Friday, February 6, 2026
Friday, February 6, 2026

ಉಕ್ರೇನ್ ಶಾಲೆಯ ಮೇಲೆ ರಷ್ಯ ಬಾಂಬ್ದಾಳಿ:6೦ ಸಾವು

Date:

ಪೂರ್ವ ಉಕ್ರೇನ್​ ನ ಲುಹಾನ್ ಸ್ಕ್​ ಪ್ರಾಂತ್ಯದ ಬಿಲೋಹೊರಿವ್ಕಾ ಎಂಬಲ್ಲಿನ ಶಾಲೆಯ ಮೇಲೆ ರಷ್ಯಾ ಸೇನೆ ನಡೆಸಿದ ಬಾಂಬ್​ ದಾಳಿಗೆ ಮಕ್ಕಳು ಸೇರಿ 60 ಜನ ಮೃತಪಟ್ಟಿದ್ದಾರೆ. 30ಕ್ಕೂ ಹೆಚ್ಚು ಜನರನ್ನು ಸ್ಥಳದಿಂದ ಪಾರುಮಾಡಲಾಗಿದ್ದು, ಏಳು ಜನ ಗಂಭೀರ ಗಾಯಗೊಂಡಿದ್ದಾರೆ ಎಂದು ಪ್ರಾದೇಶಿಕ ಗವರ್ನರ್​ ಸೆರ್​ಹಿಯ್​ ಗೈಡಾಯ್​ ತಿಳಿಸಿದ್ದಾರೆ.

ಶಾಲೆಯನ್ನು ನಿರಾಶ್ರಿತರ ಕೇಂದ್ರವನ್ನಾಗಿ ಪರಿವರ್ತಿಸಲಾಗಿತ್ತು. ಅಲ್ಲಿ ಮಕ್ಕಳು ಸೇರಿ 90ಕ್ಕೂ ಹೆಚ್ಚು ಜನ ಆಶ್ರಯ ಪಡೆದುಕೊಂಡಿದ್ದರು. ಭಾನುವಾರ ಅಪರಾಹ್ನ ರಷ್ಯಾ ಸೇನೆ ಈ ಶಾಲೆಯ ಮೇಲೆ ಬಾಂಬ್​ ದಾಳಿ ನಡೆಸಿತು.

ಸ್ಫೋಟದಿಂದ ಉಂಟಾದ ಬೆಂಕಿ ನಾಲ್ಕು ಗಂಟೆ ಕಾಲ ಹೊತ್ತಿ ಉರಿದಿದೆ ಎಂದು ಗೈಡಾಯ್​ ವಿವರಿಸಿದರು.

ದಾಳಿ ನಡೆಸುತ್ತಿರುವ ರಷ್ಯಾ ವನ್ನು ಎದುರಿಸುವುದಕ್ಕೆ ಅಗತ್ಯವಾದ ಹೆಚ್ಚುವರಿ ಸೇನಾ ನೆರವು ನೀಡುವುದನ್ನು ಬ್ರಿಟನ್​ ಖಾತರಿಪಡಿಸಿದೆ. 1.3 ಶತಕೋಟಿ ಪೌಂಡ್ಸ್​ ಸೇನಾ ನೆರವು ನೀಡುವುದಾಗಿ ಬ್ರಿಟನ್​ ಘೋಷಿಸಿದೆ.

ರಷ್ಯಾ ಸೇನೆ ವಿಶೇಷ ಸೇನಾ ಕಾರ್ಯಾಚರಣೆ ಹೆಸರಿನಲ್ಲಿ ನಾಗರಿಕರ ಮೇಲೆ ದಾಳಿ ನಡೆಸುತ್ತಿದೆ. ಮರಿಯುಪೋಲ್​ ಸುತ್ತಮುತ್ತ ನಾಗರಿಕರಿಗೆ ಚಿತ್ರಹಿಂಸೆ ನೀಡಿ ಹತ್ಯೆ ಮಾಡಿರುವುದಕ್ಕೆ ಸಾಕ್ಷ$್ಯಗಳು ಬಹಿರಂಗವಾಗಿವೆ ಎಂದು ಯೂಕ್ರೇನ್​ ಮತ್ತು ಅದರ ಪಾಶ್ಚಾತ್ಯ ಮಿತ್ರ ರಾಷ್ಟ್ರಗಳು ಆರೋಪಿಸಿವೆ. ಆದರೆ, ಈ ಆರೋಪವನ್ನು ಮಾಸ್ಕೋ ನಿರಾಕರಿಸಿದೆ.

ಮರಿಯುಪೋಲ್​ ವಶಕ್ಕೆ ಯತ್ನ
ಯೂಕ್ರೇನ್​ನ ಬಂದರು ನಗರ ಮರಿಯುಪೋಲ್​ ಬಹುತೇಕ ನಾಶವಾಗಿದ್ದು, ರಷ್ಯಾ ವಶದಲ್ಲಿದೆ. ಈ ನಗರದ ಸ್ಟೀಲ್​ ಟಕ ಆವರಣದಲ್ಲಿ ನಾಗರಿಕರು ಮತ್ತು ಯೂಕ್ರೇನ್​ ಸೇನೆ ಆಶ್ರಯ ಪಡೆದುಕೊಂಡಿದ್ದು, ರಷ್ಯಾ ಸೇನೆಗೆ ತೀವ್ರ ಪ್ರತಿರೋಧ ತೋರಿದ್ದಾರೆ.

ಇವರನ್ನೆಲ್ಲ ಹೊರ ಹಾಕಿ ಅಥವಾ ಶರಣಾಗುವಂತೆ ಮಾಡಿ ಮರಿಯುಪೋಲ್​ ಅನ್ನು ಸಂಪೂರ್ಣವಾಗಿ ವಶಕ್ಕೆ ತೆಗೆದುಕೊಳ್ಳಲು ರಷ್ಯಾ ಸೇನೆ ಪ್ರಯತ್ನ ಮುಂದುವರಿಸಿದೆ.

ಎರಡನೇ ವಿಶ್ವ ಮಹಾಯುದ್ಧದಲ್ಲಿ 1945 ಮೇ 8ರಂದು ಗೆಲುವು ಸಾಧಿಸಿದ ನೆನಪಿಗಾಗಿ ವಿಕ್ಟರಿ ಇನ್​ ಯುರೋಪ್​ ಡೇ ಆಚರಿಸಲಾಗುತ್ತದೆ. ಇದಕ್ಕೆ ಪೂರ್ವಭಾವಿಯಾಗಿ ಜಿ7 ನಾಯಕರು ವರ್ಚುವಲ್​ ಆಗಿ ಮಾತುಕತೆ ನಡೆಸಿದ ವೇಳೆ, ಬ್ರಿಟನ್​ ಈ ನೆರವನ್ನು ಖಾತರಿಪಡಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...