Friday, February 6, 2026
Friday, February 6, 2026

ಟಾಟಾ ಐಪಿಎಲ್ ಸನ್ ರೈಸರ್ಸ್ ವಿರುದ್ಧ ಆರ್ ಸಿಬಿ ಗೆಲುವು

Date:

ಭಾನುವಾರ ಐಪಿಎಲ್ ಅಂಗಳದಲ್ಲಿ ಎರಡು ಮುಖಾಮುಖಿ ನಡೆಸಿದೆ. ಮೊದಲ ಮುಖಾಮುಖಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಿದ್ದರೆ ಎರಡನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿದೆ.

ಈ ಪಂದ್ಯಗಳಲ್ಲಿ ಮೊದಲ ಮುಖಾಮುಖಿಯಲ್ಲಿ ಆರ್‌ಸಿಬಿ ತಂಡ ಅಮೋಘ ಗೆಲುವು ಸಾಧಿಸಿದ್ದರೆ 2ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಅದ್ಭುತ ಗೆಲುವು ದಾಖಲಿಸಿದೆ.

ಈ 2 ಪಂದ್ಯಗಳ ಫಲಿತಾಂಶ ಆರ್‌ಸಿಬಿ ಅಭಿಮಾನಿಗಳಿಗೆ ಹೆಚ್ಚು ಖುಷಿ ನೀಡುವಂತಿದೆ. ಪ್ಲೇಆಫ್ ಹಂತಕ್ಕೇರಲು ಆರ್‌ಸಿಬಿಗೆ ಪೂರಕವಾಗುವಂತಾ ಫಲಿತಾಂಶಗಳು 2 ಪಂದ್ಯದಲ್ಲಿಯೂ ಬಂದಿದೆ. ಅಲ್ಲದೆ ನೆಟ್ ರನ್‌ರೇಟ್‌ಅನ್ನು ಕೂಡ ಆರ್‌ಸಿಬಿಗೆ ಈ ಪಂದ್ಯದಲ್ಲಿ ಉತ್ತಮ ಪಡಿಸಿಕೊಳ್ಳಲು ಯಶಸ್ವಿಯಾಗಿದೆ.

ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧಧ ಪಂದ್ಯದಲ್ಲಿ ಆರ್‌ಸಿಬಿ ಮೊದಲಿಗೆ ಬ್ಯಾಟಿಂಗ್ ಮಾಡಿ ಫಾಫ್ ಡು ಪ್ಲೆಸಿಸ್, ರಜತ್ ಪಾಟೀದಾರ್, ಗ್ಲೆನ್ ಮ್ಯಾಕ್ಸ್‌ವೆಲ್ ಹಾಗೂ ದಿನೇಶ್ ಕಾರ್ತಿಕ್ ಅವರ ಅಮೋಘ ಬ್ಯಾಟಿಂಗ್‌ನಿಂದಾಗಿ ಭರ್ಜರಿ ಪ್ರದರ್ಶನ ನೀಡಿತ್ತು. ನಿಗದಿತ 20 ಓವರ್‌ಗಳಲ್ಲಿ ಆರ್‌ಸಿಬಿ 3 ವಿಕೆಟ್ ಕಳೆದುಕೊಂಡು 192 ರನ್‌ ಗಳಿಸಿತ್ತು. ಇದನ್ನು ಬೆನ್ನಟ್ಟಿದ ಸನ್‌ರೈಸರ್ಸ್ ಹೈದರಾಬಾದ್ ತಂಡ ಸಂಪೂರ್ಣವಾಗಿ ಮುಗ್ಗರಿಸಿತು. ರಾಹುಲ್ ತ್ರಿಪಾಠಿ ಹೊರತುಪಡಿಸಿದರೆ ಉಳಿದ ಯಾವ ಆಟಗಾರ ಕೂಡ ಆರ್‌ಸಿಬಿ ವಿರುದ್ಧ ಈ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಲು ವಿಫಲವಾದರು. ಇದರ ಪರಿಣಾಮವಾಗಿ ಎಸ್‌ಆರ್‌ಹೆಚ್ ತಂಡ 125 ರನ್‌ಗಳಿಗೆ ಆಲೌಟ್ ಆಯಿತು. ಈ ಮೂಲಕ ಆರ್‌ಸಿಬಿ ತಂಡ ನಿಗದಿತ 20 ಓವರ್‌ಗಳಲ್ಲಿ 67 ರನ್‌ಗಳ ಗೆಲುವು ದಾಖಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...