ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಉಪ್ಪಾರ ಸಮಾಜ, ಶಿವಮೊಗ್ಗ ವತಿಯಿಂದ ಶ್ರೀ ಭಗೀರಥ ಜಯಂತಿಯನ್ನು ಕುವೆಂಪು ರಂಗಮಂದಿರದಲ್ಲಿ ಆಚರಿಸಲಾಯಿತು.
ಶಿವಮೊಗ್ಗ ಮಹಾನಗರ ಪಾಲಿಕೆ ಪೂಜ್ಯ ಮಹಾಪೌರರಾದ ಸನ್ಮಾನ್ಯ ಶ್ರೀಮತಿ ಸುನೀತಾ ಅಣ್ಣಪ್ಪರವರು ಸಮಾರಂಭದ ಉದ್ಘಾಟನೆಯನ್ನು ನೆರವೇರಿಸಿ ಸಮುದಾಯದ ಬಾಂಧವರಿಗೆ ಶುಭ ಹಾರೈಸಿದರು.
ಅಪರ ಜಿಲ್ಲಾಧಿಕಾರಿಗಳಾದ ಸನ್ಮಾನ್ಯ ಡಾ.ನಾಗೇಂದ್ರ ಎಫ್. ಹೊನ್ನಳ್ಳಿ ಅಧ್ಯಕ್ಷತೆ ವಹಿಸಿದ್ದರು.
ಮಹಾನಗರ ಪಾಲಿಕೆ ಸದಸ್ಯರಾದ ಸನ್ಮಾನ್ಯ ಶ್ರೀ ನಾಗರಾಜ್ ಕಂಕಾರಿ, , ಜಿಲ್ಲಾ ಉಪ್ಪಾರ ಸಂಘದ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಎಸ್.ಟಿ.ಹಾಲಪ್ಪ, ಇಲಾಖೆಯ ಸಹಾಯಕ ನಿರ್ದೇಶಕರಾದ ಶ್ರೀ ಉಮೇಶ್ ಹೆಚ್., ಉಪ್ಪಾರ ಸಮಾಜ ಬಾಂಧವರು ಹಾಗೂ ಇಲಾಖಾ ಸಿಬ್ಬಂದಿಗಳು ಹಾಜರಿದ್ದರು.
ಶ್ರೀ ಭಗೀರಥರವರ ಬಗ್ಗೆ ವಿಶೇಷ ಉಪನ್ಯಾಸವನ್ನು ಸಹ್ಯಾದ್ರಿ ಕಾಲೇಜಿನ ಉಪನ್ಯಾಸಕರಾದ ಡಾ. ಮೋಹನ್ ಚಂದ್ರಗುತ್ತಿ ರವರು ನೀಡಿದರು.
ಸ್ವಾಗತವನ್ನು ಇಲಾಖೆಯ ಸಹಾಯಕ ನಿರ್ದೇಶಕರಾದ
ಶ್ರೀ ಉಮೇಶ್ ಹೆಚ್. ನೆರವೇರಿಸಿದರು.
ನಾಡಗೀತೆಯನ್ನು ಶಾರದಾ ಸಂಗೀತ ವಿದ್ಯಾಲಯ, ಶಿವಮೊಗ್ಗದ ವಿದ್ಯಾರ್ಥಿಗಳು ಹಾಡಿದ್ದು,
ಶ್ರೀ ಚನ್ನಬಸಪ್ಪ ನಿರೂಪಿಸಿದರು.