Saturday, March 28, 2026
Saturday, March 28, 2026

ಭಾರತೀಯ ರೈಲುಗಳಲ್ಲಿ ರಾತ್ರಿ ಪ್ರಯಾಣದಲ್ಲಿ ಮೊಬೈಲ್ ಲೌಡ್ ಸ್ಪೀಕರ್ ನಿಷೇಧ

Date:

ರೈಲ್ವೆ ಪ್ರಯಾಣಿಕರು ರಾತ್ರಿ ಪ್ರಯಾಣದ ಸಂದರ್ಭದಲ್ಲಿ ಮೊಬೈಲ್‌ನಲ್ಲಿ ಏರಿದ ಧ್ವನಿಯಲ್ಲಿ ಮಾತನಾಡುವುದನ್ನು ಅಥವಾ ಲೌಡ್‌ ಸ್ಪೀಕರ್‌ ನಲ್ಲಿ ಸಂಗೀತ ಕೇಳುವುದನ್ನು ಭಾರತೀಯ ರೈಲ್ವೆ ನಿಷೇಧಿಸಿದೆ.

ಪ್ರಯಾಣಿಕರಿಗೆ ಆರಾಮದಾಯಕ ಪ್ರಯಾಣವನ್ನು ಖಾತರಿಪಡಿಸುವ ಉದ್ದೇಶದಿಂದ ಭಾರತೀಯ ರೈಲ್ವೆ ಹೊಸದಾಗಿ ಪ್ರಯಾಣಿಕ ಸ್ನೇಹಿ ಮಾರ್ಗಸೂಚಿಗಳನ್ನು ಹೊರಡಿಸಿದೆ.

ಅದರ ಪ್ರಕಾರ, ಪ್ರಯಾಣಿಕರು ದೂರು ನೀಡಿದರೆ, ಆ ಸಮಸ್ಯೆ ಪರಿಹರಿಸುವ ಜವಾಬ್ದಾರಿ ರೈಲಿನಲ್ಲಿರುವ ಸಿಬ್ಬಂದಿಯದ್ದಾಗಿರುತ್ತದೆ.

ರೈಲಿನಲ್ಲಿರುವ ರೈಲ್ವೆ ತಪಾಸಣೆ ಸಿಬ್ಬಂದಿ, ಆರ್‌ಪಿಎಫ್, ಎಲೆಕ್ಟ್ರಿಷಿಯನ್, ಅಡುಗೆ ಮತ್ತು ನಿರ್ವಹಣೆ ಸಿಬ್ಬಂದಿ ಈ ಜವಾಬ್ದಾರಿಯನ್ನು ಹೊಂದಿರುತ್ತಾರೆ ಎಂದು ರೈಲ್ವೆ ತಿಳಿಸಿದೆ.

ರಾತ್ರಿ 10 ಗಂಟೆಯ ಬಳಿಕ ಪ್ರಯಾಣಿಕರು ಮೊಬೈಲ್‌ನಲ್ಲಿ ಗಟ್ಟಿ ಧ್ವನಿಯಲ್ಲಿ ಮಾತನಾಡುತ್ತಿರುವ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ರೈಲ್ವೆ ಸಚಿವಾಲಯ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ. ಈ ಷರತ್ತುಗಳ ನಡುವೆಯೂ 60 ವರ್ಷ ಮೇಲಿನ ಹಿರಿಯ ನಾಗರಿಕರು, ಅಂಗವಿಕಲರು ಮತ್ತು ಒಂಟಿ ಮಹಿಳಾ ಪ್ರಯಾಣಿಕರಿಗೆ ರೈಲ್ವೆ ಸಿಬ್ಬಂದಿ ಅಗತ್ಯ ನೆರವು ನೀಡುತ್ತಾರೆ.

ಹೊಸ ಮಾರ್ಗಸೂಚಿಗಳ ಕುರಿತು ರೈಲ್ವೆ ವಲಯ ಮಟ್ಟದಲ್ಲಿ, ಪ್ರಯಾಣಿಕರಿಗೆ ಜಾಗೃತಿ ಮೂಡಿಸಬೇಕು. ರೈಲಿನಲ್ಲಿ ಏರಿದ ಧ್ವನಿಯಲ್ಲಿ ಮೊಬೈಲ್‌ನಲ್ಲಿ ಮಾತನಾಡದಂತೆ ಹಾಗೂ ಇಯರ್‌ ಫೋನ್‌ ಇಲ್ಲದೆ ಸಂಗೀತ ಕೇಳದಂತೆ ಪ್ರಯಾಣಿಕರರಿಗೆ ಸಲಹೆಗಳನ್ನು
ಟಿಕೆಟ್‌ ಪರಿಶೀಲಕರು ಮತ್ತು ಇತರ ರೈಲ್ವೆ ಸಿಬ್ಬಂದಿ ನೀಡಬೇಕು ಎಂದು ರೈಲ್ವೆ ಸಚಿವಾಲಯ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ಆಕಸ್ಮಿಕ ಕೆರೆಗೆ ಕಾಲುಜಾರಿ ಬಿದ್ದು SSLC ವಿದ್ಯಾರ್ಥಿ ಸಾವು

Breaking News ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಸಮಿಪದ...

CM Siddharamaih ಸರ್ಕಾರ ಸಾಲವನ್ನು ನಿಯಮದ ಮಿತಿಯೊಳಗೆ ಮಾಡಿದೆ- ಮುಖ್ಯಮಂತ್ರಿ ಸಿದ್ಧರಾಮಯ್ಯ.

CM Siddharamaih ಯಾವುದೇ ರಾಜ್ಯ ಅಥವಾ ದೇಶವಾಗಲಿ ಸಾಲ ಮಾಡದಿರಲು ಸಾಧ್ಯವಿಲ್ಲ, ಜನ...

Shri Mahavir Jayanti ಮಾರ್ಚ್ 30. ಶ್ರೀಮಹಾವೀರ ಜಯಂತಿ ಆಚರಣೆಗೆ ಜಿಲ್ಲಾಡಳಿತ ಸಜ್ಜು.

Shri Mahavir Jayanti ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ...

Davangere By Election ಸಾದಿಕ್ ಪೈಲ್ವಾನ್ ಚುನಾವಣೆ ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ- ಮುಖ್ಯಮಂತ್ರಿ ಸಿದ್ಧಾರಾಮಯ್ಯ.

Davangere By Election ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ...