Friday, March 27, 2026
Friday, March 27, 2026

ವಿಳಂಬ ಬೇಡ,ಒಂದು ತಂಡವಾಗಿ ಕೆಲಸಮಾಡಿ ಬೊಮ್ಮಾಯಿ

Date:

ಭ್ರಷ್ಟಾಚಾರ ಸಹಿಸಲ್ಲ. ಯೋಜನೆಗಳ ವಿಳಂಬವನ್ನು ಒಪ್ಪಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಜೆಟ್ ಘೋಷಣೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ನಡೆಸಿದ ಜಿಲ್ಲಾಧಿಕಾರಿಗಳ ಸಭೆಯಲ್ಲಿ ಜಿಲ್ಲಾಧಿಕಾರಿಗಳಿಗೆ ನೀಡಿದ ಖಡಕ್ ಸೂಚನೆ ನೀಡಿದರು.

ಬಡವರಿಗೆ ಸಹಾಯ ಮಾಡಲು ಏನೇ ನಿರ್ಧಾರ ತೆಗೆದುಕೊಂಡರೂ ಸರ್ಕಾರ ನಿಮ್ಮ ರಕ್ಷಣೆಗೆ ನಿಲ್ಲುತ್ತದೆ. ಕಷ್ಟದಲ್ಲಿರುವ ಬಡವರಿಗೆ ಸಹಾಯ ಮಾಡಿದರೆ ಹೊಸ ಚೈತನ್ಯ ಮೂಡುತ್ತದೆ. ಅದರಿಂದ ನಿಮಗೂ ತೃಪ್ತಿ ದೊರೆಯುವುದು. ಜನಸಾಮಾನ್ಯರಿಗೆ ಆಡಳಿತದಲ್ಲಿ ಬದಲಾವಣೆ ಆಗುತ್ತಿದೆ ಎಂದರು.

ಆಡಳಿತ ಶೈಲಿಯಲ್ಲಿ ಬದಲಾವಣೆ ತರುವ ಸಂಕಲ್ಪ ಮಾಡಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜಿಲ್ಲಾಧಿಕಾರಿಗಳಿಗೆ ಕರೆ ನೀಡಿದರು.

ಸರಳ, ಸುಲಭ ಮತ್ತು ಸ್ವಚ್ಛವಾಗಿದೆ ಎಂಬ ಭಾವನೆ ಬರುವಂತೆ ಆಡಳಿತ ನೀಡಬೇಕು. ನಾವು ಒಂದು ತಂಡವಾಗಿ ಒಟ್ಟಾಗಿ ಕೆಲಸ ಮಾಡಬೇಕು. ನನ್ನ ಕಲ್ಪನೆಯ ನವ ಕರ್ನಾಟಕದ ಸಾಕಾರಕ್ಕೆ ನಿಮ್ಮ ಸಹಕಾರ ಅಗತ್ಯ ಎಂದರು.

ಈ ಸಂದರ್ಭದಲ್ಲಿ ಸಚಿವರಾದ ಗೋವಿಂದ ಕಾರಜೋಳ, ಆರ್. ಅಶೋಕ್, ಸಿ.ಸಿ.ಪಾಟೀಲ್, ಕೆ.ಸಿ.ನಾರಾಯಣಗೌಡ, ಕೆ.ಗೋಪಾಲಯ್ಯ, ಬಿ.ಸಿ.ನಾಗೇಶ್, ಬಿ.ಸಿ ಪಾಟೀಲ್, ಸುನೀಲ್ ಕುಮಾರ್ , ಪ್ರಭು ಚೌಹಾಣ್, ಉಮೇಶ್ ಕತ್ತಿ, ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಜಿಲ್ಲಾಧಿಕಾರಿಗಳು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa 2026-27 ನೇ ಶೈಕ್ಷಣಿಕ ವರ್ಷದಲ್ಲಿ ಒಂದನೇ ತರಗತಿಗೆ ದಾಖಲಾಗುವ ಮಕ್ಕಳ ವಯೋಮಿತಿಯಲ್ಲಿ 60 ದಿನ ಸಡಿಲಿಕೆ- ಮಧು ಬಂಗಾರಪ್ಪ.

Madhu Bangarappa “ಒಂದನೇ ತರಗತಿಗೆ ದಾಖಲಾಗುವ ಮಕ್ಕಳಿಗೆ ಆರು ವರ್ಷ ತುಂಬಿರಲೇಬೇಕು...

MADHU BANGARAPPA ಶಿಕ್ಷಣದಲ್ಲಿ ಹಿಂದಿ ಹೇರಿಕೆ ವಿರೋಧ ಮತ್ತು ‘ಪಾಸ್ ವಿಥೌಟ್ ಹಿಂದಿ’ ಜಾರಿ ಕುರಿತು ಚರ್ಚೆ

MADHU BANGARAPPA ರಾಜ್ಯದ ಶಾಲಾಶಿಕ್ಷಣ ಮತ್ತು ಸಾಕ್ಷರತಾ ಇಲಾಖಾ ಮಂತ್ರಿಗಳಾದ ಮಧುಬಂಗಾರಪ್ಪ...

Morarji Desai Residential School ಜಿಲ್ಲೆಯ ಮೊರಾರ್ಜಿ ದೇಸಾಯಿ‌ ವಸತಿ ಶಾಲೆ 6 ನೆ ತರಗತಿಗೆ ಪ್ರವೇಶ ಪರೀಕ್ಷೆ.

Morarji Desai Residential School ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯ...

Mylaralingeshwara Temple Shimoga ಮಾರ್ಚ್ 29. ಮೈಲಾರೇಶ್ವರ ದೇವಸ್ಥಾನದಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮ

Mylaralingeshwara Temple in Shimoga ಶಿವಮೊಗ್ಗ ನಗರದಲ್ಲಿನ ಶ್ರೀ ಮೈಲಾರೇಶ್ವರ ದೇವಸ್ಥಾನನಲ್ಲಿ...