Sunday, December 14, 2025
Sunday, December 14, 2025

ಮುಂಬೈನಲ್ಲಿ ಧ್ವನಿವರ್ಧಕ ಶಬ್ದ ಕಡಿಮೆಗೊಳಿಸಿದ ಮಸೀದಿಗಳ ವ್ಯವಸ್ಥಾಪಕರು

Date:

ಆಜಾನ್ ವೇಳೆ ಧ್ವನಿವರ್ಧಕಗಳಿಂದ ಹೊರಡುವ ಶಬ್ದವನ್ನು ಕಡಿಮೆ ಮಾಡಬೇಕು ಎಂದು ಹಿಂದೂ ಸಂಘಟನೆಗಳು ಬೇಡಿಕೆ ಇಟ್ಟ ಬೆನ್ನಲ್ಲೇ, ಮುಂಬೈನ ಹಲವಾರು ಮಸೀದಿಗಳು ಧ್ವನಿವರ್ಧಕದ ಶಬ್ದವನ್ನು ಕಡಿಮೆ ಮಾಡಿವೆ.

ಈ ವಿಷಯದಲ್ಲಿ ಪೊಲೀಸರು ಮಧ್ಯಪ್ರವೇಶಿಸಿದೆ. ಧ್ವನಿವರ್ಧಕಗಳ ಶಬ್ದವನ್ನು ಕಡಿಮೆ ಮಾಡುವುದಾಗಿ ಮಸೀದಿಗಳು ತಿಳಿಸಿವೆ ಎಂದು ಮೂಲಗಳು ತಿಳಿಸಿವೆ.

ಆಜಾನ್‌ನ ಶಬ್ದವು ಈಗ ರಾಜಕೀಯ ವಿಷಯವಾಗಿದೆ. ಆದರೆ, ಇದು ಕೋಮು ಬಣ್ಣ ಪಡೆಯುವುದು ನನಗೆ ಇಷ್ಟ ಇಲ್ಲ ಎಂದು ನಗರದಲ್ಲಿರುವ ಜುಮಾ ಮಸೀದಿಯ ಮುಖ್ಯ ಬೋಧಕ ಮೊಹಮ್ಮದ್‌ ಅಶ್ಫಾಕ್ ಕಾಜಿ ಹೇಳಿದ್ದಾರೆ.

ಸ್ಥಳೀಯ ಹಿಂದೂ ಮುಖಂಡರೊಬ್ಬರ ದೂರು ಸಲ್ಲಿಸಿದ ಹಿನ್ನೆಲೆಯಲ್ಲಿ, 900ಕ್ಕೂ ಅಧಿಕ ಮಸೀದಿಗಳು ಆಜಾನ್‌ ಸಮಯದಲ್ಲಿ ಧ್ವನಿವರ್ಧಕದ ಶಬ್ದವನ್ನು ಕಡಿಮೆ ಮಾಡಿವೆ ಎಂದು ಪ್ರಭಾವಿ ಇಸ್ಲಾಮಿಕ್ ವಿದ್ವಾಂಸರಲ್ಲೊಬ್ಬರಾಗಿರುವ ಕಾಜಿ ಹೇಳಿದ್ದಾರೆ.

ಧ್ವನಿವರ್ಧಕ ಬಳಕೆ ವಿಷಯದಲ್ಲಿ ನ್ಯಾಯಾಲಯದ ಆದೇಶವನ್ನು ಗೌರವಿಸಬೇಕು. ಯಾವುದೇ ಸಂದರ್ಭದಲ್ಲಿಯೂ ರಾಜ್ಯದಲ್ಲಿ ಕೋಮು ಸಂಘರ್ಷಕ್ಕೆ ಅವಕಾಶ ನೀಡುವುದಿಲ್ಲ ಎಂದು ಮುಂಬೈನ ಹಿರಿಯ ಪೊಲೀಸ್ ಅಧಿಕಾರಿ ವಿ.ಎನ್‌.ಪಾಟೀಲ ಹೇಳಿದ್ದಾರೆ.

ಮಹಾರಾಷ್ಟ್ರ ನವನಿರ್ಮಾಣ ಸೇನಾದ ಮುಖಂಡ ರಾಜ್‌ ಠಾಕ್ರೆ ಅವರು, ಮಸೀದಿ ಹಾಗೂ ಇತರ ಸ್ಥಳಗಳಲ್ಲಿನ ಧ್ವನಿವರ್ಧಕಗಳ ಶಬ್ದವು ನಿಯಮಗಳಂತೆ ಮಿತಿಯಲ್ಲಿರುವಂತೆ ನೋಡಿಕೊಳ್ಳಬೇಕು ಎಂದು ಕಳೆದ ಏಪ್ರಿಲ್‌ನಲ್ಲಿ ಆಗ್ರಹಿಸಿದ್ದರು. ಈ ಬಗ್ಗೆ ಕ್ರಮ ಕೈಗೊಳ್ಳದಿದ್ದಲ್ಲಿ ಸಂಘಟನೆಯ ಕಾರ್ಯಕರ್ತರು ಮಸೀದಿಗಳ ಮುಂದೆ ಪ್ರತಿಭಟನೆ ರೂಪದಲ್ಲಿ ಹಿಂದೂ ಶ್ಲೋಕಗಳನ್ನು ಪಠಿಸುವುದಾಗಿ ಎಚ್ಚರಿಸಿದ್ದರು.

ಠಾಕ್ರೆ ಅವರ ಮಾತುಗಳನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಇದರ ಬೆನ್ನಲ್ಲೇ, ಹಿರಿಯ ಪೊಲೀಸ್‌ ಅಧಿಕಾರಿಗಳು ಕಾಜಿ ಅವರೂ ಸೇರಿದಂತೆ ಧರ್ಮ ಗುರುಗಳ ಸಭೆ ನಡೆಸಿದ್ದರು. ಧ್ವನಿವರ್ಧಕಗಳ ಶಬ್ದವನ್ನು ಕಡಿಮೆ ಮಾಡುವ ಬಗ್ಗೆ ಅವರೊಂದಿಗೆ ಚರ್ಚಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...