ಮುಂದಿರುವ 2023ರ ಚುನಾವಣೆಯಲ್ಲಿ ಜನರ ಆಶೀರ್ವಾದಿಂದ ನಾವು ಅಧಿಕಾರಕ್ಕೆ ಬಂದರೆ 10ಕೆ.ಜಿ. ಅಕ್ಕಿ ಉಚಿತವಾಗಿ ಕೋಡುತ್ತೇವೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದರು.
ರಾಮದುರ್ಗ ತಾಲೂಕಿನ ಅವರಾದಿ ಗ್ರಾಮದಲ್ಲಿ ಭಾನುವಾರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪುತ್ಥಳಿ ಉದ್ಘಾಟಿಸಿ ಮಾತನಾಡಿ, ಅಗತ್ಯವಸ್ತು ಬೆಲೆ ದುಪ್ಪಟ್ಟಾಗಿದೆ.
ಒಂದು ಕಡೆ ಬೆಲೆ ಏರಿಕೆ ಇನ್ನೊಂದು ಕಡೆ ಲೂಟಿ ಹೊಡೆಯುವುದು ನಡೆಯುತ್ತಿದೆ. ಪಿಎಸ್ಐ ನೇಮಕಾತಿಯಲ್ಲಿ ಸುಮಾರು 300 ಕೋಟಿ ಹೊಡೆದಿದ್ದಾರೆ ಎಂದು ಆರೋಪಿಸಿದರು.
ಇಂಥ ಸರ್ಕಾರ ಯಾವುದೇ ಕಾರಣಕ್ಕೂ ಇರಬಾರದು. ಇಂಥ ಸರ್ಕಾರವನ್ನು ಬೇರು ಸಮೇತ ಕಿತ್ತು ಎಸೆದಾಗ ದೇಶ, ನಾವು, ನೀವು ಉಳಿಯುತ್ತೇವೆ. ಈ ಸರ್ಕಾರಕ್ಕೆ ಕಣ್ಣು ಕಾಣಿಸಲ್ಲ. ಕಿವಿಯೂ ಕೇಳಿಸಲ್ಲ. ಈ ಸರ್ಕಾರದ್ದು ಎಮ್ಮೆ ಚರ್ಮ ಅಲ್ಲ. ಘೇಂಡಾಮೃಗದ ಚರ್ಮ ಎಂದು ತೀವ್ರ ಕಿಡಿಕಾರಿದರು.