (2) ವಿಕೆಟ್‌ಗಳನ್ನು ಕಳೆದುಕೊಂಡಿತು.

ಬಳಿಕ ಆಯಂಡ್ರೆ ರಸೆಲ್ ಅಲ್ಪ ಹೊತ್ತು ಹೋರಾಟ ತೋರಿದರೂ ಯಾವುದೇ ಪ್ರಯೋಜನ ಉಂಟಾಗಲಿಲ್ಲ. 19 ಎಸೆತಗಳನ್ನು ಎದುರಿಸಿದ ರಸೆಲ್ ಐದು ಸಿಕ್ಸರ್ ಹಾಗೂ ಮೂರು ಬೌಂಡರಿ ನೆರವಿನಿಂದ 45 ರನ್ ಗಳಿಸಿದರು.
ಅಂತಿಮವಾಗಿ 14.3 ಓವರ್‌ಗಳಲ್ಲಿ 101 ರನ್ನಿಗೆ ತನ್ನೆಲ್ಲ ವಿಕೆಟ್‌ಗಳನ್ನು ಕಳೆದುಕೊಂಡಿತು. ಇನ್ನುಳಿದಂತೆ ಸುನಿಲ್ ನಾರಾಯಣ್ 22 ರನ್ ಗಳಿಸಿದರು.

ಲಖನೌ ಪರ ಆವೇಶ್ ಖಾನ್ ಹಾಗೂ ಜೇಸನ್ ಹೋಲ್ಡರ್ ತಲಾ ಮೂರು ವಿಕೆಟ್ ಕಿತ್ತು ಮಿಂಚಿದರು. ಮೊಹಸಿನ್ ಖಾನ್ (6ಕ್ಕೆ 1) ಹಾಗೂ ದುಶ್ಮಿಂತ ಚಮೀರ (14ಕ್ಕೆ 1) ಸಹ ಪ್ರಭಾವಿ ದಾಳಿ ಸಂಘಟಿಸಿದರು.

ಐಪಿಎಲ್‌ನಲ್ಲಿ ಇದೇ ಮೊದಲ ಬಾರಿ ಆಡುತ್ತಿರುವ ಲಖನೌ, ಇದುವೆರೆಗೆ 10 ಪಂದ್ಯಗಳಲ್ಲಿ ಏಳರಲ್ಲಿ ಗೆದ್ದು ಮೂರು ಪಂದ್ಯಗಳಲ್ಲಿ ಸೋಲನ್ನು ಅನುಭವಿಸಿದೆ. ಈ ಮೂಲಕ ಒಟ್ಟು 14 ಅಂಕ ಗಳಿಸಿದ್ದು, ಅಂಕಪಟ್ಟಿಯಲ್ಲಿ ಎರಡನೇ ಸ್ಥಾನ ಕಾಯ್ದುಕೊಂಡಿದೆ.
ಅತ್ತ ಕೋಲ್ಕತ್ತ 10 ಪಂದ್ಯಗಳಲ್ಲಿ ನಾಲ್ಕರಲ್ಲಿ ಗೆದ್ದು ಆರು ಪಂದ್ಯಗಳಲ್ಲಿ ಸೋಲು ಅನುಭವಿಸಿದ್ದು, ಎಂಟು ಅಂಕಗಳೊಂದಿಗೆ ಎಂಟನೇ ಸ್ಥಾನದಲ್ಲಿದೆ.
ಈ ಹಿನ್ನೆಲೆಯಲ್ಲಿ ಕೆಕೆಆರ್ ಪಾಲಿಗೆ ಈ ಪಂದ್ಯ ಮಹತ್ವದೆನಿಸಿದೆ. ಅಲ್ಲದೆ ಮಗದೊಂದು ರೋಚಕ ಪಂದ್ಯವನ್ನು ನಿರೀಕ್ಷಿಸಲಾಗುತ್ತಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಎಲ್ಲಾ ಸಮುದಾಯಗಳ ಸಾಮಾಜಿಕ,ಆರ್ಥಿಕ,ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷೆ ನಡೆಸುವ ಉದ್ದೇಶವಿದೆ – ಮಧು ಬಂಗಾರಪ್ಪ

Madhu Bangarappa ರಾಜ್ಯದಲ್ಲಿನ ವಿವಿಧ ಜಾತಿ ಜನಾಂಗಗಳ, ಅದರಲ್ಲೂ ಮುಖ್ಯವಾಗಿ ಹಿಂದುಳಿದ...

DK Shivakumar ಎತ್ತಿನಹೊಳೆ ಯೋಜನೆ ಕಾಮಗಾರಿ‌ ಪರಿಶೀಲಿಸಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

DK Shivakumar ಎತ್ತಿನ ಹೊಳೆ ಯೋಜನೆಯ ಮೂಲಕ ಕುಡಿಯುವ ನೀರನ್ನು ಬರಪೀಡಿತ...

Royal English Medium School ರಾಯಲ್ ಡೈಮಂಡ್ ಶಾಲೆಯಲ್ಲಿ‌ ನಿತ್ಯ ಯೋಗ ಮಾಡುವ ಸಂಕಲ್ಪ ಸ್ವೀಕಾರ

Royal English Medium School ಶಿವಮೊಗ್ಗ ನಗರದ ಹೆಸರಾಂತ ವಿದ್ಯಾಸಂಸ್ಥೆಯಲ್ಲಿ ಒಂದಾದ...