Wednesday, December 17, 2025
Wednesday, December 17, 2025

ಭದ್ರಾ ಜಲಾಶಯದಿಂದ ನೀರು ಬಿಡುಗಡೆ- ಮುನ್ನೆಚ್ಚರಿಕೆ ಮಾಹಿತಿ

Date:

2021-22 ನೇ ಸಾಲಿನಲ್ಲಿ ಗದಗ ಬೆಟಗೇರಿ ಹಾಗೂ ಇನ್ನಿತರೆ ಕುಡಿಯುವ ನೀರಿನ ಯೋಜನೆಗಳಿಗೆ ಭದ್ರಾ ಜಲಾಶಯದಿಂದ ಭದ್ರಾ ನದಿ ಮೂಲಕ ಮೇ 6 ರಿಂದ ರಾತ್ರಿ.10:30 ರಿಂದ ಈ ಕೆಳಕಂಡಂತೆ ನೀರನ್ನು ಹರಿಸಲಾಗುತ್ತಿದೆ.

ಸಾರ್ವಜನಿಕರು ಇಲಾಖೆಯೊಂದಿಗೆ ಸಹಕರಿಸಬೇಕೆಂದು ಕರ್ನಾಟಕ ನೀರಾವರಿ ನಿಗಮ ನಿಯಮಿತದ ಭದ್ರಾ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರರು ತಿಳಿಸಿದ್ದಾರೆ.

ಮೇ 06 ರಂದು 3800 ಕ್ಯೂಸೆಕ್ಸ್, ಮೇ 07 ರಂದು 4340 ಕ್ಯೂಸೆಕ್ಸ್, ಮೇ 08 ರಂದು 4520 ಕ್ಯೂಸೆಕ್ಸ್, ಮೇ 09 ರಂದು 4520 ಕ್ಯೂಸೆಕ್ಸ್, ಮೇ 10 ರಂದು 4520 ಕ್ಯೂಸೆಕ್ಸ್ ಮತ್ತು ಮೇ 11 ರಂದು 4340 ಕ್ಯೂಸೆಕ್ಸ್ ಒಟ್ಟು 26040(2.25 ಟಿಎಂಸಿ) ಕ್ಯೂಸೆಕ್ಸ್ ನೀರು ಹರಿಸಲಾಗುವುದು.

ಆದ್ದರಿಂದ ನದಿ ಪಾತ್ರದಲ್ಲಿ ಸಾರ್ವಜನಿಕರು ತಿರುಗಾಡುವುದಾಗಲಿ, ದನಕರುಗಳನ್ನು ನದಿಗೆ ಇಳಿಸುವುದಾಗಲೀ ಇತ್ಯಾದಿ ಚಟುವಟಿಕೆಗಾಗಿ ನದಿಗೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ಮೇಲೆ ತಿಳಿಸಿದ ಅವಧಿಯಲ್ಲಿ ರೈತಬಾಂಧವರು ನದಿ ದಂಡೆಯಲ್ಲಿ ಅಳವಡಿಸಿರುವ ಪಂಪ್‍ಸೆಟ್‍ಗಳಿಂದ ನೀರೆತ್ತುವುದನ್ನು ಸಹ ನಿಷೇಧಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Scheduled Castes Welfare Department ಮಾನಿಸಿಕ ಒತ್ತಡ ನಿರ್ವಹಣೆ ಬಗ್ಗೆ ಆನ್ ಲೈನ್ ಪಾಡ್ ಕ್ಯಾಸ್ಟ್ ವಿಡಿಯೊ ಸಂವಾದ

Scheduled Castes Welfare Department ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Kuvempu University ಶ್ರೀಕಾಂತ್ ಬಿರಾದಾರ್ ಅವರಿಗೆ ಕುವೆಂಪು ವಿವಿ ಡಾಕ್ಟರೇಟ್ ಪದವಿ

Kuvempu University ಮೂಡಲಗಿ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ...

Karnataka Information Commission ಡಿಸೆಂಬರ್ 20. ರಾಜ್ಯ ಮಾಹಿತಿ ಆಯುಕ್ತರ ಶಿವಮೊಗ್ಗ ಜಿಲ್ಲಾ ಪ್ರವಾಸ ಮಾಹಿತಿ

Karnataka Information Commission ರಾಜ್ಯ ಮಾಹಿತಿ ಆಯೋಗದ ಆಯುಕ್ತರಾದ ರುದ್ರಣ್ಣ ಹರ್ತಿಕೋಟೆ...

B.Y. Raghavendra ವೈಯಕ್ತಿಕವಾಗಿ ಕುಟುಂಬದ ಹಿರಿಯರನ್ನ ಕಳೆದುಕೊಂಡಂತಾಗಿದೆ, ಶಾಮನೂರು ನಿಧನಕ್ಕೆ ಬಿ.ವೈ.ರಾಘವೇಂದ್ರ ಕಂಬನಿ

B.Y. Raghavendra ಅಖಿಲಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು, ಹಿರಿಯ...